AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸೆಮಿನಾರ್​ ತಪ್ಪಿಸಲು ಕಾಲೇಜು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ ಮೆಡಿಕಲ್​ ವಿದ್ಯಾರ್ಥಿನಿ

ಓರ್ವ ವೈದ್ಯಕೀಯ ವಿದ್ಯಾರ್ಥಿನಿ ಚೌಧರಿ ಅವರು ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆನೇ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. ಹುಸಿ ಬೆದರಿಕೆ ನೀಡಿದ್ದಕ್ಕೆ ಕಾರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಸೆಮಿನಾರ್​ ತಪ್ಪಿಸಲು ಕಾಲೇಜು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ ಮೆಡಿಕಲ್​ ವಿದ್ಯಾರ್ಥಿನಿ
ಉಳ್ಳಾಲ ವೈದ್ಯಕೀಯ ಕಾಲೇಜು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jun 07, 2025 | 6:31 PM

Share

ಮಂಗಳೂರು, ಜೂನ್​ 07: ಸೆಮಿನಾರ್​ ತಪ್ಪಿಸಲು ಓರ್ವ ವಿದ್ಯಾರ್ಥಿನಿ (Student) ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ (Medical College) ಬಾಂಬ್​ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಡಾ.ಚಲಸಾನಿ ಮೋನಿಕಾ ಚೌಧರಿ ಜೂ.4 ರಂದು ಸೆಮಿನಾರ್ ಕೊಡಬೇಕಿತ್ತು.

ಆದರೆ, ಈ ಸಮಿನಾರ್​ನಿಂದ ತಪ್ಪಿಸಿಕೊಳ್ಳಲು ಮೋನಿಕಾ ಜೂನ್ 4ರ ಬೆಳಗ್ಗೆ 8.15ಕ್ಕೆ ತಾನು ಓದುತ್ತಿರುವ ಕಣಚೂರು ಮೆಡಿಕಲ್ ಕಾಲೇಜಿನ ಹೆರಿಗೆ ವಾರ್ಡ್​ನ ಸ್ಥಿರ ದೂರವಾಣಿಗೆ ಕರೆ ಮಾಡಿ, “ಬೆಳಗ್ಗೆ 11ಕ್ಕೆ ಕಣಚೂರು ಆಸ್ಪತ್ರೆ ಸ್ಫೋಟಿಸುವುದಾಗಿ” ಬೆದರಿಕೆ ಹಾಕಿದ್ದಾರೆ.

ನಂತರ, ಮೋನಿಕಾ ಚೌಧರಿಯೇ ನಮ್ಮ ಕಾಲೇಜಿಗೆ ಬಾಂಬ್​ ಬೆದರಿಕೆ ಕರೆ ಬಂದಿದೆ ಎಂದು ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ, ದೂರು ನೀಡಿದ ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯೇ ಬಾಂಬ್​ ಬೆದರಿಕೆ ಹಾಕಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಮೋನಿಕಾ ಚೌಧರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಹುಸಿ ಬಾಂಬ್​ ಬೆದರಿಕೆ ಕರೆ ಮಾಡಿರುವ ಹಿಂದಿನ ಕಾರಣ ಗೊತ್ತಾಗಿದೆ.

ಇದನ್ನೂ ಓದಿ
Image
ಮನೆ ಮಾಲೀಕಳ ಬೆರಳು ಕಚ್ಚಿ ತುಂಡು ಮಾಡಿದ ಹೈದರಾಬಾದ್ ವ್ಯಕ್ತಿ
Image
ಮಂಗಳೂರು: ನೀರಿನ ಟ್ಯಾಂಕ್​​ ನಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ
Image
ಅಬ್ದುಲ್‌ ರಹಿಮಾನ್‌ ಕೊಲೆ ಕೇಸ್​: ಮತ್ತಿಬ್ಬರು ಆರೋಪಿಗಳ ಬಂಧನ
Image
ಸುಹಾಸ್ ಶೆಟ್ಟಿ ಕೊಲೆ ಕೇಸ್​: ಆರೋಪಿ ಅಬ್ದುಲ್ ರಜಾಕ್ ಬಂಧನ

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿಗೆ ಬಾಂಬ್​ ಬೆದರಿಕೆ ಕರೆ

ಬೆಂಗಳೂರಿನ ಪ್ರತಿಷ್ಠಿತ ಆಚಾರ್ಯ ಕಾಲೇಜಿನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದ. ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಈ ಬೆದರಿಕೆ ಸಂದೇಶ ಗಮನಕ್ಕೆ ಬಂದಿತ್ತು. ಜೊತೆಗೆ ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುವುದಾಗಿ ಬೆದರಿಕೆ ಹಾಕಲಾಗಿತ್ತು. ಬಳಿಕ ಕಾಲೇಜಿನ ಆಡಳಿತ ಮಂಡಳಿ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿತ್ತು.

ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

ಅದೇ ರೀತಿಯಾಗಿ ಇತ್ತೀಚೆಗೆ ರಾಯಚೂರಿನಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಬೆಳಿಗ್ಗೆ 6.50 ರ ಸುಮಾರಿಗೆ ರಾಯಚೂರು ಜಿಲ್ಲಾಧಿಕಾರಿಗಳ ಅಧಿಕೃತ ಖಾತೆಗೆ ಮೇಲ್ ಬಂದಿದ್ದು, ಬಾಂಬ್ ಬೆದರಿಕೆ ಒಡ್ಡಲಾಗಿತ್ತು.

ಇದನ್ನೂ ಓದಿ: ಸೋಶಿಯಲ್ ಮೀಡಿಯಾ ವೀರರ ಹೆಡೆಮುರಿ ಕಟ್ಟಿದ ಮಂಗಳೂರು ಖಾಕಿ: ಆರು ಜನರ ಬಂಧನ

ನಂತರ ಸಾರ್ವಜನಿಕರು ಭಯ ಬೀಳ್ಳುತ್ತಾರೆ ಎಂಬ ನಿಟ್ಟಿನಲ್ಲಿ ಈ ವಿಚಾರ ಗೌಪ್ಯವಾಗಿ ಇಡಲಾಗಿತ್ತು. ಬಳಿಕ ರಾಯಚೂರು ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಬಾಂಬ್ ನಿಗ್ರಹ ದಳ, ಶ್ವಾನ ದಳ ಸೇರಿದಂತೆ ಸಿಬ್ಬಂದಿಗಳು ಇಡೀ ಜಿಲ್ಲಾಧಿಕಾರಿಗಳ ಕಚೇರಿ ಪರಿಶೀಲನೆ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Sat, 7 June 25

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ