ಮಂಗಳೂರು: ಅತಿದೊಡ್ಡ ಡ್ರಗ್ಸ್​ ಜಾಲ ಪತ್ತೆ; 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ​ವಶ

ಕರ್ನಾಟಕದ ವಿವಿಧಡೆ ಡಗ್ಸ್​ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬರೊಬ್ಬರಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್​ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು, ಅಕ್ಟೋಬರ್​ 08: ಮಂಗಳೂರು ಕೇಂದ್ರ ಅಪರಾಧ ವಿಭಾಗ (CCB)ದ ಪೊಲೀಸರು ಅತಿದೊಡ್ಡ ಡ್ರಗ್ (Drug)​ ಜಾಲ ಪತ್ತೆ ಹಚ್ಚಿದ್ದಾರೆ. ರಾಜ್ಯದ ವಿವಿಧಡೆ ಡ್ರಗ್​​ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು (Nigeria) ಮಂಗಳೂರು (Mangaluru) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬರೋಬ್ಬರಿ ಆರು ಕೆ.ಜಿಯ ಆರು ಕೋಟಿ ರೂ. ಮೌಲ್ಯದ ಎಂಡಿಎಂ ಡ್ರಗ್ ವಶಪಡಿಸಿಕೊಂಡಿದ್ದಾರೆ. ಇದು ಮಂಗಳೂರು ನಗರ ಇತಿಹಾಸದಲ್ಲೇ ಅತೀ ದೊಡ್ಡ ಕಾರ್ಯಾಚರಣೆಯಾಗಿದೆ.

ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ನೈಜೀರಿಯಾ ಪ್ರಜೆಯ ಕೈವಾಡ ಇರುವುದು ತಿಳಿದುಬಂದಿದೆ. ನೈಜೀರಿಯಾ ಪ್ರಜೆಯ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಆತ ಬೆಂಗಳೂರಿನಲ್ಲಿ ವಾಸವಿರುವುದು ತಿಳಿದಿದೆ. ಕೂಡಲೆ ಕಾರ್ಯಪ್ರವೃತರಾದ ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.

ನೈಜೀರಿಯಾ ಪ್ರಜೆ ಬಳಿ ಇದ್ದ 17 ಸಿಮ್ ಕಾರ್ಡ್​, ​ಆತನ ಪಾಸ್‌ಪೋರ್ಟ್ ಸಹಿತ ಎಲ್ಲ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ​ ಸ್ನೇಹಿತರು ಅರೆಸ್ಟ್​, 1 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಚಿಪ್ಸ್​​ ಪ್ಯಾಕೆಟ್​ಗಳಲ್ಲಿ ಡ್ರಗ್ಸ್​ ಪೂರೈಕೆ

ಆರೋಪಿ ಸಣ್ಣ ಸಣ್ಣ ಪ್ಯಾಕೆಟ್​ಗಳ ಮೂಲಕ ರಾಜ್ಯದ ಹಲವಡೆ ಡ್ರಗ್ಸ್​ ಪೂರೈಕೆ ಮಾಡುತ್ತಿದ್ದನು. ಚಿಪ್ಸ್, ಬಿಸ್ಕೆಟ್ ಮತ್ತು ಗುಟ್ಕಾ ಪ್ಯಾಕೆಟ್​ಗಳಲ್ಲಿ ಡ್ರಗ್ಸ್​ ಹಾಕುತ್ತಿದ್ದನು. ಬಳಿಕ ಈ ಪ್ಯಾಕೆಟ್​​ಗಳನ್ನು ಕಸ ಎಸೆಯುವ ಜಾಗದಲ್ಲಿ ಎಸೆಯುತ್ತಿದ್ದನು. ಬಳಿಕ ಪೆಡ್ಲರ್ ಅದರ ಫೋಟೊ ತೆಗೆದು ಪೂರೈಕೆದಾರನಿಗೆ ಕಳುಹಿಸುತ್ತಿದ್ದನು. ಅವರು ಅಲ್ಲಿಂದ ಪ್ಯಾಕೆಟ್​​ ಅನ್ನು ತೆಗೆದುಕೊಂಡು ಹೋಗುತ್ತಿದ್ದರು. ಮಂಗಳೂರು ನಗರದಲ್ಲಿದ್ದ 50ಕ್ಕೂ ಅಧಿಕ ಡ್ರಗ್ಸ್​​ ಪ್ಯಾಕೆಟ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Tue, 8 October 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us