AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮಂಗಳೂರು; ಶೇ 20ರ ಮಳೆ ಕೊರತೆ

ಪ್ರಸ್ತುತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಂಟು ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. ಬೆಳ್ತಂಗಡಿ ಶೇ 40, ಬಂಟ್ವಾಳ ಶೇ 24, ಮಂಗಳೂರು ಶೇ 20, ಪುತ್ತೂರು ಶೇ 37, ಕಡಬ ಶೇ 33, ಕಾರ್ಕಳ ಶೇ 22, ಬ್ರಹ್ಮಾವರ ಶೇ 21 ಮತ್ತು ಹೆಬ್ರಿ ಶೇ 39 ಕೊರತೆಯಿದೆ.

ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮಂಗಳೂರು; ಶೇ 20ರ ಮಳೆ ಕೊರತೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Aug 26, 2023 | 1:42 PM

Share

ಮಂಗಳೂರು, ಆಗಸ್ಟ್ 26: ರಾಜ್ಯದಲ್ಲಿ ಅತಿ ಹೆಚ್ಚು ಮಳೆ ಬೀಳುವ ಕರಾವಳಿ ಭಾಗದಲ್ಲಿ (Coastal Karnataka) ಈ ವರ್ಷ ತೀವ್ರ ಮಳೆ ಕೊರತೆ (Rain deficit) ಎದುರಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯೂ ಕಾಣಿಸುತ್ತಿಲ್ಲ. ಮಂಗಳೂರು ಸೇರಿದಂತೆ ರಾಜ್ಯದ 113 ತಾಲ್ಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಗುರುತಿಸಿದೆ. ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರವು ಜೂನ್ 1 ರಿಂದ ಆಗಸ್ಟ್ 19 ರವರೆಗಿನ ಮಳೆಯ ಆಧಾರದ ಮೇಲೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಸುಮಾರು ಶೇ 20 ರ ಮಳೆ ಕೊರತೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಮಳೆ ಕೊರತೆಯಿದೆ. ಆದಾಗ್ಯೂ, ಮೂರು ವಾರಗಳಿಗಿಂತ ಹೆಚ್ಚು ಕಾಲದ ಶುಷ್ಕ ಹವಾಮಾನ, ತೇವಾಂಶದ ಕೊರತೆ, ಅಂತರ್ಜಲ ಸೂಚ್ಯಂಕ, ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣೆ ಮತ್ತು ನದಿಗಳಲ್ಲಿನ ನೀರಿನ ಒಳಹರಿವಿನ ಆಧಾರದ ಮೇಲೆ ಮಂಗಳೂರನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

ಪ್ರಸ್ತುತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಂಟು ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. ಬೆಳ್ತಂಗಡಿ ಶೇ 40, ಬಂಟ್ವಾಳ ಶೇ 24, ಮಂಗಳೂರು ಶೇ 20, ಪುತ್ತೂರು ಶೇ 37, ಕಡಬ ಶೇ 33, ಕಾರ್ಕಳ ಶೇ 22, ಬ್ರಹ್ಮಾವರ ಶೇ 21 ಮತ್ತು ಹೆಬ್ರಿ ಶೇ 39 ಕೊರತೆಯಿದೆ. ಸುಳ್ಯದಲ್ಲಿ ಶೇ 18, ಮೂಡುಬಿದಿರೆ ಶೇ 11, ಮುಲ್ಕಿ ಶೇ 15, ಉಳ್ಳಾಲ ಶೇ 16, ಕುಂದಾಪುರ ಶೇ 8, ಉಡುಪಿ ಶೇ 14, ಬೈಂದೂರು ಶೇ 16 ಮತ್ತು ಕಾಪುವಿನಲ್ಲಿ ಶೇ 9 ಕೊರತೆ ವರದಿಯಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

ಆರು ವರ್ಷಗಳ ಹಿಂದೆ ರಾಜ್ಯದ 160 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ಸೇರಿಸಲಾಗಿತ್ತು. ಮಂಗಳೂರಿನಲ್ಲಿ ಸರಾಸರಿ 301 ಮಿ.ಮೀ ಮತ್ತು ಬಂಟ್ವಾಳದಲ್ಲಿ 337 ಮಿ.ಮೀ ಮಳೆಯಾಗಿತ್ತು. ಆದರೆ, ಈ ವರ್ಷ ಮಂಗಳೂರಿನಲ್ಲಿ 75 ಮಿ.ಮೀ ಮತ್ತು ಬಂಟ್ವಾಳದಲ್ಲಿ 91 ಮಿ.ಮೀ. ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್