AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಲೋಕದಲ್ಲಿ ಮಂಗಳೂರು ವೈದ್ಯರು: ಇನ್ನೂ 2 ವೈದ್ಯರು, 2 ವಿದ್ಯಾರ್ಥಿನಿಯರು, 5 ವಿದ್ಯಾರ್ಥಿಗಳ ಬಂಧನ

ಗಾಂಜಾ ಲೋಕದಲ್ಲಿ ಮಂಗಳೂರು ವೈದ್ಯರು ಪ್ರಕರಣದಲ್ಲಿ ಇಬ್ಬರು ವೈದ್ಯರು ಹಾಗೂ 7 ವೈದ್ಯಯಕೀಯ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಲಾಗಿದೆ.

ಗಾಂಜಾ ಲೋಕದಲ್ಲಿ ಮಂಗಳೂರು ವೈದ್ಯರು: ಇನ್ನೂ 2 ವೈದ್ಯರು, 2 ವಿದ್ಯಾರ್ಥಿನಿಯರು, 5 ವಿದ್ಯಾರ್ಥಿಗಳ ಬಂಧನ
TV9 Web
| Edited By: |

Updated on:Jan 21, 2023 | 2:56 PM

Share

ಮಂಗಳೂರು: ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ವೈದ್ಯರು ಹಾಗೂ 7 ವೈದ್ಯಯಕೀಯ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಲಾಗಿದೆ. ನಿನ್ನೆ (ಜ.20) ಕೆಎಂಸಿ ಆಸ್ಪತ್ರೆಯ ಆಡಳಿತ ಮಂಡಳಿ ಇಬ್ಬರು ವೈದ್ಯರು ಸೇರಿ ಒಂಬತ್ತು ಮಂದಿಯನ್ನು ಅಮಾನತು ಮಾಡಿತ್ತು. ಈಗ ಈ ಪ್ರಕರಣದಲ್ಲಿ ಮತ್ತೆ 9 ಮಂದಿ ಅರೆಸ್ಟ್ ಆಗಿದ್ದಾರೆ.

ಶ್ರೀನಿವಾಸ ಆಸ್ಪತ್ರೆಯ ಡಾ‌.ಸಿದ್ಧಾರ್ಥ್​ ಪವಸ್ಕರ್(29), ದುರ್ಗಾ ಸಂಜೀವಿನಿ ಆಸ್ಪತ್ರೆಯ ಡಾ.ಸುಧೀಂದ್ರ(34) ಎಂಬ ಇಬ್ಬರು ವೈದ್ಯರು ಅರೆಸ್ಟ್ ಆಗಿದ್ದಾರೆ. ಹಾಗೂ ಕೆಎಂಸಿ ಮೆಡಿಕಲ್ ಕಾಲೇಜಿನ ಉತ್ತರ ಪ್ರದೇಶದ ಡಾ.ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳದ ಡಾ.ಸೂರ್ಯಜಿತ್ ದೇವ್(20), ಡಾ.ಆಯೇಷಾ ಮಹಮ್ಮದ್(23), ತೆಲಂಗಾಣದ ಡಾ.ಪ್ರಣಯ್ ನಟರಾಜ್(24),ಡಾ.ಚೈತನ್ಯಾ(23), ಉತ್ತರ ಪ್ರದೇಶದ ಡಾ.ಇಶ್ ಮಿದ್ದ(24) ಬಂಧಿತ ವಿದ್ಯಾರ್ಥಿಗಳು. ಸದ್ಯ ಈಗ ಗಾಂಜಾ ಕೇಸ್​​ನಲ್ಲಿ ಈವರೆಗೂ 24 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿ, ವಿದ್ಯಾರ್ಥಿನಿಯರ ಜತೆ ವೈದ್ಯರು: ಇದು ಮಂಗಳೂರು ಡಾಕ್ಟರ್​ಗಳ ಗಾಂಜಾ ಲೋಕದ ಕತೆ!

ಡ್ರಗ್ಸ್ ಮಾಫಿಯಾದ ಹಿಂದೆ ಬಿದ್ದಿದ್ದ ಮಂಗಳೂರು ಪೊಲೀಸರು ಕಳೆದ ಜನವರಿ‌ 11 ರಂದು ಹೈ ಪ್ರೋಪೈಲ್ ಡ್ರಗ್ಸ್ ಜಾಲವನ್ನು ಭೇದಿಸಿದ್ದರು. ಈ ವೇಳೆ ಇಬ್ಬರು ವೈದ್ಯರು ಸೇರಿ ಹತ್ತಾರು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಇವರೆಲ್ಲ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನವರಾಗಿದ್ದು ಎಲ್ಲರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಇದಾದ ನಂತರ ನಿನ್ನೆ ಈ ಜಾಲದಲ್ಲಿದ್ದ ಕೆಎಂಸಿ ಮೆಡಿಕಲ್ ಕಾಲೇಜಿನ ಇಬ್ಬರು ವೈದ್ಯರುಗಳಿಗೆ ಆಸ್ಪತ್ರೆಯ ಆಡಳಿತ ಮಂಡಳಿ ಗೇಟ್ ಪಾಸ್ ನೀಡಿತ್ತು. ಅವರ ಗುತ್ತಿಗೆಯನ್ನು ರದ್ದುಪಡಿಸಿ ಅವರನ್ನು ಟರ್ಮಿನೇಟ್ ಮಾಡಲಾಗಿದೆ. ಜೊತೆಗೆ ಇದೇ ಕೆಎಂಸಿ ಕಾಲೇಜಿನ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.

ಕಾಲೇಜಿನ‌ ಆಡಳಿತ ಮಂಡಳಿ ಈ ಕ್ರಮಕೈಗೊಂಡು ಪೊಲೀಸ್ ಕಮಿಷನರ್ ಕಚೇರಿಗೆ ದೌಡಾಯಿಸಿ ಈ ಶಿಸ್ತುಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ವತಃ ಕೆಎಂಸಿ‌ ವೈದ್ಯಕೀಯ ಕಾಲೇಜಿನ ಡೀನ್ ಉನ್ನಿಕೃಷ್ಣನ್ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ ಕಮಿಷನರ್ ಶಶಿಕುಮಾರ್ ಅವರಿಗೆ ಮಾಹಿತಿ ನೀಡಿದ್ರು. ಇಂತಹ ಮಾದಕ ಜಾಲದಲ್ಲಿ ಭಾಗಿಯಾದವರಿಗೆ ಸೂಕ್ತ ಶಿಕ್ಷೆ ನೀಡಬೇಕು. ಪಾರದರ್ಶಕ ತನಿಖೆಗೆಗಾಗಿ ಅವರನ್ನು ಕಾಲೇಜಿನಿಂದ ಕಳಿಸಲಾಗಿದೆ. ತನಿಖೆಗೆ ಬೇಕಾದ ಎಲ್ಲಾ ಸಹಕಾರವನ್ನು ಕೆಎಂಸಿ ಆಸ್ಪತ್ರೆಯ ಕಡೆಯಿಂದ ನೀಡಲಾಗುವುದು ಎಂದು ಡೀನ್ ಸ್ಪಷ್ಟಪಡಿಸಿದ್ದಾರೆ. ಕಾಲೇಜು‌ ಆಡಳಿತ‌ ಮಂಡಳಿಯ ಈ ನಿರ್ಧಾರ ಪೊಲೀಸರ‌ ಮುಂದಿನ ತನಿಖೆಗೂ ಸಹಕಾರಿಯಾಗಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:56 pm, Sat, 21 January 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು