AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆಯೇ ಎರಡೂವರೆ ಗಂಟೆ ನೀರಿನಲ್ಲಿ ತೇಲಿದ ಬಾಲಕ – ನೋಬಲ್ ವರ್ಲ್ಡ್ ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ

ಕಲಿಕೆಯ ಹಂತದಲ್ಲಿ ಶಫಿನ್‌ನಲ್ಲಿದ್ದ ಈಜು ಪ್ರತಿಭೆಯನ್ನು ಅನಿರೀಕ್ಷಿತವಾಗಿ ಕಂಡುಕೊಂಡೆ. ಗಮನಾರ್ಹವಾದ ಪ್ರಾವೀಣ್ಯತೆಯನ್ನು ಪ್ರದರ್ಶಿಸುತ್ತಿದ್ದ. ತರಬೇತಿ ನಂತರ ಈಗ ದಾಖಲೆ ಮಾಡಿರೋದು ಸಂತೋಷ ತಂದಿದೆ ಅಂತಾ ಕೋಚ್ ಆರೋಮಲ್ ಹೇಳಿದ್ದಾರೆ.

ಮುಂಜಾನೆಯೇ ಎರಡೂವರೆ ಗಂಟೆ ನೀರಿನಲ್ಲಿ ತೇಲಿದ ಬಾಲಕ - ನೋಬಲ್ ವರ್ಲ್ಡ್  ರೆಕಾರ್ಡ್ಸ್‌ಗೆ​ ಎಂಟ್ರಿ ಕೊಟ್ಟ
ಮುಂಜಾನೆಯೇ ಎರಡೂವರೆ ಗಂಟೆ ನೀರಿನಲ್ಲಿ ತೇಲಿದ ಬಾಲಕ - ವರ್ಲ್ಡ್ ರೆಕಾರ್ಡ್​​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 17, 2024 | 2:56 PM

Share

ಕರಾವಳಿಯಲ್ಲಿ ಸಮುದ್ರವಿದೆ. ಇಲ್ಲಿನ ಬಹುತೇಕರಿಗೆ ಈಜು ಹುಟ್ಟುತ್ತಾನೆ ಬಂದಿರುತ್ತೆ. ಆದ್ರೆ ಇಲ್ಲೊಬ್ಬ ಬಾಲಕ ಈಜನ್ನು ಶಾಲೆಯಲ್ಲಿ ಕಲಿತು ಕೇವಲ ಈಜೋದು ಮಾತ್ರವಲ್ಲದೇ ನೀರಿನಲ್ಲಿ ತೇಲುವ ವಿದ್ಯೆಯನ್ನೂ ಕರಗತ ಮಾಡಿಕೊಂಡಿದ್ದಾನೆ. ಅಷ್ಟೆ ಅಲ್ಲ. ಬರೋಬ್ಬರಿ ಎರಡೂವರೆ ಗಂಟೆ ನೀರಿನಲ್ಲಿ ತೇಲೊ ಮೂಲಕ ನೊಬೆಲ್ ಬುಕ್ ಆಫ್ ರೆಕಾರ್ಡ್ ಗೆ ಎಂಟ್ರಿ ಕೊಟ್ಟಿದ್ದಾನೆ. ಈ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ. ಹೀಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ತೇಲುವ ವಿದ್ಯಾರ್ಥಿಯ ಹೆಸರು ಶಫಿನ್ ಮುಸ್ತಾಫಾ. ಮಂಗಳೂರಿನ ಜೆಪ್ಪಿನಮೊಗರು ಬಳಿಯ ಪ್ರೆಸ್ಟೀಜ್ ಇಂಟರ್ನಾಶನಲ್ ಶಾಲೆ ವಿದ್ಯಾರ್ಥಿ. 8ನೇ ತರಗತಿ ಓದುತ್ತಿರೋ ಈತ ಈಜುವುದಲ್ಲಿ ಎಕ್ಸಪರ್ಟ್. ಕೇವಲ ಈಜೋದು ಮಾತ್ರವಲ್ಲ, ನೀರಿನ ಮೇಲೆ ಕೈಕಾಲು ಆಡಿಸದೆ ತೇಲಬಲ್ಲ ಚತುರ ಈತ.

ಮಂಗಳೂರಿನ ಶಫಿನ್ ಮುಸ್ತಫಾ 2 ಗಂಟೆ 30 ನಿಮಿಷ 13 ಸೆಕೆಂಡುಗಳ ಕಾಲ ನೀರಿನ ಮೇಲೆ ತೇಲುವ ಮೂಲಕ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಎಂಟ್ರಿ ಕೊಟ್ಟಿದ್ದಾನೆ. ಮುಂಜಾನೆ 5.30 ರಿಂದ ತೇಲಲು ಆರಂಭಿಸಿದ 14 ವರ್ಷದ ಈ ವಿದ್ಯಾರ್ಥಿ ಈ ದಾಖಲೆಯನ್ನು ನಿರ್ಮಿಸಿದ್ದಾನೆ. ಶಫಿನ್ ಆರೋಮಲ್ ಎಂಬುವವರಿಗೆ ಈ ತರಬೇತಿ ಪಡೆದಿದ್ದಾನೆ. ಸಾಧನೆ ಮಾಡಲು ಬೆಂಬಲ ಮತ್ತು ಮಾರ್ಗದರ್ಶನ ನೀಡಿದ ಶಿಕ್ಷಕರು ಮತ್ತು ಪ್ರೆಸ್ಟೀಜ್ ಇಂಟರ್​​ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಗೆ ಶಫೀನ್ ಧನ್ಯವಾದ ಹೇಳಿದ್ದಾನೆ.

ಇನ್ನು ಕೋಚ್ ಆರೋಮಲ್ ಅವರು ಅನಿರೀಕ್ಷಿತವಾಗಿ, ನಾನು ಶಫಿನ್‌ನಲ್ಲಿ ಈಜು ಪ್ರತಿಭೆಯನ್ನು ಕಂಡುಕೊಂಡೆ. ಕಲಿಕೆಯ ಹಂತದಲ್ಲಿ, ಆತ ಗಮನಾರ್ಹವಾದ ಪ್ರಾವೀಣ್ಯತೆಯನ್ನು ಪ್ರದರ್ಶಿಸಿದ. ಆರಾಮವಾಗಿ 15-30 ನಿಮಿಷಗಳ ಕಾಲ ಈಜುತ್ತಿದ್ದ. ಆತನ ತರಬೇತಿ ಸಮಯವನ್ನು ವಿಸ್ತರಿಸಿದೆ. ಈಗ ದಾಖಲೆ ಮಾಡಿರೋದು ಸಂತೋಷ ತಂದಿದೆ ಅಂತಾ ಹೇಳಿದ್ದಾರೆ.

ಈ ಹಿಂದೆ 2023ರಲ್ಲಿ ಆಂಧ್ರಪ್ರದೇಶದ ಕರಣಂ ಸ್ನೇಹಿತ್ ಸಿಂಹ ಅವರು 2 ಗಂಟೆ 21 ನಿಮಿಷ 53 ಸೆಕೆಂಡ್‌ಗಳಲ್ಲಿ ಕ್ರಮಿಸಿದ್ದರು ಎಂದು ಡಾ.ಎಸ್.ಕೃಷ್ಣಮೂರ್ತಿ. ಕರ್ನಾಟಕದ ಡೈರೆಕ್ಟರ್, ನೊಬೆಲ್ ಬುಕ್ ಆಫ್ ರೆಕಾರ್ಡ್ ಅವರು ತಿಳಿಸಿದ್ದಾರೆ. ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಅಧಿಕಾರಿಗಳು, ಪೋಷಕರಾದ ಅಬ್ದುಲ್ ಲತೀಫ್ ಮತ್ತು ಸಫಿಯಾ ಬಾನು ಅವರು ದಾಖಲೆ ಮುರಿಯುವ ಕ್ಷಣಕ್ಕೆ ಸಾಕ್ಷಿಯಾದರು.

ಸದ್ಯ 15 ವರ್ಷದ ಒಳಗಿನ ಬಾಲಕರ ರೆಕಾರ್ಡ್ ನಲ್ಲಿ ಈ ದಾಖಲೆ ನಮೂದಾಗಿದೆ. ಇನ್ನು ಮುಂದೆ ಕೂಡ ಸಾಕಷ್ಟು ದಾಖಲೆಯನ್ನು ಮಾಡವ ಗುರಿಯನ್ನು ಇಟ್ಟುಕೊಂಡಿದ್ದಾನೆ ಶಫಿನ್ ಮುಸ್ತಫಾ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!