AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ; ಸಿಸಿಬಿ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ

ಇದೇ ಫೆಬ್ರವರಿ 2 ರಂದು ಒಡಿಶಾದಿಂದ ಬೆಂಗಳೂರಿಗೆ 2 ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪುತ್ರ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಗಳೂರಿನಲ್ಲಿ ಗಾಂಜಾ ಸಾಗಾಟ ಮಾಡುವವರು ಸಿಕ್ಕಿಬಿದ್ದಿದ್ದಾರೆ. ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿದೆ.

ಮಂಗಳೂರು: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ; ಸಿಸಿಬಿ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ
ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 06, 2024 | 7:17 PM

Share

ದಕ್ಷಿಣ ಕನ್ನಡ, ಫೆ.06: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿದ್ದು, ಮಂಗಳೂರು(Mangalore) ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ 120 ಕೆ.ಜಿ ಗಾಂಜಾ(Ganja)ವನ್ನು ಮಹೇಂದ್ರ ಬೊಲೆರೋ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ದಾಳಿ ಮಾಡಿದ್ದು, ಕೇರಳ ವಯನಾಡಿನ ಅನೂಪ್ ಎಂ.ಎಸ್(28), ಕೇರಳ ಕಣ್ಣೂರಿನ ಲತೀಪ್ ಕೆ.ವಿ(36) ಎಂಬುವವರನ್ನು ಬಂಧಿಸಲಾಗಿದೆ.

ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಹುನ್ನಾರ

ಇನ್ನು ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಮಾದಕ ಗಾಂಜಾ ಮಾರಾಟ ಮಾಡಲು ಹುನ್ನಾರ ಮಾಡಲಾಗಿತ್ತು. ಇದೀಗ ಬರೊಬ್ಬರಿ 28 ಲಕ್ಷ ರೂ. ಮೌಲ್ಯದ 120 ಕೆಜಿ ಗಾಂಜಾ, ಸಾಗಾಟದ ವಾಹನ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು 35 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಸಾಗಾಟ ಮಾಡಲಾಗುತ್ತಿತ್ತು.

ಇದನ್ನೂ ಓದಿ:ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ: ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪುತ್ರ ಸೇರಿದಂತೆ ಮೂವರ ಬಂಧನ

ಇದೇ ಫೆಬ್ರವರಿ 2 ರಂದು ಒಡಿಶಾದಿಂದ ಬೆಂಗಳೂರಿಗೆ 2 ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪುತ್ರ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಆಂಧ್ರಪ್ರದೇಶದ ಗುಂಟೂರಿನಲ್ಲಿ ಗಾಂಜಾ ಸಮೇತ ಸಿಕ್ಕಿಬಿದಿದ್ದರು. ಹೆಚ್​ಎಸ್​ಆರ್ ಬಡಾವಣೆ ವಾಸಿ ಕಿಶೋರ್ ಪ್ರಕಾಶ್ ರೆಡ್ಡಿ(34), ಸುದ್ದಗುಂಟೆಪಾಳ್ಯ ಮಾಜಿ ಕಾರ್ಪೊರೇಟರ್ ಮಗ ಅಭಿನವ್(30) ಮತ್ತು ಬಾಲಾಜಿ ನಗರ ವಾಸಿ ಸುಮಂತ್ ಕುಮಾರ್ (24) ಬಂಧಿತರು.  ಚುನಾವಣೆ ಹಿನ್ನೆಲೆ ಪೊತ್ತೂರಿನ ಚೆಕ್ ಪೊಸ್ಟ್​ನಲ್ಲಿ ತಪಾಸಣೆ ವೇಳೆ ಒಂದು ಕಾರಿನಲ್ಲಿ 48 ಕೆಜಿ ಗಾಂಜಾ ಮತ್ತೊಂದು ಕಾರಿನಲ್ಲಿ 12 ಗಾಂಜಾ ಪತ್ತೆ ಆಗಿತ್ತು. ಇವರು 60 ಕೆಜಿ ಗಾಂಜಾ, ಏಳು ಮೊಬೈಲ್, ಎರಡು ಕಾರು ಮತ್ತು 2.28 ಲಕ್ಷ ನಗದು ಸೇರಿದಂತೆ ಒಟ್ಟು 44 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಒಡಿಶಾದ ಕೋರಾಪುಟ್ ಜಿಲ್ಲೆಯ ಅರಗೊಂಡ ಗ್ರಾಮದಿಂದ ಗಾಂಜಾ ಖರೀದಿ ಮತ್ತು ಮಾರಾಟದ ಬಗ್ಗೆ ತನಿಖೆ ವೇಳೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ