AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ತಲ್ವಾರ್ ತೋರಿಸಿ ದನಕಳವು ಮಾಡಿದ್ದ ನಾಲ್ವರ ಬಂಧನ

ಶುಕ್ರವಾರ ರಾತ್ರಿ ಬಂಗ್ರಕುಳೂರು ಬಳಿಯ ಮನೆಯ ಹಟ್ಟಿಗೆ ನುಗ್ಗಿ 3 ದನಗಳನ್ನು ಕಳವು ಮಾಡಿದ್ದರು. ಕಳುವಾದ ದನಗಳು ಉಮೇಶ್ ಮಲರಾಯಸಾನ ಹಾಗೂ ಉದಯ ಶೆಟ್ಟಿ ಅವರದ್ದು ಎಂದು ತಿಳಿದುಬಂದಿದೆ.

ಮಂಗಳೂರು: ತಲ್ವಾರ್ ತೋರಿಸಿ ದನಕಳವು ಮಾಡಿದ್ದ ನಾಲ್ವರ  ಬಂಧನ
TV9 Web
| Edited By: |

Updated on:Dec 04, 2021 | 4:00 PM

Share

ಮಂಗಳೂರು: ಶುಕ್ರವಾರ (ಡಿ.03) ಮಂಗಳೂರು ಹೊರವಲಯದ ಬಂಗ್ರಕುಳೂರಿನಲ್ಲಿ ಮಾರಾಕಾಯುಧಗಳನ್ನು ತೋರಿಸಿ 3 ದನಗಳನ್ನು ಕದ್ದಯೊಯ್ದಿದ್ದ ನಾಲ್ವರು ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಕಾವೂರು ಪೊಲೀಸರು ಆರೊಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಉಳ್ಳಾಲದ ಮಹಮ್ಮದ್ ಸಲೀಂ (32). ಮಹಮದ್ ತಂಜಿಲ್(25), ಮಹಮದ್ ಇಕ್ಬಾಲ್( 23) ಮತ್ತು ಮಹಮದ್​ ಅಫ್ರೀದ್​ ಬಂಧಿತ ಆರೋಪಿಗಳು.

ನಿನ್ನೆ ರಾತ್ರಿ ಬಂಗ್ರಕುಳೂರು ಬಳಿಯ ಮನೆಯ ಹಟ್ಟಿಗೆ ನುಗ್ಗಿ 3 ದನಗಳನ್ನು ಕಳವು ಮಾಡಿದ್ದರು. ಕಳುವಾದ ದನಗಳು ಉಮೇಶ್ ಮಲರಾಯಸಾನ ಹಾಗೂ ಉದಯ ಶೆಟ್ಟಿ ಅವರದ್ದು ಎಂದು ತಿಳಿದುಬಂದಿದೆ. ಕದ್ದ 2 ದನಗಳು ಉಮೇಶ್ ಹಾಗೂ ಒಂದು ದನ ಉದಯ್​ ಶೆಟ್ಟಿ ಅವದ್ದು ಎಂದು ಹೇಳಲಾಗಿದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ರಾತ್ರಿ ವೇಳೆ ಬಂದ ನಾಲ್ವರು ದುಷ್ಕರ್ಮಿಗಳು ತಲ್ವಾರ್ ತೋರಿಸಿ ಉಮೇಶ್​ ಹಾಗೂ ಉದಯ ಶೆಟ್ಟಿ ಅವರನ್ನು ಹೆದರಿಸಿ 3 ದನಗಳನ್ನು ಎಳೆದೊಯ್ದಿದ್ದರು. ದನಗಳನ್ನು ಕಳವು ಮಾಡಿದ್ದಲ್ಲದೆ ಅವುಗಳನ್ನು ಕೊಂದು ತಿಂದಿದ್ದಾರೆ ಎಂದು ಆರೋಪಿಲಾಗಿದೆ.

ಈ ಕುರಿತು ಉಮೇಶ್​ ಮತ್ತು ಉದಯ್​ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಇದರ ಜತೆಗೆ ಕಳ್ಳತನಕ್ಕೆ ಬಳಸಿದ್ದ ತಲ್ವಾರ್, ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Published On - 3:57 pm, Sat, 4 December 21

Follow Us
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್