AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಾಗೃಹದಲ್ಲೂ ಹಿಂದೂ-ಮುಸ್ಲಿಂ: ಮುನೀರ್​ ಹೊಡೆದಿದ್ದಕ್ಕೆ ಮಂಗಳೂರು ಜೈಲು ರಣಾಂಗಣ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಧರ್ಮದ ವಿಚಾರವಾಗಿ ಕೊಲೆಗಳಾಗಿವೆ. ಈ ಕೊಲೆಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪ್ರತೀಕಾರದ ಹೆಸರಿನಲ್ಲಿ ಹತ್ಯೆ ಮಾಡಲಾಗಿದೆ. ಮೇ 01 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ ಆರೋಪಿ ಮೇಲೆ ಸೋಮವಾರ ಕಾರಾಗೃಹದಲ್ಲಿ ದಾಳಿ ಮಾಡಲಾಗಿತ್ತು. ಈ ಬೆನ್ನಲ್ಲೇ ಹಿಂದೂ ಕೈದಿ ಮೇಲೆ ಮತ್ತೋರ್ವ ಕೈದಿ ಮುನೀರ್​ ಹಲ್ಲೆ ಮಾಡಿದ್ದಾನೆ.

ಕಾರಾಗೃಹದಲ್ಲೂ ಹಿಂದೂ-ಮುಸ್ಲಿಂ: ಮುನೀರ್​ ಹೊಡೆದಿದ್ದಕ್ಕೆ ಮಂಗಳೂರು ಜೈಲು ರಣಾಂಗಣ
ಮಂಗಳೂರು ಕೇಂದ್ರ ಕಾರಾಗೃಹ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:May 20, 2025 | 5:29 PM

Share

ಮಂಗಳೂರು, ಮೇ 20: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಸೋಮವಾರ (ಮೇ.19) ದಂದು ಹಲ್ಲೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ (Mangalore Central Jail) ಅಡುಗೆ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್​ ಹೊಡೆದಿದ್ದಾನೆ. ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು. ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್‌ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಸ್ಥಳಕ್ಕೆ ತೆರಳಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಚೊಟ್ಟೆ ನೌಷಾದ್ ಮೇಲೆ ಹಲ್ಲೆ

ಸುಹಾಸ್​ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್​ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗಿತ್ತು. ಹೀಗಾಗಿ ಸೋಮವಾರ (ಮೇ.20) ದಂದು ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದನು. ಹೀಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಕೈದಿಗಳು ಇದ್ದಕಿದ್ದಂತೆ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ದಾಳಿ ಮಾಡಿದ್ದರು.

ಸುಹಾಸ್ ಶೆಟ್ಟಿ ಕೊಲೆ

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ
Image
ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
Image
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
Image
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ
Image
ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ BJP ಮನವಿ

ಇದನ್ನೂ ನೋಡಿ: ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ

3 ತಿಂಗಳ ಹಿಂದೆಯೇ ಸುಹಾಸ್ ಕೊಲೆಗೆ ಸಿದ್ಧವಾಗಿತ್ತು ಸ್ಕೆಚ್

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದನು. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದನು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Tue, 20 May 25

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ