AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ! ನಕಲಿ ದಾಖಲೆ ತಯಾರಿಸ್ತಿದ್ದವನ ಬಂಧನ

ಕಡಲತಡಿ ಮಂಗಳೂರಿನಲ್ಲೊಂದು ನಕಲಿ ಸಾಮ್ರಾಜ್ಯವೇ ಇತ್ತು. ಕಳೆದ ಮೂರು ವರ್ಷಗಳಿಂದ ಅದೆಷ್ಟೊ ನಕಲಿಗಳನ್ನು ಆತ ಹುಟ್ಟಿ ಹಾಕಿದ್ದಾನೆ. ದೂರದ ಬಾಂಗ್ಲದೇಶದವರಿಗೂ ಆತ ಕರಾವಳಿಯಲ್ಲಿ ನೆಲೆ ಕೊಡಿಸಿದ್ದ. ಸದ್ಯ ಆತ ಈಗ ಪೊಲೀಸರ ಅತಿಥಿಯಾಗುವ ಮೂಲಕ ಒಂದು ದೊಡ್ಡ ನಕಲಿ ಸಾಮ್ರಾಜ್ಯದ ಅನಾವರಣ ಆಗುತ್ತಿದೆ.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ! ನಕಲಿ ದಾಖಲೆ ತಯಾರಿಸ್ತಿದ್ದವನ ಬಂಧನ
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 07, 2023 | 9:00 PM

Share

ದಕ್ಷಿಣ ಕನ್ನಡ, ಅ.07: ಮಂಗಳೂರು ಪೊಲೀಸರು(Mangalore Police) ಒಂದು ನಕಲಿ ಸಾಮ್ರಾಜ್ಯದ ಅನಾವರಣ ಮಾಡಿದ್ದಾರೆ. ಮಂಗಳೂರಿನ ಬಿಕರ್ಣಕಟ್ಟೆಯ ಬಜ್ಜೋಡಿ ಬಳಿಯ ಇನ್ ಫ್ಯಾಟ್ ಮೇರಿ ಚರ್ಚ್ ಹತ್ತಿರದ ನಿವಾಸಿಯಾಗಿದ್ದ ಆರೋಪಿ ಬರ್ನಾಡ್ ರೋಶನ್ ಮೆಸ್ಕರೆನಸ್(41), ಕಳೆದ ಮೂರು ವರ್ಷಗಳಿಂದ ಕಂಕನಾಡಿ-ಪಂಪ್ವೆಲ್ ರಸ್ತೆಯ ವಿಶ್ವಾಸ್ ಕ್ರೌನ್ ಅಪಾರ್ಟ್ಮೆಂಟ್ ನ ನೆಲ ಅಂತಸ್ತಿನಲ್ಲಿರುವ ಹೆಲ್ಪ್ ಲೈನ್ ಮಂಗಳೂರು ಎನ್ನುವ ಶಾಪ್ ಇಟ್ಟಿದ್ದ. ಆಧಾರ್ ಕಾರ್ಡ್ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳನ್ನು ಮಾಡಿಕೊಡುತ್ತಿದ್ದ. ಆದ್ರೆ, ಮುಂದೆ ಇತನೇ ಎಲ್ಲಾ ರೀತಿಯ ನಕಲಿ ಐಡಿ(Fake ID)ಗಳನ್ನು ಮಾಡಿಕೊಡಲು ಮುಂದಾಗಿದ್ದ. ಬಾಂಗ್ಲದೇಶದಿಂದ ನುಸುಳಿ ಪಶ್ಚಿಮ ಬಂಗಾಳದಲ್ಲಿ ನೆಲೆನಿಂತು ಉದ್ಯೋಗಕ್ಕೆಂದು ಮಂಗಳೂರಿಗೆ ಬಂದು ನೆಲೆಸಿದವರಿಗೆ ಎಲ್ಲ ರೀತಿಯ ಕಾರ್ಡ್​ಗಳನ್ನು ಮಾಡಿಕೊಟ್ಟು, ಇಲ್ಲಿನ ವಾಸದ ದೃಢೀಕರಣ ಪತ್ರ ಕೊಡಿಸಿದ್ದಾನೆ.

ಇನ್ನು ಅದೆಷ್ಟೋ ಜನರು, ಇತ ಮಾಡಿಕೊಟ್ಟ ನಕಲಿ ದಾಖಲೆಯನ್ನು ಬಳಸಿ ರೆಕಾರ್ಡ್ ಕ್ರಿಯೇಟ್ ಮಾಡಿ ಹೆಸರಾಂತ ಬ್ಯಾಂಕ್ ಗಳಲ್ಲಿ ಲೋನ್ ಪಡೆದಿದ್ದಾರೆ. ಇದೀಗ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ‘ ಈತನಿಂದ ಲಾಭಪಡೆದ ಈತನ ಕಸ್ಟಮರ್​ಗಳ ಪತ್ತೆಗೆ ಮುಂದಾಗಿದ್ದೇವೆ. ಆರೋಪಿ ಏನೇನು ಮಾಡುತ್ತಿದ್ದ. ಈತನಿಗೆ ಓರಿಜಿನಲ್ ಹಾಗೆ ಫೇಕ್ ಐಡಿ ಮಾಡುವಲ್ಲಿ ಸರ್ಕಾರಿ ಅಧಿಕಾರಿಗಳ ಸಹಕಾರ ಇದೆಯಾ? ಎನ್ನುವ ಬಗ್ಗೆಯೂ  ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಈತನಿಂದ ಲಾಭ ಪಡೆದವರನ್ನು ಕರೆದು ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಕಲಿ ದಾಖಲಾತಿ ದಂಧೆ; ವಿದೇಶಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಆರೋಪಿ ಅರೆಸ್ಟ್

ಸದ್ಯ ಈತನಿಂದ ನಕಲಿ ಸರ್ಟಿಫಿಕೇಟ್, ಐಡಿ ಕಾರ್ಡ್​ಗಳನ್ನು ಮಾಡಿಸಿಕೊಂಡವರು ಅದೆಷ್ಟು ಜನರಿದ್ದಾರೋ ಗೊತ್ತಿಲ್ಲ. ಅದನ್ನು ಪಡೆದವರು ಅದೆಲ್ಲೆಲ್ಲಿ ಮೋಸ ಮಾಡುತ್ತಿದ್ದಾರೊ ಎನ್ನುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ