AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ: ಶಾಸಕ ವೇದವ್ಯಾಸ ಕಾಮತ್​ ಗಮನ ಸೆಳೆದ ಬಜರಂಗದಳ ಕಾರ್ಯಕರ್ತರು

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ತಡೆದಿರುವ ವಿಚಾರವಾಗಿ ವಿಎಚ್​​ಪಿ‌ ಮುಖಂಡರು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್​ರನ್ನು ಭೇಟಿಯಾಗಿದ್ದಾರೆ.

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ: ಶಾಸಕ ವೇದವ್ಯಾಸ ಕಾಮತ್​ ಗಮನ ಸೆಳೆದ ಬಜರಂಗದಳ ಕಾರ್ಯಕರ್ತರು
ಶಾಸಕ ವೇದವ್ಯಾಸ ಕಾಮತ್​
TV9 Web
| Updated By: ವಿವೇಕ ಬಿರಾದಾರ|

Updated on:Jul 26, 2022 | 2:57 PM

Share

ದಕ್ಷಿಣ ಕನ್ನಡ: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ತಡೆದಿರುವ ವಿಚಾರವಾಗಿ ವಿಎಚ್​​ಪಿ‌ ಮುಖಂಡರು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್​ರನ್ನು ಭೇಟಿಯಾಗಿದ್ದಾರೆ. ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವಹಿಂದೂ ಪರಿಷತ್ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ಹಿಂದೂ ಮುಖಂಡರು ಭೇಟಿಯಾಗಿದ್ದು, ಘಟನೆ ಸಂಬಂಧ ಶಾಸಕ ವೇದವ್ಯಾಸ ಕಾಮತ್​ ಅವರಿಗೆ ಮುಖಂಡರು ವಿವರಣೆ ನೀಡುತ್ತಿದ್ದಾರೆ.

ಅವಧಿ ಮೀರಿ ಕಾರ್ಯನಿರ್ವಹಿಸುತ್ತಿರುವ ಪಬ್​ಗಳ ಮೇಲೆ ಕ್ರಮ ಕೈಗೊಳ್ಳುವಂತೆ  ಆಗ್ರಹಿಸಿದ್ದಾರೆ. ಡ್ರಗ್ ಧಂದೆ ಮತ್ತು ಕಾಲೇಜು ವಿದ್ಯಾರ್ಥಿಗಳ ‌ಮೇಲೆ ಕಣ್ಣಿಡಲು ಮನವಿ ಮಾಡಿದ್ದಾರೆ. ಮನವಿ ಸ್ವೀಕರಿಸಿ ಪೊಲೀಸ್ ಇಲಾಖೆ ಸೂಚನೆ ನೀಡುವುದಾಗಿ ಶಾಸಕ ಕಾಮತ್ ಭರವಸೆ ನೀಡಿದ್ದಾರೆ.

ಈ ಸಂಬಂಧ ಶಾಸಕ ವೇದವ್ಯಾಸ ಕಾಮತ್  ಮಾತನಾಡಿ ಪಬ್ ದಾಳಿ ಮಾಡುವ ಮನಸ್ಸು ಅವರಿಗೆ ಇರಲಿಲ್ಲ, ಅದನ್ನು ಸಂಘಟನೆ ‌ಮಾಡಿಲ್ಲ. ಪೊಲೀಸ್ ಇಲಾಖೆ ಮೂಲಕ ಅಪ್ರಾಪ್ತ ವಯಸ್ಸಿನವರಿಗೆ ಬುದ್ದಿ ಹೇಳಿದ್ದಾರೆ. ಸಂಘಟನೆಯವರು ಈ ಮೂಲಕ ಪೊಲೀಸ್ ಇಲಾಖೆ ಜೊತೆ ಹೋಗಿದ್ದಾರೆ. ವಿದ್ಯಾರ್ಥಿಗಳು ಯಾವತ್ತೂ ಮನೆಯವರ ಒಪ್ಪಿಗೆ ಜೊತೆ ಈ ಕೆಲಸ ಮಾಡಲ್ಲ‌ ಎಂದರು.

ಮನೆಯವರು ಸಂಘಟನೆಯವರ ಗಮನಕ್ಕೆ ಇಂಥದ್ದನ್ನ ತಂದಿದ್ದಾರೆ. ಹೀಗಾಗಿ ದುಷ್ಟಟಕ್ಕೆ ಬಲಿಯಾದಾಗ ವಿಎಚ್​​ಪಿ ಹೋಗಿ ಮನವಿ ಮಾಡಬೇಕೆಂದಿಲ್ಲ. ಆದರೆ ಜವಾಬ್ದಾರಿಯಿಂದ ವಿಎಚ್​​ಪಿಯವರು ಪೊಲೀಸರ ಮೂಲಕ ಹೋಗಿದ್ದಾರೆ‌. ಅವರು ದಾಳಿ ಮಾಡಬೇಕಿದ್ದಾರೆ ಪೊಲೀಸರಿಗೆ ಮುಂಚಿತವಾಗಿ ತಿಳಿಸ್ತಾ ಇರಲಿಲ್ಲ. ಲವ್ ಜಿಹಾದ್, ಡ್ರಗ್ ಚಟಕ್ಕೆ ಬಲಿಯಾಗೋ ವಾತಾವರಣ ಸೃಷ್ಟಿಯಾಗಬಾರದು ಎಂದು ಸೂಚನೆ ನೀಡಿದರು.

ವಿದ್ಯಾರ್ಥಿಗಳು ಈ ಬಗ್ಗೆ ಗಮನ ಹರಿಸಬೇಕು, ಮನೆಯವರ ಕಷ್ಟ ಅರಿಯಬೇಕು‌. ಯಾವುದೇ ಕಾನೂನು ಬಾಹಿರ ಚಟುವಟಿಕೆ ಆದಾಗ ಕಮಿಷನರ್​  ಅವರಿಗೆ ತಿಳಿಸುತ್ತೇನೆ. ಅಪ್ರಾಪ್ತ ವಿದ್ಯಾರ್ಥಿಗಳ ಕಾನೂನು ಬಾಹಿರ ಚಟುವಟಿಕೆ ವಿರುದ್ದ ಪೊಲೀಸರ ಗಮನಕ್ಕೆ ತರ್ತೇನೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡಿದ ವಿಡಿಯೋ ವೈರಲ್; ಎನ್ಎಸ್ ಯುಐ  ಪ್ರತಿಭಟನೆ

ಶಿವಮೊಗ್ಗ: ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡಿದ ವಿಡಿಯೋ ವೈರಲ್ ವಿಚಾರವಾಗಿ ಶಿವಮೊಗ್ಗ ಎನ್ಎಸ್​​ಯುಐ ನೇತೃತ್ವದಲ್ಲಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ- ಕಾಲೇಜುಗಳ ಆವರಣದಲ್ಲಿ ಮಾದಕ ವಸ್ತು ಬಳಕೆ ಹೆಚ್ಚಳವಾಗುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯ  ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ. ಮಾದಕ ವಸ್ತು ಮಾರಾಟ ಮತ್ತು ಬಳಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿರುವ ಜೊತೆಗೆ ಗೃಹಸಚಿವರನ್ನು ಸಂಪುಟದಿಂದ ಕೈಬಿಡಲು ಎನ್​​ಎಸ್​ಯುಐ ಆಗ್ರಹಿಸಿದೆ.

Published On - 2:57 pm, Tue, 26 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ