AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮಂಗಳೂರು; ಶೇ 20ರ ಮಳೆ ಕೊರತೆ

ಪ್ರಸ್ತುತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಂಟು ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. ಬೆಳ್ತಂಗಡಿ ಶೇ 40, ಬಂಟ್ವಾಳ ಶೇ 24, ಮಂಗಳೂರು ಶೇ 20, ಪುತ್ತೂರು ಶೇ 37, ಕಡಬ ಶೇ 33, ಕಾರ್ಕಳ ಶೇ 22, ಬ್ರಹ್ಮಾವರ ಶೇ 21 ಮತ್ತು ಹೆಬ್ರಿ ಶೇ 39 ಕೊರತೆಯಿದೆ.

ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮಂಗಳೂರು; ಶೇ 20ರ ಮಳೆ ಕೊರತೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 26, 2023 | 1:42 PM

Share

ಮಂಗಳೂರು, ಆಗಸ್ಟ್ 26: ರಾಜ್ಯದಲ್ಲಿ ಅತಿ ಹೆಚ್ಚು ಮಳೆ ಬೀಳುವ ಕರಾವಳಿ ಭಾಗದಲ್ಲಿ (Coastal Karnataka) ಈ ವರ್ಷ ತೀವ್ರ ಮಳೆ ಕೊರತೆ (Rain deficit) ಎದುರಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯೂ ಕಾಣಿಸುತ್ತಿಲ್ಲ. ಮಂಗಳೂರು ಸೇರಿದಂತೆ ರಾಜ್ಯದ 113 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಗುರುತಿಸಿದೆ. ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರವು ಜೂನ್ 1 ರಿಂದ ಆಗಸ್ಟ್ 19 ರವರೆಗಿನ ಮಳೆಯ ಆಧಾರದ ಮೇಲೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಸುಮಾರು ಶೇ 20 ರ ಮಳೆ ಕೊರತೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಮಳೆ ಕೊರತೆಯಿದೆ. ಆದಾಗ್ಯೂ, ಮೂರು ವಾರಗಳಿಗಿಂತ ಹೆಚ್ಚು ಕಾಲದ ಶುಷ್ಕ ಹವಾಮಾನ, ತೇವಾಂಶದ ಕೊರತೆ, ಅಂತರ್ಜಲ ಸೂಚ್ಯಂಕ, ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣೆ ಮತ್ತು ನದಿಗಳಲ್ಲಿನ ನೀರಿನ ಒಳಹರಿವಿನ ಆಧಾರದ ಮೇಲೆ ಮಂಗಳೂರನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

ಪ್ರಸ್ತುತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಂಟು ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. ಬೆಳ್ತಂಗಡಿ ಶೇ 40, ಬಂಟ್ವಾಳ ಶೇ 24, ಮಂಗಳೂರು ಶೇ 20, ಪುತ್ತೂರು ಶೇ 37, ಕಡಬ ಶೇ 33, ಕಾರ್ಕಳ ಶೇ 22, ಬ್ರಹ್ಮಾವರ ಶೇ 21 ಮತ್ತು ಹೆಬ್ರಿ ಶೇ 39 ಕೊರತೆಯಿದೆ. ಸುಳ್ಯದಲ್ಲಿ ಶೇ 18, ಮೂಡುಬಿದಿರೆ ಶೇ 11, ಮುಲ್ಕಿ ಶೇ 15, ಉಳ್ಳಾಲ ಶೇ 16, ಕುಂದಾಪುರ ಶೇ 8, ಉಡುಪಿ ಶೇ 14, ಬೈಂದೂರು ಶೇ 16 ಮತ್ತು ಕಾಪುವಿನಲ್ಲಿ ಶೇ 9 ಕೊರತೆ ವರದಿಯಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

ಆರು ವರ್ಷಗಳ ಹಿಂದೆ ರಾಜ್ಯದ 160 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ಸೇರಿಸಲಾಗಿತ್ತು. ಮಂಗಳೂರಿನಲ್ಲಿ ಸರಾಸರಿ 301 ಮಿ.ಮೀ ಮತ್ತು ಬಂಟ್ವಾಳದಲ್ಲಿ 337 ಮಿ.ಮೀ ಮಳೆಯಾಗಿತ್ತು. ಆದರೆ, ಈ ವರ್ಷ ಮಂಗಳೂರಿನಲ್ಲಿ 75 ಮಿ.ಮೀ ಮತ್ತು ಬಂಟ್ವಾಳದಲ್ಲಿ 91 ಮಿ.ಮೀ. ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!