ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿದ ತಾಯಿ, ಉಡುಪಿಯಲ್ಲಿ ಮಹಿಳಾ ಪೇದೆ ಆತ್ಮಹತ್ಯೆ
ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನ್ನೆ (ಮಾ.29) ಮಧ್ಯಾಹ್ನದ ವೇಳೆ ತಾಯಿ-ಮಗು ನಾಪತ್ತೆಯಾಗಿದ್ದರು. ಈ ಹಿನ್ನಲೆ ಸಂಬಂಧಿಕರು, ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು. ಇದೀಗ ಮೃತದೇಹ ಪತ್ತೆಯಾಗಿದೆ.
![ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿದ ತಾಯಿ, ಉಡುಪಿಯಲ್ಲಿ ಮಹಿಳಾ ಪೇದೆ ಆತ್ಮಹತ್ಯೆ](https://images.tv9kannada.com/wp-content/uploads/2024/03/mangalore-mother-jumps-into-netravati-river-with-child-woman-policeman-commits-suicide-in-udupi.jpg?w=1280)
ದಕ್ಷಿಣ ಕನ್ನಡ, ಮಾ.30: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ರ್ದುದೈವಿಗಳು. ಇಬ್ಬರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬ ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದ ಚೈತ್ರ. ನಿನ್ನೆ (ಮಾ.29) ಮಧ್ಯಾಹ್ನದ ವೇಳೆ ತಾಯಿ-ಮಗು ನಾಪತ್ತೆಯಾಗಿದ್ದರು. ಈ ಹಿನ್ನಲೆ ಸಂಬಂಧಿಕರು, ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು. ಇದೀಗ ಮೃತದೇಹ ಪತ್ತೆಯಾಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಉಡುಪಿಯಲ್ಲಿ ಮಹಿಳಾ ಕಾನ್ಸ್ಟೇಬಲ್ ಆತ್ಮಹತ್ಯೆ
ಉಡುಪಿ: ಜಿಲ್ಲೆಯ ಕಾಪು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಪೊಲೀಸ್ ಕ್ವಾರ್ಟರ್ಸ್ನಲ್ಲಿಯೇ ನೇಣಿಗೆ ಶರಣಾದ ಘಟನೆ ನಡೆದಿದೆ. ಜ್ಯೋತಿ ಮೃತ ರ್ದುದೈವಿ. ಇವರು ಬಾಗಲಕೋಟೆ ಮೂಲದವರಾಗಿದ್ದು, ಉಡುಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ದಿಢೀರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಶಂಕೆ ವ್ಯಕ್ತಿಯಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಐವರು ಹೆಣ್ಣುಮಕ್ಕಳಿಗೆ ವಿಷವುಣಿಸಿ ತಾಯಿಯೂ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ
ಸೀಬೆಹಣ್ಣಿನ ತೋಟಕ್ಕೆ ಬೆಂಕಿ
ಕೋಲಾರ: ಬಂಗಾರಪೇಟೆ ತಾಲೂಕಿನ ಚಿಕ್ಕಹೊಲಗಮಾದಿ ಗ್ರಾಮದಲ್ಲಿ ಸೀಬೆ ಹಣ್ಣಿನ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿದೆ. ಇದು ಮಾಜಿ ಶಾಸಕ ನಂದೀಶ್ ರೆಡ್ಡಿಗೆ ಸೇರಿದ ಸೀಬೆ ತೋಟ ಆಗಿದ್ದು, ಕರೆ ಮಾಡಿದರೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಾರದ ಹಿನ್ನಲೆ ಬೆಂಕಿ ನಂದಿಸಲು ಸ್ಥಳೀಯರೇ ಹರಸಾಹಸ ಪಡುವಂತಾಗಿದೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:07 pm, Sat, 30 March 24