AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ತಲ್ವಾರ್ ತೋರಿಸಿ ದನಕಳವು ಮಾಡಿದ್ದ ನಾಲ್ವರ ಬಂಧನ

ಶುಕ್ರವಾರ ರಾತ್ರಿ ಬಂಗ್ರಕುಳೂರು ಬಳಿಯ ಮನೆಯ ಹಟ್ಟಿಗೆ ನುಗ್ಗಿ 3 ದನಗಳನ್ನು ಕಳವು ಮಾಡಿದ್ದರು. ಕಳುವಾದ ದನಗಳು ಉಮೇಶ್ ಮಲರಾಯಸಾನ ಹಾಗೂ ಉದಯ ಶೆಟ್ಟಿ ಅವರದ್ದು ಎಂದು ತಿಳಿದುಬಂದಿದೆ.

ಮಂಗಳೂರು: ತಲ್ವಾರ್ ತೋರಿಸಿ ದನಕಳವು ಮಾಡಿದ್ದ ನಾಲ್ವರ  ಬಂಧನ
TV9 Web
| Updated By: Digi Tech Desk|

Updated on:Dec 04, 2021 | 4:00 PM

Share

ಮಂಗಳೂರು: ಶುಕ್ರವಾರ (ಡಿ.03) ಮಂಗಳೂರು ಹೊರವಲಯದ ಬಂಗ್ರಕುಳೂರಿನಲ್ಲಿ ಮಾರಾಕಾಯುಧಗಳನ್ನು ತೋರಿಸಿ 3 ದನಗಳನ್ನು ಕದ್ದಯೊಯ್ದಿದ್ದ ನಾಲ್ವರು ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಕಾವೂರು ಪೊಲೀಸರು ಆರೊಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಉಳ್ಳಾಲದ ಮಹಮ್ಮದ್ ಸಲೀಂ (32). ಮಹಮದ್ ತಂಜಿಲ್(25), ಮಹಮದ್ ಇಕ್ಬಾಲ್( 23) ಮತ್ತು ಮಹಮದ್​ ಅಫ್ರೀದ್​ ಬಂಧಿತ ಆರೋಪಿಗಳು.

ನಿನ್ನೆ ರಾತ್ರಿ ಬಂಗ್ರಕುಳೂರು ಬಳಿಯ ಮನೆಯ ಹಟ್ಟಿಗೆ ನುಗ್ಗಿ 3 ದನಗಳನ್ನು ಕಳವು ಮಾಡಿದ್ದರು. ಕಳುವಾದ ದನಗಳು ಉಮೇಶ್ ಮಲರಾಯಸಾನ ಹಾಗೂ ಉದಯ ಶೆಟ್ಟಿ ಅವರದ್ದು ಎಂದು ತಿಳಿದುಬಂದಿದೆ. ಕದ್ದ 2 ದನಗಳು ಉಮೇಶ್ ಹಾಗೂ ಒಂದು ದನ ಉದಯ್​ ಶೆಟ್ಟಿ ಅವದ್ದು ಎಂದು ಹೇಳಲಾಗಿದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ರಾತ್ರಿ ವೇಳೆ ಬಂದ ನಾಲ್ವರು ದುಷ್ಕರ್ಮಿಗಳು ತಲ್ವಾರ್ ತೋರಿಸಿ ಉಮೇಶ್​ ಹಾಗೂ ಉದಯ ಶೆಟ್ಟಿ ಅವರನ್ನು ಹೆದರಿಸಿ 3 ದನಗಳನ್ನು ಎಳೆದೊಯ್ದಿದ್ದರು. ದನಗಳನ್ನು ಕಳವು ಮಾಡಿದ್ದಲ್ಲದೆ ಅವುಗಳನ್ನು ಕೊಂದು ತಿಂದಿದ್ದಾರೆ ಎಂದು ಆರೋಪಿಲಾಗಿದೆ.

ಈ ಕುರಿತು ಉಮೇಶ್​ ಮತ್ತು ಉದಯ್​ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಇದರ ಜತೆಗೆ ಕಳ್ಳತನಕ್ಕೆ ಬಳಸಿದ್ದ ತಲ್ವಾರ್, ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Published On - 3:57 pm, Sat, 4 December 21

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ