AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಗೆ ಎದುರಾದ ಬಜರಂಗದಳ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಬಜರಂಗದಳದ ಕಾರ್ಯಕರ್ತರು ಸಕ್ರಿಯರಾಗಿದ್ದು, ಮುಸ್ಲಿಂ ಯುವಕರೊಂದಿಗೆ ಹೋಗುವ ಹಿಂದೂ ಯುವತಿಯರನ್ನು ತಡೆದು ಪ್ರಶ್ನೆಗಳನ್ನು ಹಾಕುತ್ತಿದ್ದಾರೆ. ಅಲ್ಲದೆ ಸಾಫ್ಟ್ ಹಿಂದುತ್ವ ಬಿಡುವಂತೆ ವಿಶ್ವ ಸನಾತನ ಪರಿಷತ್ ಅಧ್ಯಕ್ಷರು ಹೇಳಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಗೆ ಎದುರಾದ ಬಜರಂಗದಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 17, 2022 | 12:48 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನೈತಿಕ ಪೊಲೀಸ್​ಗಿರಿ (Moral policing) ನಡೆಯುತ್ತಿದೆ. ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಗೆ ಎದುರಾದ ಬಜರಂಗದಳದ (Bajrang Dal) ಕಾರ್ಯಕರ್ತರು ಪ್ರಶ್ನಿಸಿದ ಘಟನೆ ಮಂಗಳೂರಿನ ಬಿಜೈ ಬಳಿಯ ಭಾರತ್ ಚಿತ್ರಮಂದಿರ (Bharat Theatre) ಬಳಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಉರ್ವಾ ಠಾಣಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಯುವಕ-ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಟ್ಟು ಕಳುಹಿಸಿದ್ದಾರೆ. ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯುವಂತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ವಿಶ್ವ ಸನಾತನ ಪರಿಷತ್ ಆಗ್ರಹಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಹೆಚ್ಚಾದ ನೈತಿಕ ಪೊಲೀಸ್ ಗಿರಿ: ಹಿಂದೂ ಯುವತಿ- ಮುಸ್ಲಿಂ ಯುವಕ ಪ್ರಯಾಣಿಸುತ್ತಿದ್ದ ಬಸ್ ತಡೆದು ಭಜರಂಗದಳ ಕಾರ್ಯಕರ್ತರ ಗಲಾಟೆ

ಬಿಜೆಪಿಯ ಸಾಫ್ಟ್ ಹಿಂದುತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿಶ್ವ ಸನಾತನ ಪರಿಷತ್ತಿನ ಅಧ್ಯಕ್ಷ ಭಾಸ್ಕರನ್, ನಿಮಗೆ ವೋಟು ಹಾಕಿ ಅಧಿಕಾರಕ್ಕೆ ತಂದಿರೋದು ಹಿಂದೂ ಸಂಘಟನೆಗಳು. ಆದರೆ ಬೇರೆ ಧರ್ಮದ ಮೇಲೆ ಯಾಕೆ ಇಷ್ಟೊಂದು ವಾತ್ಸಲ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಚುನಾವಣೆ ಸಮಯದಲ್ಲಿ ಯಾರಿಗೆ ಮಣ್ಣು ಹಾಗಬೇಕು ಅನ್ನೋದು ನಮಗೆ ಗೊತ್ತು. ಸಾಫ್ಟ್ ಹಿಂದುತ್ವ ಬೇಕಾಗಿಲ್ಲ. ಮೊದಲು ಜಿಹಾದಿ ಪೋರ್ಸ್​​ಗಳನ್ನು ತಡೆಯಿರಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: Moral Policing: ಕಾಂತಾರ ವೀಕ್ಷಿಸಲು ಥಿಯೇಟರ್​ಗೆ ಬಂದ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್​ಗಿರಿ, ಹಲ್ಲೆಗೆ ಯತ್ನಿಸಿದ್ದ ವಿಡಿಯೊ ವೈರಲ್

ಹಿಂದೂ ಹುಡುಗಿಯರೊಂದಿಗೆ ಸ್ನೇಹ ಬೆಳೆಸಿ ಬಲೆಗೆ ಕೆಡವಿಕೊಳ್ಳಲು ಮುಸ್ಲಿಂ ಯುವಕರ ಗ್ಯಾಂಗ್ ತಯಾರಿಸಲಾಗಿದೆ. ನಿರಂತರವಾಗಿ ಹಿಂದೂ ಯುವತಿಯರ ಬ್ರೈನ್ ವಾಷ್ ಮಾಡಲಾಗುತ್ತಿದೆ. ನಾವೇನಾದರು ಅವರನ್ನು ತಡೆದರೆ ನೈತಿಕ ಪೊಲೀಸ್ ಗಿರಿ ಅಂತಾ ಆಗುತ್ತದೆ. ಇದೆಲ್ಲವೂ ಬೇಡ‌ ಮೊದಲು ಲವ್ ಜಿಹಾದ್ ತಡೆಯಲು ಪೊಲೀಸ್ ಪಡೆ ತನ್ನಿ. ಇಲ್ಲದೇ ಇದ್ದರೆ ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿ ಪಕ್ಷದ ವಿರುದ್ಧವೇ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sat, 17 December 22

ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ