AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore Ayodhya Train: ಮಂಗಳೂರಿನಿಂದ ಅಯೋಧ್ಯೆಗೆ ರೈಲು: ಇಲ್ಲಿದೆ ವೇಳಾಪಟ್ಟಿ

ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯಮತ್ತೂರು-ದರ್ಶನ ನಗರ್‌-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ಗುರುವಾರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ 6 ಗಂಟೆಗೆ ಅಯೋಧ್ಯೆಗೆ ತೆರಳಲಿದೆ. ಫೆ. 11 ರ ಮುಂಜಾನೆ ಅಯೋಧ್ಯೆಯ ದರ್ಶನ್ ನಗರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ.

Mangalore Ayodhya Train: ಮಂಗಳೂರಿನಿಂದ ಅಯೋಧ್ಯೆಗೆ ರೈಲು: ಇಲ್ಲಿದೆ ವೇಳಾಪಟ್ಟಿ
ಅಯೋಧ್ಯೆಗೆ ರೈಲು
TV9 Web
| Edited By: |

Updated on:Feb 08, 2024 | 10:31 PM

Share

ಮಂಗಳೂರು, ಫೆಬ್ರವರಿ 8: ತಮಿಳುನಾಡಿನ ಕೊಯಮತ್ತೂರಿನಿಂದ ಅಯೋಧ್ಯೆ (Ayodhya) ರಾಮಮಂದಿರಕ್ಕೆ ತೆರಳಲು ವಿಶೇಷ ರೈಲು ಸಂಚಾರ ಗುರುವಾರ ಮಂಗಳೂರು ಜಂಕ್ಷನ್ ತಲುಪಲಿದೆ. ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯಮತ್ತೂರು-ದರ್ಶನ ನಗರ್‌-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ಗುರುವಾರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ 6 ಗಂಟೆಗೆ ಅಯೋಧ್ಯೆಗೆ ತೆರಳಲಿದೆ. ಫೆ. 11 ರ ಮುಂಜಾನೆ ಅಯೋಧ್ಯೆಯ ದರ್ಶನ್ ನಗರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ. ಫೆಬ್ರವರಿ 12 ರಂದು ಬೆಳಿಗ್ಗೆ 8 ಗಂಟೆಗೆ ಅಯೋಧ್ಯೆಯಿಂದ ಹಿಂದಿರುಗುವ ಈ ರೈಲು ಫೆಬ್ರವರಿ 14 ರ ಸಂಜೆ ಮಂಗಳೂರು ಜಂಕ್ಷನ್​ಗೆ ಆಗಮಿಸಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಈಗಾಗಲೇ ಬೆಂಗಳೂರಿನಿಂದ ಅಯೋಧ್ಯೆಗೆ ಕಾಶಿ-ತಮಿಳ್‌ ಸಂಗಮ ಎಕ್ಸ್‌ಪ್ರೆಸ್‌ ಆರಂಭವಾಗಿದೆ. ವಿಶಾಖಪಟ್ಟಣ- ಗೋರಖಪುರ ಎಕ್ಸ್‌ಪ್ರೆಸ್‌, ನಾಗರಕೋಯಿಲ್‌ (ತಮಿಳುನಾಡು)-ಅಯೋಧ್ಯೆ ಎಕ್ಸ್‌ಪ್ರೆಸ್‌ ಆರಂಭ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಅಯೋಧ್ಯೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನೇರ ಸಂಪರ್ಕ ವ್ಯವಸ್ಥೆ ಇಲ್ಲ. ಕರಾವಳಿ ಭಾಗದವರು ಮುಂಬಯಿಗೆ ತೆರಳಿ ಅಲ್ಲಿಂದ ಅಯೋಧ್ಯೆಗೆ ತೆರಳಬೇಕು.

ಇದನ್ನೂ ಓದಿ: Palace on Wheels: ಅಯೋಧ್ಯೆ ಯಾತ್ರೆ ಪ್ರಾರಂಭಿಸಿದ ವಿಶ್ವದ ಐಷಾರಾಮಿ ರೈಲು; 42 ವರ್ಷಗಳ ಬಳಿಕ ರೈಲಿನ ಮಾರ್ಗ ಬದಲಾವಣೆ

ಇಲ್ಲವೇ ಬೆಂಗಳೂರಿಗೆ ತೆರಳಿ ರೈಲುಗಳನ್ನು ಬಳಸಬೇಕು. ಇದರಿಂದ ಸಮಯ ವ್ಯರ್ಥದ ಜತೆಗೆ ವೆಚ್ಚವೂ ಹೆಚ್ಚಳವಾಗಲಿದೆ. ನಾಗರಕೋಯಿಲ್‌ (ತಮಿಳುನಾಡು) -ಅಯೋಧ್ಯೆ ಎಕ್ಸ್‌ಪ್ರೆಸ್‌ ಮಂಗಳೂರು ಜಂಕ್ಷನ್‌ ನಿಲ್ದಾಣದ ಮೂಲಕ ಹಾದುಹೋಗಲಿದ್ದರೂ ಇದರಿಂದ ಕರಾವಳಿಯ ಪ್ರಯಾಣಿಕರಿಗೆ ಪ್ರಯೋಜನವಿಲ್ಲ.

ಈ ರೈಲು ಕೇರಳ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಹೆಚ್ಚಿನ ಸೀಟುಗಳನ್ನು ಅಲ್ಲಿನವರೇ ಕಾಯ್ದಿರಿಸುವುದರಿಂದ ಕರಾವಳಿಗರಿಗೆ ಸೀಟು ಸಿಗುವುದೇ ಅತ್ಯಲ್ಪ. ಕನಿಷ್ಠ ವಾರದಲ್ಲಿ ಒಂದು ದಿನವಾದರೂ ಕರಾವಳಿ ಭಾಗದಿಂದ ಉಡುಪಿ ಮಾರ್ಗವಾಗಿ ಅಯೋಧ್ಯೆಗೆ ನೇರ ರೈಲು ಸಂಪರ್ಕ ಒದಗಿಸಬೇಕಿದೆ.

ಇದನ್ನೂ ಓದಿ: ಅಯೋಧ್ಯೆ ರೈಲು ನಿಲ್ದಾಣದ ಹೆಸರು ಅಯೋಧ್ಯಾ ಧಾಮ ಎಂದು ಬದಲಾವಣೆ

ಪ್ರಸ್ತುತ ಅಯೋಧ್ಯಾ ಧಾಮ್, ಅಯೋಧ್ಯಾ ಕಂಟೋನ್ಮೆಂಟ್ ಮತ್ತು ಸಲಾರ್‌ಪುರ ನಿಲ್ದಾಣಗಳಲ್ಲಿನ ಯಾರ್ಡ್‌ಗಳನ್ನು ಮರುರೂಪಿಸುತ್ತಿದೆ. ಹೀಗಾಗಿ ಈ ಸ್ಥಳಗಳಿಂದ ಬೆಂಗಳೂರಿಗೆ ತೆರಳುವ ಎರಡು ರೈಲುಗಳನ್ನು ಬೇರೆಡೆಯಿಂದ ಸಂಚರಿಸುವಂತೆ ಮಾಡಲಾಗಿದೆ. ಯಾರ್ಡ್ ಪುನರ್ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ.

ಅಯೋಧ್ಯೆಗೆ ರೈಲುಗಳನ್ನು ಆರಂಭಿಸಿದ ನಂತರ, ಐಆರ್​ಸಿಟಿಸಿಯು ಕರ್ನಾಟಕ ಭಾರತ್ ಗೌರವ್ ಯಾತ್ರಾ ರೈಲುಗಳನ್ನು ನಿಲ್ಲಿಸಲಿದೆ ಎಂದು ಮೂಲಗಳು ತಿಳಿಸಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:30 pm, Thu, 8 February 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ