AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸಾಲ ಮರುಪಾವತಿ ಮಾಡಲು ನಕಲಿ ಕರೆನ್ಸಿ ನೋಟ್ ಪ್ರಿಂಟ್, ನಾಲ್ವರ ಬಂಧನ

ಸಾಲ ಪಡೆದ ಹಣವನ್ನು ವಾಪಸ್ ನೀಡಲಾಗದ ಕಾರಣಕ್ಕೆ ವ್ಯಕ್ತಿಯೊಬ್ಬ ನಕಲಿ ಕರೆನ್ಸಿ ನೋಟನ್ನೇ ಪ್ರಿಂಟ್ ಮಾಡಿ ಜನರನ್ನು ವಂಚಿಸುವ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಯೂಟ್ಯೂಬ್​ ನೋಡಿಕೊಂಡೇ ನಕಲಿ ಕರೆನ್ಸಿ ನೋಟ್ ಪ್ರಿಂಟ್ ಮಾಡಿ ವಂಚನೆ ಎಸಗುತ್ತಿದ್ದ ವ್ಯಕ್ತಿ ಹಾಗೂ ಆತನ ಸಹಚರರ ವಿವರ ಇಲ್ಲಿದೆ.

ಮಂಗಳೂರು: ಸಾಲ ಮರುಪಾವತಿ ಮಾಡಲು ನಕಲಿ ಕರೆನ್ಸಿ ನೋಟ್ ಪ್ರಿಂಟ್, ನಾಲ್ವರ ಬಂಧನ
ನಕಲಿ ಕರೆನ್ಸಿ ನೋಟ್ (ಸಾಂದರ್ಭಿಕ ಚಿತ್ರ)
Ganapathi Sharma
|

Updated on:Aug 20, 2024 | 8:36 AM

Share

ಮಂಗಳೂರು, ಆಗಸ್ಟ್ 20: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್​ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.

ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸಾಲ ಮರುಪಾವತಿಸಲು ನಕಲಿ ನೋಟು ಮುದ್ರಣಕ್ಕೆ ಮುಂದಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ಅವರು ಕೋಝಿಕ್ಕೋಡ್ ಮತ್ತು ದೆಹಲಿಯಿಂದ ಆನ್‌ಲೈನ್‌ನಲ್ಲಿ ಕಚ್ಚಾ ವಸ್ತುಗಳನ್ನು ಖರೀದಿಸಿದ್ದರು. ಯೂಟ್ಯೂಬ್ ಮೂಲಕ ನಕಲಿ ಕರೆನ್ಸಿ ಮುದ್ರಿಸುವುದನ್ನು ಕಲಿತರು. ಈತ ಕಳೆದ ಮೂರು ತಿಂಗಳಿಂದ ಚೆರ್ಕಳದಲ್ಲಿರುವ ತನ್ನ ಪ್ರಿಂಟಿಂಗ್ ಪ್ರೆಸ್​​ನಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ.

ಆರೋಪಿಗಳು ಉತ್ತಮ ಗುಣಮಟ್ಟದ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು (ಎಫ್‌ಐಸಿಎನ್) ಪ್ರಿಂಟ್ ಮಾಡಿದ್ದು, ಇದು ನಕಲಿ ಎಂದು ಕಂಡುಹಿಡಿಯುವುದು ಸಾಮಾನ್ಯ ಜನರಿಗೆ ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಮೂವರು ಆರೋಪಿಗಳು ಈತನಿಗೆ ನಕಲಿ ನೋಟು ಚಲಾವಣೆ ಮಾಡಲು ಸಹಕರಿಸಿದ್ದರು.

ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ MLC ಹೇಳಿಕೆಗೆ ಭುಗಿಲೆದ್ದ ಆಕ್ರೋಶ

25 ಸಾವಿರ ನಗದು ನೀಡಿ 1 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಲಾಡ್ಜ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವ ಸಾಧ್ಯತೆಗಳಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಆರೋಪಿಗಳಿಂದ 9,030 ರೂಪಾಯಿ ನಗದು ಮತ್ತು ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Tue, 20 August 24

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?