Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮಂಗಳಾದೇವಿ ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್: ಹಿಂದೂ ಸ್ಟಾಲ್​ಗಳ ಮೇಲೆ ಹಾರಾಡಿದ ‘ಭಗವಾಧ್ವಜ’

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ಹಬ್ಬ ಹರಿದಿನಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ವಿಹೆಚ್‌ಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ ದತ್ತನಗರ ಒತ್ತಾಯಿಸಿದರು.

ಮಂಗಳೂರು ಮಂಗಳಾದೇವಿ ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್:  ಹಿಂದೂ ಸ್ಟಾಲ್​ಗಳ ಮೇಲೆ ಹಾರಾಡಿದ 'ಭಗವಾಧ್ವಜ'
ಅಂಗಡಿಗಳ ಮುಂದೆ ಕೇಸರಿ ಧ್ವಜ
Follow us
ವಿವೇಕ ಬಿರಾದಾರ
|

Updated on:Oct 18, 2023 | 12:48 PM

ಮಂಗಳೂರು ಅ.18: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯಲ್ಲಿ ಮತ್ತೆ ಧರ್ಮ ಯುದ್ಧ ಶುರುವಾಗಿದೆ. ಮಂಗಳೂರಿನ (Mangaluru) ಮಂಗಳಾದೇವಿ (Mnagaladevi) ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಈ ವಿಚಾರ ಕಳೆದ ಎರಡ್ಮೂರು ದಿನಗಳಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಹಿಂದುಯೇತರರಿಗೂ ಅಂಗಡಿ ಇಡಲು ಜಿಲ್ಲಾಡಳಿತ ಅನುಮತಿ ನೀಡಿದ ಬೆನ್ನಲ್ಲೇ ಮಂಗಳಾದೇವಿ ದೇವಸ್ಥಾನದ ಎಲ್ಲಾ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಕೇಸರಿ ಧ್ವಜ ಹಾಕಿದ್ದಾರೆ.

ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ ದತ್ತನಗರ ಮಾತನಾಡಿ, ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಬೇಕು. “ಹಬ್ಬದ ಸಂದರ್ಭದಲ್ಲಿ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿದ ಮಂಗಳಾದೇವಿ ದೇವಸ್ಥಾನದ ಆಡಳಿತ ಮಂಡಳಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ಆದರೆ, ಜಿಲ್ಲಾಡಳಿತದ ವತಿಯಿಂದ ಮರು ಹರಾಜಿನಲ್ಲಿ ಹಿಂದೂಯೇತರಗೂ ಮಳಿಗೆಗಳನ್ನು ಹಾಕಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: ಗೋಪೂಜೆ ನಡೆಯುವ ದೇವಸ್ಥಾನದಲ್ಲಿ ಗೋಹತ್ಯೆ ಮಾಡುವವರಿಗೆ ಯಾಕೆ ಅವಕಾಶ: ಪ್ರಮೋದ್​ ಮುತಾಲಿಕ್​

ನವರಾತ್ರಿ ಜಾತ್ರೆಯ ಸಂದರ್ಭ ಮುಸ್ಲಿಂ ವ್ಯಾಪಾರಿಗಳಿಗೂ ಅಂಗಡಿ ಮುಂಗಟ್ಟು ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಉತ್ಸವ ವರ್ತಕರ ಸಮನ್ವಯ ಸಮಿತಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತ್ತು. ನಂತರ, ಕೆಲವು ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳಗಳ ಹರಾಜಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಯಿತು. ಆದರೆ ಈ ಕ್ರಮವನ್ನು ದತ್ತನಗರ ಅವರು ಪ್ರಶ್ನಿಸಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ, 1997 ರ ಪ್ರಕಾರ, ಹಿಂದೂಯೇತರರಿಗೆ ರಥಬೀದಿಯಲ್ಲಿ ವ್ಯಾಪಾರ ಮಾಡಲು ಅವಕಾಶವಿಲ್ಲ.

ಎಲ್ಲಾ ಹಿಂದೂ ವ್ಯಾಪಾರಿಗಳು ತಮ್ಮ ಜೀವನೋಪಾಯಕ್ಕಾಗಿ ಹಬ್ಬಗಳ ಸಮಯದಲ್ಲಿನ ವ್ಯಾಪಾರವನ್ನು ಮಾತ್ರ ಅವಲಂಬಿಸಿದ್ದಾರೆ. ಕೇಸರಿ ಧ್ವಜಗಳನ್ನು ಹಾಕಲಾಗಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳಿಗೆ ಮಾತ್ರ ಭಕ್ತರು ಭೇಟಿ ನೀಡಬೇಕು ಎಂದು ಮನವಿ ಮಾಡಿಕೊಂಡರು.

ವಿಎಚ್‌ಪಿಯ ಈ ನಿರ್ಧಾರವನ್ನು ಡಿವೈಎಫ್‌ಐ ಖಂಡಿಸಿದೆ. ವಿಹೆಚ್​ಪಿ ಬಡ ಹಿಂದೂ ಮತ್ತು ಮುಸ್ಲಿಂ ವ್ಯಾಪಾರಿಗಳ ನಡುವೆ ಬಿರುಕು ಮೂಡಿಸುತ್ತಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ಅವರು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Wed, 18 October 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​