AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ: ಶಾಸಕ ವೇದವ್ಯಾಸ ಕಾಮತ್​ ಗಮನ ಸೆಳೆದ ಬಜರಂಗದಳ ಕಾರ್ಯಕರ್ತರು

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ತಡೆದಿರುವ ವಿಚಾರವಾಗಿ ವಿಎಚ್​​ಪಿ‌ ಮುಖಂಡರು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್​ರನ್ನು ಭೇಟಿಯಾಗಿದ್ದಾರೆ.

ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿ: ಶಾಸಕ ವೇದವ್ಯಾಸ ಕಾಮತ್​ ಗಮನ ಸೆಳೆದ ಬಜರಂಗದಳ ಕಾರ್ಯಕರ್ತರು
ಶಾಸಕ ವೇದವ್ಯಾಸ ಕಾಮತ್​
TV9 Web
| Edited By: |

Updated on:Jul 26, 2022 | 2:57 PM

Share

ದಕ್ಷಿಣ ಕನ್ನಡ: ಮಂಗಳೂರು ಪಬ್​ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ತಡೆದಿರುವ ವಿಚಾರವಾಗಿ ವಿಎಚ್​​ಪಿ‌ ಮುಖಂಡರು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್​ರನ್ನು ಭೇಟಿಯಾಗಿದ್ದಾರೆ. ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವಹಿಂದೂ ಪರಿಷತ್ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ಹಿಂದೂ ಮುಖಂಡರು ಭೇಟಿಯಾಗಿದ್ದು, ಘಟನೆ ಸಂಬಂಧ ಶಾಸಕ ವೇದವ್ಯಾಸ ಕಾಮತ್​ ಅವರಿಗೆ ಮುಖಂಡರು ವಿವರಣೆ ನೀಡುತ್ತಿದ್ದಾರೆ.

ಅವಧಿ ಮೀರಿ ಕಾರ್ಯನಿರ್ವಹಿಸುತ್ತಿರುವ ಪಬ್​ಗಳ ಮೇಲೆ ಕ್ರಮ ಕೈಗೊಳ್ಳುವಂತೆ  ಆಗ್ರಹಿಸಿದ್ದಾರೆ. ಡ್ರಗ್ ಧಂದೆ ಮತ್ತು ಕಾಲೇಜು ವಿದ್ಯಾರ್ಥಿಗಳ ‌ಮೇಲೆ ಕಣ್ಣಿಡಲು ಮನವಿ ಮಾಡಿದ್ದಾರೆ. ಮನವಿ ಸ್ವೀಕರಿಸಿ ಪೊಲೀಸ್ ಇಲಾಖೆ ಸೂಚನೆ ನೀಡುವುದಾಗಿ ಶಾಸಕ ಕಾಮತ್ ಭರವಸೆ ನೀಡಿದ್ದಾರೆ.

ಈ ಸಂಬಂಧ ಶಾಸಕ ವೇದವ್ಯಾಸ ಕಾಮತ್  ಮಾತನಾಡಿ ಪಬ್ ದಾಳಿ ಮಾಡುವ ಮನಸ್ಸು ಅವರಿಗೆ ಇರಲಿಲ್ಲ, ಅದನ್ನು ಸಂಘಟನೆ ‌ಮಾಡಿಲ್ಲ. ಪೊಲೀಸ್ ಇಲಾಖೆ ಮೂಲಕ ಅಪ್ರಾಪ್ತ ವಯಸ್ಸಿನವರಿಗೆ ಬುದ್ದಿ ಹೇಳಿದ್ದಾರೆ. ಸಂಘಟನೆಯವರು ಈ ಮೂಲಕ ಪೊಲೀಸ್ ಇಲಾಖೆ ಜೊತೆ ಹೋಗಿದ್ದಾರೆ. ವಿದ್ಯಾರ್ಥಿಗಳು ಯಾವತ್ತೂ ಮನೆಯವರ ಒಪ್ಪಿಗೆ ಜೊತೆ ಈ ಕೆಲಸ ಮಾಡಲ್ಲ‌ ಎಂದರು.

ಮನೆಯವರು ಸಂಘಟನೆಯವರ ಗಮನಕ್ಕೆ ಇಂಥದ್ದನ್ನ ತಂದಿದ್ದಾರೆ. ಹೀಗಾಗಿ ದುಷ್ಟಟಕ್ಕೆ ಬಲಿಯಾದಾಗ ವಿಎಚ್​​ಪಿ ಹೋಗಿ ಮನವಿ ಮಾಡಬೇಕೆಂದಿಲ್ಲ. ಆದರೆ ಜವಾಬ್ದಾರಿಯಿಂದ ವಿಎಚ್​​ಪಿಯವರು ಪೊಲೀಸರ ಮೂಲಕ ಹೋಗಿದ್ದಾರೆ‌. ಅವರು ದಾಳಿ ಮಾಡಬೇಕಿದ್ದಾರೆ ಪೊಲೀಸರಿಗೆ ಮುಂಚಿತವಾಗಿ ತಿಳಿಸ್ತಾ ಇರಲಿಲ್ಲ. ಲವ್ ಜಿಹಾದ್, ಡ್ರಗ್ ಚಟಕ್ಕೆ ಬಲಿಯಾಗೋ ವಾತಾವರಣ ಸೃಷ್ಟಿಯಾಗಬಾರದು ಎಂದು ಸೂಚನೆ ನೀಡಿದರು.

ವಿದ್ಯಾರ್ಥಿಗಳು ಈ ಬಗ್ಗೆ ಗಮನ ಹರಿಸಬೇಕು, ಮನೆಯವರ ಕಷ್ಟ ಅರಿಯಬೇಕು‌. ಯಾವುದೇ ಕಾನೂನು ಬಾಹಿರ ಚಟುವಟಿಕೆ ಆದಾಗ ಕಮಿಷನರ್​  ಅವರಿಗೆ ತಿಳಿಸುತ್ತೇನೆ. ಅಪ್ರಾಪ್ತ ವಿದ್ಯಾರ್ಥಿಗಳ ಕಾನೂನು ಬಾಹಿರ ಚಟುವಟಿಕೆ ವಿರುದ್ದ ಪೊಲೀಸರ ಗಮನಕ್ಕೆ ತರ್ತೇನೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡಿದ ವಿಡಿಯೋ ವೈರಲ್; ಎನ್ಎಸ್ ಯುಐ  ಪ್ರತಿಭಟನೆ

ಶಿವಮೊಗ್ಗ: ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡಿದ ವಿಡಿಯೋ ವೈರಲ್ ವಿಚಾರವಾಗಿ ಶಿವಮೊಗ್ಗ ಎನ್ಎಸ್​​ಯುಐ ನೇತೃತ್ವದಲ್ಲಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ- ಕಾಲೇಜುಗಳ ಆವರಣದಲ್ಲಿ ಮಾದಕ ವಸ್ತು ಬಳಕೆ ಹೆಚ್ಚಳವಾಗುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯ  ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ. ಮಾದಕ ವಸ್ತು ಮಾರಾಟ ಮತ್ತು ಬಳಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿರುವ ಜೊತೆಗೆ ಗೃಹಸಚಿವರನ್ನು ಸಂಪುಟದಿಂದ ಕೈಬಿಡಲು ಎನ್​​ಎಸ್​ಯುಐ ಆಗ್ರಹಿಸಿದೆ.

Published On - 2:57 pm, Tue, 26 July 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ