AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ನಾಗಬನ ಅಪವಿತ್ರಗೊಳಿಸಿದ್ದಕ್ಕೆ ವ್ಯಕ್ತಿ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ; ಮೂವರ ಬಂಧನ

Mangalore Crime News; ಕಾವೂರಿನಲ್ಲಿರುವ ಡಾ. ಎಂವಿ ಶೆಟ್ಟಿ ವಾಕ್ ಮತ್ತು ಶ್ರವಣ ಕಾಲೇಜಿನ ಬಳಿ ಆಗಸ್ಟ್ 20ರ ಭಾನುವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿತ್ತು. 27 ವರ್ಷದ ಸಂತ್ರಸ್ತನನ್ನು ಸ್ಕೂಟರ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕಾಲೇಜು ಬಳಿಯ ಸೇತುವೆಯ ಪಕ್ಕದ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ಮಾಡಿದ್ದರು.

ಮಂಗಳೂರಿನಲ್ಲಿ ನಾಗಬನ ಅಪವಿತ್ರಗೊಳಿಸಿದ್ದಕ್ಕೆ ವ್ಯಕ್ತಿ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ; ಮೂವರ ಬಂಧನ
ಆರೋಪಿ ಚರಣ್ ಹಾಗೂ ಹಲ್ಲೆಗೆ ಬಳಸಿದ ತಲವಾರ್
Follow us
Prajwal D'Souza
| Updated By: Ganapathi Sharma

Updated on:Aug 22, 2023 | 4:29 PM

ಮಂಗಳೂರು, ಆಗಸ್ಟ್ 22: ನಾಗಬನ ಅಪವಿತ್ರಗೊಳಿಸಿದ್ದಕ್ಕೆ ವ್ಯಕ್ತಿಯೊಬ್ಬರನ್ನು ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಪೊಲೀಸರು (Mangalore Police) ಬಂಧಿಸಿದ್ದಾರೆ. ಮೂವರು ಶಂಕಿತ ಆರೋಪಿಗಳಾದ ಚರಣ್ ರಾಜ್ ಅಲಿಯಾಸ್ ಚರಣ್ (23), ಕುಳಾಯಿಯ ಸುಮಂತ್ ಬರ್ಮನ್ (24) ಮತ್ತು ಕೋಡಿಕಲ್‌ನ ಅವಿನಾಶ್ (24) ಅನ್ನು ದಾಳಿ ನಡೆದ 24 ಗಂಟೆಗಳ ಒಳಗಾಗಿ ಬಂಧಿಸಲಾಗಿದೆ. ಕಾವೂರಿನಲ್ಲಿರುವ ಡಾ. ಎಂವಿ ಶೆಟ್ಟಿ ವಾಕ್ ಮತ್ತು ಶ್ರವಣ ಕಾಲೇಜಿನ ಬಳಿ ಆಗಸ್ಟ್ 20ರ ಭಾನುವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿತ್ತು. 27 ವರ್ಷದ ಸಂತ್ರಸ್ತನನ್ನು ಸ್ಕೂಟರ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕಾಲೇಜು ಬಳಿಯ ಸೇತುವೆಯ ಪಕ್ಕದ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.

ಚರಣ್ ತನ್ನ ಬಳಿಗೆ ಬಂದು, ‘ನೀನು ನಾಗಬನವನ್ನು ಅಪವಿತ್ರಗೊಳಿಸಿದ್ದಿ’ ಎಂದು ಆರೋಪಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದಾಳಿಗೊಳಗಾದ ವ್ಯಕ್ತಿ ಆರೋಪಿಸಿದ್ದಾರೆ.

ನನ್ನನ್ನು ಕೊಲ್ಲುವ ಉದ್ದೇಶದಿಂದ ಚರಣ್ ನನ್ನ ಮೇಲೆ ಸುಮಾರು ಎರಡು ಅಡಿ ಉದ್ದದ ತಲವಾರನ್ನು ಬೀಸಿದ್ದ ಎಂದು ಸಂತ್ರಸ್ತ ವ್ಯಕ್ತಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿರುವುದು ‘ನ್ಯೂಸ್ 9’ಗೆ ತಿಳಿದುಬಂದಿದೆ.

‘ಚರಣ್ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಅಷ್ಟರಲ್ಲಿ ಅವಿನಾಶ್ ಕಲ್ಲು ತೂರಾಟ ನಡೆಸಿದ್ದು, ಅದು ನನ್ನ ಕಣ್ಣಿಗೆ ಬಡಿದು ನೋವುಂಟು ಮಾಡಿದೆ. ಅವರು ಸುಮಾರು 200 ಮೀಟರ್‌ಗಳಷ್ಟು ದೂರ ಸ್ಕೂಟರ್‌ನಲ್ಲಿ ನನ್ನನ್ನು ಹಿಂಬಾಲಿಸಿದರೂ, ನಾನು ಹೇಗಾದರೂ ಅವರನ್ನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದೆ’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಾವೂರು ಪೊಲೀಸರು ಮೂವರನ್ನು ಬಂಧಿಸಿ, ಸೆಕ್ಷನ್ 341 (ತಪ್ಪು ನಡೆಗೆ ಶಿಕ್ಷೆ), 323 (ಸ್ವಯಂಪ್ರೇರಿತವಾಗಿ ದಾಳಿ ನಡೆಸುವುದಕ್ಕೆ ನೀಡಲಾಗುವ ಶಿಕ್ಷೆ), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 307 (ಕೊಲೆಗೆ ಯತ್ನ), 506 (ದಂಡನೆಗಾಗಿ ಶಿಕ್ಷೆ) ಕ್ರಿಮಿನಲ್ ಬೆದರಿಕೆ) ಮತ್ತು ಭಾರತೀಯ ದಂಡ ಸಂಹಿತೆಯ (IPC) ಮತ್ತು ಶಸ್ತ್ರಾಸ್ತ್ರ ಕಾಯಿದೆಯ 25 (ಯಾವುದೇ ನಿಷೇಧಿತ ಶಸ್ತ್ರಾಸ್ತ್ರಗಳನ್ನು ಹೊಂದುವುದು ಅಥವಾ ಒಯ್ಯುವುದು) 149 (ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧದ ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ತಪ್ಪಿತಸ್ಥರು) ಅಡಿ ಪ್ರಕರಣ ದಾಖಲಿಸಲಾಗಿದೆ.

ಬಂಧನವನ್ನು ಖಚಿತಪಡಿಸಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಆರೋಪಿಗಳ ಉದ್ದೇಶವು ಭಯವನ್ನು ಸೃಷ್ಟಿಸುವುದಾಗಿತ್ತು. ಶಂಕಿತ ಆರೋಪಿಗಳಲ್ಲಿ ಒಬ್ಬನಾದ ಚರಣ್ ಒಬ್ಬ ರೌಡಿ ಶೀಟರ್ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?

ಚರಣ್, ಬರ್ಮನ್ ಮತ್ತು ಅವಿನಾಶ್ ವಿರುದ್ಧ ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಅವಿನಾಶ್ ವಿರುದ್ಧ ಉರ್ವ ಪೊಲೀಸರು ಈಗಾಗಲೇ ಬಂಧನಕ್ಕೆ ಆದೇಶವನ್ನೂ ಹೊರಡಿಸಿದ್ದರು.

ಮೂವರನ್ನೂ ಆಯುಧ ಸಹಿತ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Tue, 22 August 23

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ