AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ದಾಂಡಿಯಾ ನೃತ್ಯಕ್ಕೆ ದುರ್ಗಾವಾಹಿನಿ ಸಂಘಟನೆ ವಿರೋಧ, ಕಾರಣವೇನು?

ನವರಾತ್ರಿ ಅಂಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಆರೋಪಿಸಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಮಂಗಳೂರು ಪೊಲೀಸ್ ಕಮಿಷನರ್​ಗೆ ದುರ್ಗಾವಾಹಿನಿ ಸಂಘಟನೆ ಮನವಿ ಮಾಡಿದೆ.

ಮಂಗಳೂರು: ನವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ದಾಂಡಿಯಾ ನೃತ್ಯಕ್ಕೆ ದುರ್ಗಾವಾಹಿನಿ ಸಂಘಟನೆ ವಿರೋಧ, ಕಾರಣವೇನು?
ಮಂಗಳೂರು ದಸರಾ: ದಾಂಡಿಯಾ ನೃತ್ಯಕ್ಕೆ ದುರ್ಗಾವಾಹಿನಿ ಸಂಘಟನೆ ವಿರೋಧ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಆಯೇಷಾ ಬಾನು|

Updated on: Oct 20, 2023 | 11:00 AM

Share

ಮಂಗಳೂರು, ಅ.20: ಮಂಗಳೂರಿನಲ್ಲಿ ದಸರಾ (Mangaluru Dasara) ಸಂಭ್ರಮ ಮನೆ ಮಾಡಿದೆ. ನವರಾತ್ರಿ (Navaratri) ಅಂಗವಾಗಿ ನಗರದ ದೇವಸ್ಥಾನಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಇದರ ನಡುವೆ ಮಂಗಳೂರಿನಲ್ಲಿ ನವರಾತ್ರಿ ಅಂಗವಾಗಿ ದಾಂಡಿಯಾ ನೃತ್ಯ (Dandiya Dance) ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಇದಕ್ಕೆ ದುರ್ಗಾವಾಹಿನಿ ಸಂಘಟನೆ, ವಿಶ್ವ ಹಿಂದೂ ಪರಿಷತ್ ವಿರೋಧ ವ್ಯಕ್ತಪಡಿಸಿದೆ.

ನವರಾತ್ರಿ ಅಂಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಆರೋಪಿಸಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಮಂಗಳೂರು ಪೊಲೀಸ್ ಕಮಿಷನರ್​ಗೆ ದುರ್ಗಾವಾಹಿನಿ ಸಂಘಟನೆ ಮನವಿ ಮಾಡಿದೆ. ಡ್ರಗ್ಸ್, ಮಾದಕ ದ್ರವ್ಯ, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ ಎಂದು ದುರ್ಗಾವಾಹಿನಿ ಸಂಘಟನೆ ಆರೋಪ ಮಾಡಿದೆ.

ಇದನ್ನೂ ಓದಿ: ಮಂಗಳೂರು ದಸರಾ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ ವಿಶೇಷ ಪ್ಯಾಕೇಜ್

ಇನ್ನು ನವರಾತ್ರಿ ಹಿನ್ನೆಲೆ ಮಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿವೆ. ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರ, ಬೋಳಾರದ ಮಂಗಳಾದೇವಿ ದೇವಸ್ಥಾನ, ಉರ್ವದ ಮಾರಿಗುಡಿ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಸಂಗೀತ, ನಾಟ್ಯ ಮತ್ತು ಭಕ್ತಿರಸದ ಕಾರ್ಯಕ್ರಮಗಳು ನಡೆಯುತ್ತಿವೆ.

ಮಂಗಳೂರಿಗೆ ಹೆಸರು ತಂದುಕೊಟ್ಟ ಶ್ರೀ ಮಂಗಳಾದೇವಿ ಸನ್ನಿಧಿಯಲ್ಲಿ ತಲೆತಲಾಂತರಗಳಿಂದ ನವರಾತ್ರಿ ಉತ್ಸವ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ನವರಾತ್ರಿ ಸಂಭ್ರಮವನ್ನು ಮಂಗಳೂರು ದಸರಾ ಎಂದು ಇಲ್ಲಿನ ಜನ ಮೈಸೂರು ದಸರಾದಂತೆಯೇ ಸಂಭ್ರಮದಿಂದ ಆಚರಿಸುತ್ತಾರೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ