AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ

ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಡೆದ 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ಚಿನ್ನದ ವಂಚನೆ ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಸಿದ್ದಿಕ್ ಎಂಬ ವ್ಯಕ್ತಿ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ
ನಕಲಿ ಚಿನ್ನ, ಬ್ಯಾಂಕ್​ ಪತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Dec 25, 2024 | 10:14 AM

Share

ಮಂಗಳೂರು, ಡಿಸೆಂಬರ್​ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ (Mangaluru) ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ 16 ಶಾಖೆ ಹೊಂದಿದೆ. ಮಂಗಳೂರಿನ ಪಡೀಲ್​ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್​ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬ್ಯಾಂಕ್​ನ ಸರಪ ವಿವೇಕ್ ಆಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್​ಗಾಗಿ ಹುಡುಕಾಟ ಮುಂದುವರೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: 4 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ

ಪ್ರಕರಣ ಸಂಬಂಧ ದೂರುದಾರ ಲೋಕನಾಥ್.ಡಿ ಮಾತನಾಡಿ, ಅಬೂಬಕ್ಕರ್ ಸಿದ್ದಿಕ್ ಮೊದಲಿನಿಂದಲೂ ಬ್ಯಾಂಕ್​ನ ಗ್ರಾಹಕರಾಗಿದ್ದರು. 2023ರ ನವೆಂಬರ್ ತಿಂಗಳಿನಲ್ಲಿ ಒಂದೇ ರೀತಿಯ 500 ನಕಲಿ ಚಿನ್ನದ ಬಳೆ ಅಡವಿಟ್ಟು, ಸಾಲ ಪಡೆದಿದ್ದಾರೆ. ಸಾಲವನ್ನು ಮೂರು ತಿಂಗಳಲ್ಲಿ ತೀರಿಸಬೇಕಿತ್ತು ಎಂದು ಹೇಳಿದರು.

ಆದರೆ, ಸಾಲ ತೀರಸದೆ ಇದ್ದಾಗ, ಬ್ಯಾಂಕ್​ನ ಪ್ರಭಾರ ಮ್ಯಾನೇಜರ್​ ಅವರು ಅನುಮಾನಗೊಂಡು ಬೇರೆಯವರಿಂದ ಮರು ತಪಾಸಣೆ ನಡೆಸಿದಾಗ ಚಿನ್ನ ನಕಲಿ ಎಂದು ಗೊತ್ತಾಗಿದೆ. ತಕ್ಷಣ ಜನರಲ್ ಮ್ಯಾನೇಜರ್ ಸರಫ್​ ಅವರಿಗೆ ಪತ್ರ ಬರೆದಿದ್ದಾರೆ. ಸರಿಯಾಗಿ ಚಿನ್ನವನ್ನು ಪರೀಕ್ಷೆ ಮಾಡದ ಕಾರಣ ಬ್ಯಾಂಕ್​ಗೆ 2 ಕೋಟಿ ರೂಪಾಯಿಗೂ ಅಧಿಕ ನಷ್ಟ ಆಗಿದೆ. ನೀನು‌ ಅದನ್ನು ತಕ್ಷಣ ಪಾವತಿಸುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ