AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಯತ್ನವೇ ಕಾರಣ -ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗ

ನಾಗೇಶ್ ಡಿ. 7 ರ ರಾತ್ರಿ ಮೂರು ಶವಗಳ ಮಧ್ಯೆಯೇ ನಾಗೇಶ್ ನಿದ್ದೆ ಮಾಡಿದ್ದ. ಡಿ. 8 ರ ಬೆಳಗ್ಗೆ ಎಎಸ್‌ಐ ಚಂದ್ರಶೇಖರ್‌ಗೆ ವಾಯ್ಸ್ ಸಂದೇಶ್ ಕಳುಹಿಸಿದ್ದ. ಜೊತೆಗೆ ಆರೋಪಿ ನೂರ್ ಜಹಾನ್ ಪೋಟೋ ಸಹ ಕಳುಹಿಸಿದ್ದ. ಘಟನಾವಳಿಗಳ ಬಗ್ಗೆಯೂ ನಾಗೇಶ್ ಸಂಪೂರ್ಣ ಮಾಹಿತಿಯನ್ನ ಕೊಟ್ಟಿದ್ದ ಎಂದು ಆಯುಕ್ತ ಶಶಿಕುಮಾರ್ ವಿವರವಾಗಿ ಹೇಳಿದ್ದಾರೆ.

ಮಂಗಳೂರು: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಯತ್ನವೇ ಕಾರಣ -ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗ
ಮಂಗಳೂರು: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಯತ್ನವೇ ಕಾರಣ -ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 11, 2021 | 2:13 PM

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಮತಾಂತರ ಯತ್ನವೇ ಕಾರಣ ಎಂಬುದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ವಿಜಯಲಕ್ಷ್ಮಿಯನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ನೂರ್ ಜಹಾನ್ ಎಂಬ ಮಹಿಳೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ನಲ್ಲಿ ನಾಲ್ವರು ಆತ್ಮಹತ್ಯೆ ಕೇಸ್ ನಲ್ಲಿ ಮತಾಂತರ ಆರೋಪ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಗ್ಗೆ ಟಿವಿ9 ಜೊತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿದ್ದು, ವಿಜಯಲಕ್ಷ್ಮೀ ತಮ್ಮ ಇಬ್ಬರು ಮಕ್ಕಳ ಜತೆ ಜಹಾನ್ ಮನೆಯಲ್ಲಿ ಇದ್ದಳು. ಜಹಾನ್, ನಾಗೇಶ್ ಜತೆ ಸಾಕಷ್ಟು ಬಾರಿ ಗಲಾಟೆ ಮಾಡಿದ್ದಳು. ನಾಗೇಶ್, ನೂರ್ ಜಹಾನ್ ಮನೆಗೆ ಹೋಗಿ ತಮ್ಮ ಕುಟುಂಬಸ್ಥರ ಬಗ್ಗೆ ಮಾತನಾಡುತ್ತಿದ್ದರು. ನನ್ನ ಪತ್ನಿ, ಮಕ್ಕಳನ್ನ ಕಳುಹಿಸಿ ಎಂದು ಕೇಳಿಕೊಳ್ಳುತ್ತಿದ್ದರು. ನಾಗೇಶ್ ತನ್ನ ಮಕ್ಕಳು, ಪತ್ನಿ ನಾಪತ್ತೆ ಎಂದು ದೂರು ನೀಡಿದ್ದ. ಆದರೆ ಗಂಡ ನನಗೆ ಹಿಂಸೆ ನೀಡುತ್ತಾರೆ ಎಂದು ಪತ್ನಿ ಪ್ರತಿದೂರು ನೀಡಿದ್ದಳು. ಮೂವರನ್ನ ಕೊಲೆ ಮಾಡಿ ನಾಗೇಶ್ ನೇಣು ಹಾಕಿಕೊಂಡಿದ್ದಾನೆ ಎಂದು ಆಯುಕ್ತ ಶಶಿಕುಮಾರ್ ವಿವರಿಸಿದ್ದಾರೆ (mangalore police commissioner, IPS shashikumar).

ನೂರ್ ಜಹಾನ್ ಮತ್ತೊಂದು ಮದುವೆ ಮಾಡುವ ಭರವಸೆ ನೀಡಿದ್ದಳು. ನಾಗೇಶ್​ಗೆ ಕುಡಿಯುವ ಚಟ ಇತ್ತು. ರಾತ್ರಿ 11.30 ಸುಮಾರಿಗೆ ಕೊಲೆ ಮಾಡಿದ್ದಾನೆ. ಎಎಸ್​ಐಗೆ ನಾಗೇಶ್ ವಾಯ್ಸ್ ಮೆಸೇಜ್ ಕಳುಹಿಸಿದ್ದ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾನೆ ಎಂದು ಟಿವಿ9ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಡಿಸೆಂಬರ್ 7ರ ರಾತ್ರಿ ಮೊದಲು ತಲೆದಿಂಬಿನಿಂದ ಉಸಿರುಗಟ್ಟಿಸಿ ಪತ್ನಿ ವಿಜಯಲಕ್ಷ್ಮೀಯನ್ನ ನಾಗೇಶ್ ಕೊಂದಿದ್ದ. ನಂತರ ತನ್ನ ಮಗಳಾದ ಸಪ್ನಳನ್ನ ಮೂಗು ಬಾಯಿ ಮುಚ್ಚಿ ಸಾಯಿಸಿದ್ದಾನೆ. ಮಗ ಸಮರ್ಥ್‌ನನ್ನ ಕುತ್ತಿಗೆ ಹಿಸುಕಿ ನಾಗೇಶ್ ಕೊಲೆ ಮಾಡಿದ್ದಾನೆ.

ನಾಗೇಶ್ ಡಿಸೆಂಬರ್‌ 7 ರ ರಾತ್ರಿ ಮೂರು ಶವಗಳ ಮಧ್ಯೆಯೇ ನಾಗೇಶ್ ನಿದ್ದೆ ಮಾಡಿದ್ದ. ಡಿಸೆಂಬರ್ 8ರ ಬೆಳಗ್ಗೆ ಎಎಸ್‌ಐ ಚಂದ್ರಶೇಖರ್‌ಗೆ ವಾಯ್ಸ್ ಸಂದೇಶ್ ಕಳುಹಿಸಿದ್ದ. ಜೊತೆಗೆ ಆರೋಪಿ ನೂರ್ ಜಹಾನ್ ಪೋಟೋ ಸಹ ಕಳುಹಿಸಿದ್ದ. ಘಟನಾವಳಿಗಳ ಬಗ್ಗೆಯೂ ನಾಗೇಶ್ ಸಂಪೂರ್ಣ ಮಾಹಿತಿಯನ್ನ ಕೊಟ್ಟಿದ್ದ ಎಂದು ಆಯುಕ್ತ ಶಶಿಕುಮಾರ್ ವಿವರವಾಗಿ ಹೇಳಿದ್ದಾರೆ.

ಹೊಸ ಸಿನಿಮಾಕ್ಕಾಗಿ ಸಾಕಷ್ಟು ಕಸರತ್ತು ಮಾಡಿರುವ ಅಜಯ್ ರಾವ್
ಹೊಸ ಸಿನಿಮಾಕ್ಕಾಗಿ ಸಾಕಷ್ಟು ಕಸರತ್ತು ಮಾಡಿರುವ ಅಜಯ್ ರಾವ್
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ