ಮಂಗಳೂರು: ನವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ದಾಂಡಿಯಾ ನೃತ್ಯಕ್ಕೆ ದುರ್ಗಾವಾಹಿನಿ ಸಂಘಟನೆ ವಿರೋಧ, ಕಾರಣವೇನು?

ನವರಾತ್ರಿ ಅಂಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಆರೋಪಿಸಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಮಂಗಳೂರು ಪೊಲೀಸ್ ಕಮಿಷನರ್​ಗೆ ದುರ್ಗಾವಾಹಿನಿ ಸಂಘಟನೆ ಮನವಿ ಮಾಡಿದೆ.

ಮಂಗಳೂರು: ನವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ದಾಂಡಿಯಾ ನೃತ್ಯಕ್ಕೆ ದುರ್ಗಾವಾಹಿನಿ ಸಂಘಟನೆ ವಿರೋಧ, ಕಾರಣವೇನು?
ಮಂಗಳೂರು ದಸರಾ: ದಾಂಡಿಯಾ ನೃತ್ಯಕ್ಕೆ ದುರ್ಗಾವಾಹಿನಿ ಸಂಘಟನೆ ವಿರೋಧ
Edited By: ಆಯೇಷಾ ಬಾನು

Updated on: Oct 20, 2023 | 11:00 AM

ಮಂಗಳೂರು, ಅ.20: ಮಂಗಳೂರಿನಲ್ಲಿ ದಸರಾ (Mangaluru Dasara) ಸಂಭ್ರಮ ಮನೆ ಮಾಡಿದೆ. ನವರಾತ್ರಿ (Navaratri) ಅಂಗವಾಗಿ ನಗರದ ದೇವಸ್ಥಾನಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಇದರ ನಡುವೆ ಮಂಗಳೂರಿನಲ್ಲಿ ನವರಾತ್ರಿ ಅಂಗವಾಗಿ ದಾಂಡಿಯಾ ನೃತ್ಯ (Dandiya Dance) ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಇದಕ್ಕೆ ದುರ್ಗಾವಾಹಿನಿ ಸಂಘಟನೆ, ವಿಶ್ವ ಹಿಂದೂ ಪರಿಷತ್ ವಿರೋಧ ವ್ಯಕ್ತಪಡಿಸಿದೆ.

ನವರಾತ್ರಿ ಅಂಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ ಎಂದು ಆರೋಪಿಸಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಮಂಗಳೂರು ಪೊಲೀಸ್ ಕಮಿಷನರ್​ಗೆ ದುರ್ಗಾವಾಹಿನಿ ಸಂಘಟನೆ ಮನವಿ ಮಾಡಿದೆ. ಡ್ರಗ್ಸ್, ಮಾದಕ ದ್ರವ್ಯ, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ ಎಂದು ದುರ್ಗಾವಾಹಿನಿ ಸಂಘಟನೆ ಆರೋಪ ಮಾಡಿದೆ.

ಇದನ್ನೂ ಓದಿ: ಮಂಗಳೂರು ದಸರಾ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ ವಿಶೇಷ ಪ್ಯಾಕೇಜ್

ಇನ್ನು ನವರಾತ್ರಿ ಹಿನ್ನೆಲೆ ಮಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿವೆ. ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರ, ಬೋಳಾರದ ಮಂಗಳಾದೇವಿ ದೇವಸ್ಥಾನ, ಉರ್ವದ ಮಾರಿಗುಡಿ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಸಂಗೀತ, ನಾಟ್ಯ ಮತ್ತು ಭಕ್ತಿರಸದ ಕಾರ್ಯಕ್ರಮಗಳು ನಡೆಯುತ್ತಿವೆ.

ಮಂಗಳೂರಿಗೆ ಹೆಸರು ತಂದುಕೊಟ್ಟ ಶ್ರೀ ಮಂಗಳಾದೇವಿ ಸನ್ನಿಧಿಯಲ್ಲಿ ತಲೆತಲಾಂತರಗಳಿಂದ ನವರಾತ್ರಿ ಉತ್ಸವ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ನವರಾತ್ರಿ ಸಂಭ್ರಮವನ್ನು ಮಂಗಳೂರು ದಸರಾ ಎಂದು ಇಲ್ಲಿನ ಜನ ಮೈಸೂರು ದಸರಾದಂತೆಯೇ ಸಂಭ್ರಮದಿಂದ ಆಚರಿಸುತ್ತಾರೆ.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us