ಮಂಗಳೂರು: ಸಾಲ ಮರುಪಾವತಿ ಮಾಡಲು ನಕಲಿ ಕರೆನ್ಸಿ ನೋಟ್ ಪ್ರಿಂಟ್, ನಾಲ್ವರ ಬಂಧನ

ಸಾಲ ಪಡೆದ ಹಣವನ್ನು ವಾಪಸ್ ನೀಡಲಾಗದ ಕಾರಣಕ್ಕೆ ವ್ಯಕ್ತಿಯೊಬ್ಬ ನಕಲಿ ಕರೆನ್ಸಿ ನೋಟನ್ನೇ ಪ್ರಿಂಟ್ ಮಾಡಿ ಜನರನ್ನು ವಂಚಿಸುವ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಯೂಟ್ಯೂಬ್​ ನೋಡಿಕೊಂಡೇ ನಕಲಿ ಕರೆನ್ಸಿ ನೋಟ್ ಪ್ರಿಂಟ್ ಮಾಡಿ ವಂಚನೆ ಎಸಗುತ್ತಿದ್ದ ವ್ಯಕ್ತಿ ಹಾಗೂ ಆತನ ಸಹಚರರ ವಿವರ ಇಲ್ಲಿದೆ.

ಮಂಗಳೂರು: ಸಾಲ ಮರುಪಾವತಿ ಮಾಡಲು ನಕಲಿ ಕರೆನ್ಸಿ ನೋಟ್ ಪ್ರಿಂಟ್, ನಾಲ್ವರ ಬಂಧನ
ನಕಲಿ ಕರೆನ್ಸಿ ನೋಟ್ (ಸಾಂದರ್ಭಿಕ ಚಿತ್ರ)
Follow us
|

Updated on:Aug 20, 2024 | 8:36 AM

ಮಂಗಳೂರು, ಆಗಸ್ಟ್ 20: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್​ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.

ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸಾಲ ಮರುಪಾವತಿಸಲು ನಕಲಿ ನೋಟು ಮುದ್ರಣಕ್ಕೆ ಮುಂದಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಅವರು ಕೋಝಿಕ್ಕೋಡ್ ಮತ್ತು ದೆಹಲಿಯಿಂದ ಆನ್‌ಲೈನ್‌ನಲ್ಲಿ ಕಚ್ಚಾ ವಸ್ತುಗಳನ್ನು ಖರೀದಿಸಿದ್ದರು. ಯೂಟ್ಯೂಬ್ ಮೂಲಕ ನಕಲಿ ಕರೆನ್ಸಿ ಮುದ್ರಿಸುವುದನ್ನು ಕಲಿತರು. ಈತ ಕಳೆದ ಮೂರು ತಿಂಗಳಿಂದ ಚೆರ್ಕಳದಲ್ಲಿರುವ ತನ್ನ ಪ್ರಿಂಟಿಂಗ್ ಪ್ರೆಸ್​​ನಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ.

ಆರೋಪಿಗಳು ಉತ್ತಮ ಗುಣಮಟ್ಟದ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು (ಎಫ್‌ಐಸಿಎನ್) ಪ್ರಿಂಟ್ ಮಾಡಿದ್ದು, ಇದು ನಕಲಿ ಎಂದು ಕಂಡುಹಿಡಿಯುವುದು ಸಾಮಾನ್ಯ ಜನರಿಗೆ ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಮೂವರು ಆರೋಪಿಗಳು ಈತನಿಗೆ ನಕಲಿ ನೋಟು ಚಲಾವಣೆ ಮಾಡಲು ಸಹಕರಿಸಿದ್ದರು.

ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ MLC ಹೇಳಿಕೆಗೆ ಭುಗಿಲೆದ್ದ ಆಕ್ರೋಶ

25 ಸಾವಿರ ನಗದು ನೀಡಿ 1 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಲಾಡ್ಜ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವ ಸಾಧ್ಯತೆಗಳಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಆರೋಪಿಗಳಿಂದ 9,030 ರೂಪಾಯಿ ನಗದು ಮತ್ತು ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Tue, 20 August 24

ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು