AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯ ಗುಂಡ್ಯ ಹೆದ್ದಾರಿ ಸಮೀಪವೇ ನಕ್ಸಲ್ ಚಟುವಟಿಕೆ ಶಂಕೆ: ಪೊಲೀಸ್, ಎಎನ್‌ಎಫ್ ತಂಡದಿಂದ ತೀವ್ರಗೊಂಡ ಶೋಧ ಕಾರ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮತ್ತೆ ನಕ್ಸಲ್ ಚಟುವಟಿಕೆಯ ಅನುಮಾನ ಬಲವಾಗಿದೆ. ಇತ್ತೀಚೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಅರಣ್ಯದ ಅಂಚಿನಲ್ಲಿರುವ ಮನೆಯೊಂದಕ್ಕೆ ಶಂಕಿತ ನಕ್ಸಲರು ಬಂದು ಹೋಗಿರುವ ಕಾರಣ ಆ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆಯ ಅಧಿಕಾರಿಗಳು ಶೋಧಕಾರ್ಯ ತೀವ್ರಗೊಳಿಸಿದ್ದಾರೆ.

ಸುಬ್ರಹ್ಮಣ್ಯ ಗುಂಡ್ಯ ಹೆದ್ದಾರಿ ಸಮೀಪವೇ ನಕ್ಸಲ್ ಚಟುವಟಿಕೆ ಶಂಕೆ: ಪೊಲೀಸ್, ಎಎನ್‌ಎಫ್ ತಂಡದಿಂದ ತೀವ್ರಗೊಂಡ ಶೋಧ ಕಾರ್ಯ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 08, 2024 | 7:36 AM

Share

ಮಂಗಳೂರು, ಏಪ್ರಿಲ್ 8: ಕಡಬ ತಾಲೂಕಿನ ಬಿಳಿನೆಲೆ (Bilinele) ಗ್ರಾಮದ ಚೇರು ಎಂಬಲ್ಲಿ ಅರಣ್ಯದ ಅಂಚಿನಲ್ಲಿರುವ ಮನೆಯೊಂದಕ್ಕೆ ಗುರುವಾರ ರಾತ್ರಿ ಮುಸುಕು ಹಾಕಿಕೊಂಡು, ಆಯುಧಗಳ ಸಮೇತ ಬಂದಿದ್ದ ಶಂಕಿತ ನಕ್ಸಲರ (Naxals) ತಂಡದಲ್ಲಿ ಆರು ಮಂದಿ ಸದಸ್ಯರಿದ್ದರು ಎಂದು ಮೂಲಗಳು ಖಚಿತಪಡಿಸಿವೆ. ಸದಸ್ಯರೆಲ್ಲರೂ ಒಂದೇ ತರಹದ ಡ್ರೆಸ್, ಬೂಟುಗಳನ್ನು ಧರಿಸಿ ದೊಡ್ಡ ಬ್ಯಾಗ್​​ಗಳನ್ನು ಹಿಡಿದುಕೊಂಡಿದ್ದರು. ಅವರ ಬ್ಯಾಗ್‌ಗಳಲ್ಲಿ ಗನ್‌ನಂತಹ ಸಾಧನಗಳು ಇದ್ದವು ಎಂದು ಮನೆ ಮಂದಿ ಹೇಳಿದ್ದಾರೆ.

ಶಂಕಿತ ನಕ್ಸಲರ ಗ್ಯಾಂಗ್ ಸದಸ್ಯರು ಮನೆಯೊಂದಕ್ಕೆ ನುಗ್ಗಿ ಅಲ್ಲಿನ ಲೈಟ್‌ಗಳನ್ನು ಆಫ್ ಮಾಡಿದ್ದರು. ಮನೆಯ ಮಾಲೀಕರಿಗೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಲು ಹೇಳಿದ್ದರು. ನಂತರ ಟಿವಿಯ ವಾಲ್ಯೂಮ್ ಕೂಡ ಹೆಚ್ಚಿಸಿದ್ದರು. ಇನ್ನು ನಾಲ್ವರು ಮನೆಯ ಮುಂಭಾಗ ಮತ್ತು ಹಿತ್ತಲಲ್ಲಿ ಕಾವಲುಗಾರರಾಗಿ ನಿಂತಿದ್ದರು.

ನಂತರ ನಕ್ಸಲರು ಆಹಾರ ತಯಾರಿಸಲು ಹೇಳಿ ಅನ್ನ ಮತ್ತು ಚಿಕನ್ ಕರಿ ಸೇವಿಸಿದ್ದಾರೆ. ಮನೆಯವರು ನೋಡುತ್ತಿದ್ದ ಟಿವಿ ಧಾರಾವಾಹಿಯನ್ನೂ ನೋಡಿ ಮನೆಯಿಂದ ದಿನಸಿ ಸಾಮಾನುಗಳನ್ನು ತೆಗೆದುಕೊಂಡು ಕಾಡಿಗೆ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ತಂಗಿದ್ದ ಸಮಯದಲ್ಲಿ ಅವರ ಆರು ಮೊಬೈಲ್ ಫೋನ್ ಹ್ಯಾಂಡ್‌ಸೆಟ್‌ಗಳು ಮತ್ತು ಲ್ಯಾಪ್‌ಟಾಪ್ ಅನ್ನು ಮನೆಯಲ್ಲಿ ಚಾರ್ಜ್ ಮಾಡಿದ್ದಾರೆ. ಮನೆಯ ಸದಸ್ಯರು ನೀಡಿದ ಮಾಹಿತಿಯಂತೆ ಕನ್ನಡ ಹಾಗೂ ಇತರೆ ಭಾಷೆಗಳಲ್ಲಿ ಮಾತನಾಡುತ್ತಿದ್ದರು.

ನಕ್ಸಲರ ಭೇಟಿಯ ಸುಳಿವು ದೊರೆತ ತಕ್ಷಣ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆಯ (ಎಎನ್‌ಎಫ್) ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಮನೆಗೆ ಧಾವಿಸಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾಂಗ್‌ಗಾಗಿ ಹುಡುಕಾಟ ನಡೆಸಿದ್ದಾರೆ. ನಕ್ಸಲರು ಭೇಟಿ ನೀಡಿದ ಮನೆ ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯಿಂದ ಸ್ವಲ್ಪ ದೂರದಲ್ಲಿರುವ ಕಾಡಿನ ಅಂಚಿನಲ್ಲಿದೆ.

10 ರಿಂದ 12 ವರ್ಷಗಳ ನಂತರ ಈ ಪ್ರದೇಶಕ್ಕೆ ನಕ್ಸಲರು ಆಗಾಗ ಭೇಟಿ ನೀಡುತ್ತಿರುವುದು ಕಂಡು ಬರುತ್ತಿದೆ. ಪರಿಣಾಮವಾಗಿ ಸ್ಥಳೀಯರು ಭಯಭೀತರಾಗಿದ್ದಾರೆ. ಆ ಪ್ರದೇಶದಲ್ಲಿ ಪೊಲೀಸರು ಬೀಟ್‌ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಈ ಮಧ್ಯೆ, ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆ ಚುರುಕುಗೊಂಡಿದೆ.

ಉಡುಪಿ ಜಿಲ್ಲೆಯ ಕೆಲವು ಕಡೆ ಸಹ ನಕ್ಸಲರು ಭೇಟಿ ನೀಡಿದ್ದ ಬಗ್ಗೆ ಇತ್ತೀಚೆಗೆ ವರದಿಗಾಗಿತ್ತು. ಇತ್ತೀಚೆಗೆ ಕೆಲವು ಮನೆಗಳಿಗೆ ಶಸ್ತ್ರಸಜ್ಜಿತ ನಕ್ಸಲರು ಭೇಟಿ ನೀಡಿದ್ದರು ಎಂದು ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಸ್ಥರು ಹೇಳಿಕೊಂಡಿದ್ದರು. ಹೀಗಾಗಿ ಉಡುಪಿ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಇದೀಗ ಕಣ್ಗಾವಲು ಹೆಚ್ಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು