ಮಂಗಳೂರಿನಲ್ಲಿ ನಾಗಬನ ಅಪವಿತ್ರಗೊಳಿಸಿದ್ದಕ್ಕೆ ವ್ಯಕ್ತಿ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ; ಮೂವರ ಬಂಧನ

Mangalore Crime News; ಕಾವೂರಿನಲ್ಲಿರುವ ಡಾ. ಎಂವಿ ಶೆಟ್ಟಿ ವಾಕ್ ಮತ್ತು ಶ್ರವಣ ಕಾಲೇಜಿನ ಬಳಿ ಆಗಸ್ಟ್ 20ರ ಭಾನುವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿತ್ತು. 27 ವರ್ಷದ ಸಂತ್ರಸ್ತನನ್ನು ಸ್ಕೂಟರ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕಾಲೇಜು ಬಳಿಯ ಸೇತುವೆಯ ಪಕ್ಕದ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ಮಾಡಿದ್ದರು.

ಮಂಗಳೂರಿನಲ್ಲಿ ನಾಗಬನ ಅಪವಿತ್ರಗೊಳಿಸಿದ್ದಕ್ಕೆ ವ್ಯಕ್ತಿ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ; ಮೂವರ ಬಂಧನ
ಆರೋಪಿ ಚರಣ್ ಹಾಗೂ ಹಲ್ಲೆಗೆ ಬಳಸಿದ ತಲವಾರ್
Follow us
| Updated By: ಗಣಪತಿ ಶರ್ಮ

Updated on:Aug 22, 2023 | 4:29 PM

ಮಂಗಳೂರು, ಆಗಸ್ಟ್ 22: ನಾಗಬನ ಅಪವಿತ್ರಗೊಳಿಸಿದ್ದಕ್ಕೆ ವ್ಯಕ್ತಿಯೊಬ್ಬರನ್ನು ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಪೊಲೀಸರು (Mangalore Police) ಬಂಧಿಸಿದ್ದಾರೆ. ಮೂವರು ಶಂಕಿತ ಆರೋಪಿಗಳಾದ ಚರಣ್ ರಾಜ್ ಅಲಿಯಾಸ್ ಚರಣ್ (23), ಕುಳಾಯಿಯ ಸುಮಂತ್ ಬರ್ಮನ್ (24) ಮತ್ತು ಕೋಡಿಕಲ್‌ನ ಅವಿನಾಶ್ (24) ಅನ್ನು ದಾಳಿ ನಡೆದ 24 ಗಂಟೆಗಳ ಒಳಗಾಗಿ ಬಂಧಿಸಲಾಗಿದೆ. ಕಾವೂರಿನಲ್ಲಿರುವ ಡಾ. ಎಂವಿ ಶೆಟ್ಟಿ ವಾಕ್ ಮತ್ತು ಶ್ರವಣ ಕಾಲೇಜಿನ ಬಳಿ ಆಗಸ್ಟ್ 20ರ ಭಾನುವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿತ್ತು. 27 ವರ್ಷದ ಸಂತ್ರಸ್ತನನ್ನು ಸ್ಕೂಟರ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕಾಲೇಜು ಬಳಿಯ ಸೇತುವೆಯ ಪಕ್ಕದ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.

ಚರಣ್ ತನ್ನ ಬಳಿಗೆ ಬಂದು, ‘ನೀನು ನಾಗಬನವನ್ನು ಅಪವಿತ್ರಗೊಳಿಸಿದ್ದಿ’ ಎಂದು ಆರೋಪಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದಾಳಿಗೊಳಗಾದ ವ್ಯಕ್ತಿ ಆರೋಪಿಸಿದ್ದಾರೆ.

ನನ್ನನ್ನು ಕೊಲ್ಲುವ ಉದ್ದೇಶದಿಂದ ಚರಣ್ ನನ್ನ ಮೇಲೆ ಸುಮಾರು ಎರಡು ಅಡಿ ಉದ್ದದ ತಲವಾರನ್ನು ಬೀಸಿದ್ದ ಎಂದು ಸಂತ್ರಸ್ತ ವ್ಯಕ್ತಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿರುವುದು ‘ನ್ಯೂಸ್ 9’ಗೆ ತಿಳಿದುಬಂದಿದೆ.

‘ಚರಣ್ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಅಷ್ಟರಲ್ಲಿ ಅವಿನಾಶ್ ಕಲ್ಲು ತೂರಾಟ ನಡೆಸಿದ್ದು, ಅದು ನನ್ನ ಕಣ್ಣಿಗೆ ಬಡಿದು ನೋವುಂಟು ಮಾಡಿದೆ. ಅವರು ಸುಮಾರು 200 ಮೀಟರ್‌ಗಳಷ್ಟು ದೂರ ಸ್ಕೂಟರ್‌ನಲ್ಲಿ ನನ್ನನ್ನು ಹಿಂಬಾಲಿಸಿದರೂ, ನಾನು ಹೇಗಾದರೂ ಅವರನ್ನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದೆ’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಾವೂರು ಪೊಲೀಸರು ಮೂವರನ್ನು ಬಂಧಿಸಿ, ಸೆಕ್ಷನ್ 341 (ತಪ್ಪು ನಡೆಗೆ ಶಿಕ್ಷೆ), 323 (ಸ್ವಯಂಪ್ರೇರಿತವಾಗಿ ದಾಳಿ ನಡೆಸುವುದಕ್ಕೆ ನೀಡಲಾಗುವ ಶಿಕ್ಷೆ), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 307 (ಕೊಲೆಗೆ ಯತ್ನ), 506 (ದಂಡನೆಗಾಗಿ ಶಿಕ್ಷೆ) ಕ್ರಿಮಿನಲ್ ಬೆದರಿಕೆ) ಮತ್ತು ಭಾರತೀಯ ದಂಡ ಸಂಹಿತೆಯ (IPC) ಮತ್ತು ಶಸ್ತ್ರಾಸ್ತ್ರ ಕಾಯಿದೆಯ 25 (ಯಾವುದೇ ನಿಷೇಧಿತ ಶಸ್ತ್ರಾಸ್ತ್ರಗಳನ್ನು ಹೊಂದುವುದು ಅಥವಾ ಒಯ್ಯುವುದು) 149 (ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧದ ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ತಪ್ಪಿತಸ್ಥರು) ಅಡಿ ಪ್ರಕರಣ ದಾಖಲಿಸಲಾಗಿದೆ.

ಬಂಧನವನ್ನು ಖಚಿತಪಡಿಸಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಆರೋಪಿಗಳ ಉದ್ದೇಶವು ಭಯವನ್ನು ಸೃಷ್ಟಿಸುವುದಾಗಿತ್ತು. ಶಂಕಿತ ಆರೋಪಿಗಳಲ್ಲಿ ಒಬ್ಬನಾದ ಚರಣ್ ಒಬ್ಬ ರೌಡಿ ಶೀಟರ್ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?

ಚರಣ್, ಬರ್ಮನ್ ಮತ್ತು ಅವಿನಾಶ್ ವಿರುದ್ಧ ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಅವಿನಾಶ್ ವಿರುದ್ಧ ಉರ್ವ ಪೊಲೀಸರು ಈಗಾಗಲೇ ಬಂಧನಕ್ಕೆ ಆದೇಶವನ್ನೂ ಹೊರಡಿಸಿದ್ದರು.

ಮೂವರನ್ನೂ ಆಯುಧ ಸಹಿತ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Tue, 22 August 23

ತಾಜಾ ಸುದ್ದಿ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ