AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ: ಶಾಸಕ ವೇದವ್ಯಾಸ ಕಾಮತ್​ ಗಮನ ಸೆಳೆದ ಬಜರಂಗದಳ ಕಾರ್ಯಕರ್ತರು

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ತಡೆದಿರುವ ವಿಚಾರವಾಗಿ ವಿಎಚ್​​ಪಿ‌ ಮುಖಂಡರು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್​ರನ್ನು ಭೇಟಿಯಾಗಿದ್ದಾರೆ.

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ: ಶಾಸಕ ವೇದವ್ಯಾಸ ಕಾಮತ್​ ಗಮನ ಸೆಳೆದ ಬಜರಂಗದಳ ಕಾರ್ಯಕರ್ತರು
ಶಾಸಕ ವೇದವ್ಯಾಸ ಕಾಮತ್​
TV9 Web
| Edited By: ವಿವೇಕ ಬಿರಾದಾರ|

Updated on:Jul 26, 2022 | 2:57 PM

Share

ದಕ್ಷಿಣ ಕನ್ನಡ: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ತಡೆದಿರುವ ವಿಚಾರವಾಗಿ ವಿಎಚ್​​ಪಿ‌ ಮುಖಂಡರು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್​ರನ್ನು ಭೇಟಿಯಾಗಿದ್ದಾರೆ. ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವಹಿಂದೂ ಪರಿಷತ್ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ಹಿಂದೂ ಮುಖಂಡರು ಭೇಟಿಯಾಗಿದ್ದು, ಘಟನೆ ಸಂಬಂಧ ಶಾಸಕ ವೇದವ್ಯಾಸ ಕಾಮತ್​ ಅವರಿಗೆ ಮುಖಂಡರು ವಿವರಣೆ ನೀಡುತ್ತಿದ್ದಾರೆ.

ಅವಧಿ ಮೀರಿ ಕಾರ್ಯನಿರ್ವಹಿಸುತ್ತಿರುವ ಪಬ್​ಗಳ ಮೇಲೆ ಕ್ರಮ ಕೈಗೊಳ್ಳುವಂತೆ  ಆಗ್ರಹಿಸಿದ್ದಾರೆ. ಡ್ರಗ್ ಧಂದೆ ಮತ್ತು ಕಾಲೇಜು ವಿದ್ಯಾರ್ಥಿಗಳ ‌ಮೇಲೆ ಕಣ್ಣಿಡಲು ಮನವಿ ಮಾಡಿದ್ದಾರೆ. ಮನವಿ ಸ್ವೀಕರಿಸಿ ಪೊಲೀಸ್ ಇಲಾಖೆ ಸೂಚನೆ ನೀಡುವುದಾಗಿ ಶಾಸಕ ಕಾಮತ್ ಭರವಸೆ ನೀಡಿದ್ದಾರೆ.

ಈ ಸಂಬಂಧ ಶಾಸಕ ವೇದವ್ಯಾಸ ಕಾಮತ್  ಮಾತನಾಡಿ ಪಬ್ ದಾಳಿ ಮಾಡುವ ಮನಸ್ಸು ಅವರಿಗೆ ಇರಲಿಲ್ಲ, ಅದನ್ನು ಸಂಘಟನೆ ‌ಮಾಡಿಲ್ಲ. ಪೊಲೀಸ್ ಇಲಾಖೆ ಮೂಲಕ ಅಪ್ರಾಪ್ತ ವಯಸ್ಸಿನವರಿಗೆ ಬುದ್ದಿ ಹೇಳಿದ್ದಾರೆ. ಸಂಘಟನೆಯವರು ಈ ಮೂಲಕ ಪೊಲೀಸ್ ಇಲಾಖೆ ಜೊತೆ ಹೋಗಿದ್ದಾರೆ. ವಿದ್ಯಾರ್ಥಿಗಳು ಯಾವತ್ತೂ ಮನೆಯವರ ಒಪ್ಪಿಗೆ ಜೊತೆ ಈ ಕೆಲಸ ಮಾಡಲ್ಲ‌ ಎಂದರು.

ಮನೆಯವರು ಸಂಘಟನೆಯವರ ಗಮನಕ್ಕೆ ಇಂಥದ್ದನ್ನ ತಂದಿದ್ದಾರೆ. ಹೀಗಾಗಿ ದುಷ್ಟಟಕ್ಕೆ ಬಲಿಯಾದಾಗ ವಿಎಚ್​​ಪಿ ಹೋಗಿ ಮನವಿ ಮಾಡಬೇಕೆಂದಿಲ್ಲ. ಆದರೆ ಜವಾಬ್ದಾರಿಯಿಂದ ವಿಎಚ್​​ಪಿಯವರು ಪೊಲೀಸರ ಮೂಲಕ ಹೋಗಿದ್ದಾರೆ‌. ಅವರು ದಾಳಿ ಮಾಡಬೇಕಿದ್ದಾರೆ ಪೊಲೀಸರಿಗೆ ಮುಂಚಿತವಾಗಿ ತಿಳಿಸ್ತಾ ಇರಲಿಲ್ಲ. ಲವ್ ಜಿಹಾದ್, ಡ್ರಗ್ ಚಟಕ್ಕೆ ಬಲಿಯಾಗೋ ವಾತಾವರಣ ಸೃಷ್ಟಿಯಾಗಬಾರದು ಎಂದು ಸೂಚನೆ ನೀಡಿದರು.

ವಿದ್ಯಾರ್ಥಿಗಳು ಈ ಬಗ್ಗೆ ಗಮನ ಹರಿಸಬೇಕು, ಮನೆಯವರ ಕಷ್ಟ ಅರಿಯಬೇಕು‌. ಯಾವುದೇ ಕಾನೂನು ಬಾಹಿರ ಚಟುವಟಿಕೆ ಆದಾಗ ಕಮಿಷನರ್​  ಅವರಿಗೆ ತಿಳಿಸುತ್ತೇನೆ. ಅಪ್ರಾಪ್ತ ವಿದ್ಯಾರ್ಥಿಗಳ ಕಾನೂನು ಬಾಹಿರ ಚಟುವಟಿಕೆ ವಿರುದ್ದ ಪೊಲೀಸರ ಗಮನಕ್ಕೆ ತರ್ತೇನೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡಿದ ವಿಡಿಯೋ ವೈರಲ್; ಎನ್ಎಸ್ ಯುಐ  ಪ್ರತಿಭಟನೆ

ಶಿವಮೊಗ್ಗ: ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡಿದ ವಿಡಿಯೋ ವೈರಲ್ ವಿಚಾರವಾಗಿ ಶಿವಮೊಗ್ಗ ಎನ್ಎಸ್​​ಯುಐ ನೇತೃತ್ವದಲ್ಲಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ- ಕಾಲೇಜುಗಳ ಆವರಣದಲ್ಲಿ ಮಾದಕ ವಸ್ತು ಬಳಕೆ ಹೆಚ್ಚಳವಾಗುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯ  ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ. ಮಾದಕ ವಸ್ತು ಮಾರಾಟ ಮತ್ತು ಬಳಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿರುವ ಜೊತೆಗೆ ಗೃಹಸಚಿವರನ್ನು ಸಂಪುಟದಿಂದ ಕೈಬಿಡಲು ಎನ್​​ಎಸ್​ಯುಐ ಆಗ್ರಹಿಸಿದೆ.

Published On - 2:57 pm, Tue, 26 July 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ