AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಾಂಗ್ರೆಸ್​ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್

ನಿನ್ನೆ ನಡೆದ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಉಮನಾಥ್ ಕೋಟ್ಯಾನ್ ಅವರು, ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಎಂದಿದ್ದಾರೆ.

ಮಂಗಳೂರು: ಕಾಂಗ್ರೆಸ್​ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್
ಶಾಸಕ ಉಮಾನಾಥ್ ಕೋಟ್ಯಾನ್
ಅಶೋಕ್​ ಪೂಜಾರಿ
| Edited By: ಆಯೇಷಾ ಬಾನು|

Updated on: Mar 11, 2024 | 1:17 PM

Share

ಮಂಗಳೂರು, ಮಾರ್ಚ್​.11: ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ ಭರ್ಜರಿ ತಯಾರಿ ಶುರು ಮಾಡಿದೆ. ಕರ್ನಾಟಕದ ಚುಕ್ಕಾಣಿ ಹಿಡಿಯಬೇಕೆಂದು ಬಿಜೆಪಿ ನಾನಾ ತಂತ್ರಗಳನ್ನು ಹೆಣೆಯುತ್ತಿದೆ. ಇಂತಹ ಸಮಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ (Umanath Kotian) ಅವರು ಕಾಂಗ್ರೆಸ್​ನ ರಕ್ಷಿತ್ ಶಿವರಾಂ (Rakshit Shivaram) ಅವರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ.

ಬೆಳ್ತಂಗಡಿ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿ‌ ರಕ್ಷಿತ್ ಶಿವರಾಂ ಸೋಲಿನ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ಹೊರ ಹಾಕಿದ್ದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತನ್ನ ಸಮಾಜದ ಕಾಂಗ್ರೆಸ್ ನಾಯಕ ಸೋತ ಕಾರಣಕ್ಕೆ ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

ಇದನ್ನೂ ಓದಿ:ಕರ್ನಾಟಕದಿಂದ ಸ್ಪರ್ಧಿಸಲಿರುವ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಂದು ಅಂತಿಮಗೊಳ್ಳಬಹುದು: ಬಿಎಸ್ ಯಡಿಯೂರಪ್ಪ

ಮಾರ್ಚ್.10ರಂದು ನಡೆದ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಭಾಗಿಯಾಗಿದ್ದ ಉಮನಾಥ್ ಕೋಟ್ಯಾನ್ ಅವರು, ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳಿಗೆ ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ಪಕ್ಷ ಯಾವುದಾದರೂ ಪರವಾಗಿಲ್ಲ ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಎಂಬ ರೀತಿಯಲ್ಲಿ ಕರೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ಬಿಲ್ಲವ ಅಭ್ಯರ್ಥಿ ರಕ್ಷಿತ್ ಶಿವರಾಂ ಚುನಾವಣೆ ಎದುರಿಸಿ ಸೋತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಹು ಸಂಖ್ಯಾತ ಬಿಲ್ಲವರೇ ಇರುವಾಗ ರಕ್ಷಿತ್ ಯಾಕೆ ಸೋತಿದ್ದಾರೆ? ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ.ಕಾಂಗ್ರೆಸ್​ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ತೊಂದರೆಯಾಗುತ್ತೆ ಎಂಬ ಭಯ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಅದ್ಯಾಕೆ ಬಿಲ್ಲವ ಸಮಾಜದವರಿಗೆ ಈ ಹಿಂಜರಿಕೆ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಕರೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ