AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣ: ಬಾಲಕ ಕೊನೆಗೂ ಉಡುಪಿಯಲ್ಲಿ ಪತ್ತೆ

ವಿದ್ಯಾರ್ಥಿ ದಿಗಂತ್ ನಾಪತ್ತೆಯಾದ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ. ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಹೈಕೋರ್ಟ್‌ ಮಧ್ಯಪ್ರವೇಶ, ತೀವ್ರ ಪೊಲೀಸ್ ಕಾರ್ಯಾಚರಣೆ ನಂತರ ಈ ಪ್ರಕರಣ ಬೇಧಿಸಲಾಗಿದೆ. ದಿಗಂತ್ ತನ್ನ ತಾಯಿಗೆ ಫೋನ್ ಮಾಡಿ ಉಡುಪಿಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ. ಸದ್ಯ ಆತನನ್ನು ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ.

ಮಂಗಳೂರು ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣ: ಬಾಲಕ ಕೊನೆಗೂ ಉಡುಪಿಯಲ್ಲಿ ಪತ್ತೆ
ವಿದ್ಯಾರ್ಥಿ ದಿಗಂತ್ ಹಾಗೂ ಆತನಿಗಾಗಿ ನಡೆದಿದ್ದ ಡ್ರೋನ್ ಹುಡುಕಾಟದ ಚಿತ್ರ
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on:Mar 08, 2025 | 6:07 PM

Share

ಮಂಗಳೂರು, ಮಾರ್ಚ್​ 8: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಬೇಧಿಸುವಲ್ಲಿ ಕೊನೆಗೂ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆಬ್ರವರಿ 25 ರಂದು ನಾಪತ್ತೆಯಾಗಿದ್ದ. ಪೊಲೀಸರು ಹುಡುಕಾಟ, ತನಿಖೆ ತೀವ್ರಗೊಳಿಸಿದ್ದರೂ ಆತನ ಸುಳಿವೇ ದೊರೆತಿರಲಿಲ್ಲ. ಇದೀಗ ದಿಢೀರಾಗಿ ಬಾಲಕ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿಯ ಡಿ ಮಾರ್ಟ್​ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ.

ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್​ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಸಿಕ್ಕಿಬಿದ್ದಿದ್ದಾನೆ. ದಿಗಂತ್ ಚಲನವಲನ ಕಂಡು ಸಂಶಯಗೊಂಡ ಸಿಬ್ಬಂದಿ, ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ, ತಾನು ದಿಗಂತ್ ಎಂದು ಹೇಳಿಕೊಂಡಿದ್ದಾನೆ. ನಂತರ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆತನನ್ನು ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.

ದಿಗಂತ್ ಹೇಳಿದ್ದೇನು?

ತನ್ನ ತಾಯಿಗೆ ಕರೆ ಮಾಡಿ ಮಾತನಾಡಿರುವ ವಿದ್ಯಾರ್ಥಿ ದಿಗಂತ್, ಉಡುಪಿಯಲ್ಲಿ ಸುರಕ್ಷಿತವಾಗಿ ಇದ್ದೇನೆಂದು ಹೇಳಿದ್ದಾನೆ. ನಾನಾಗಿ ಹೋಗಿಲ್ಲ, ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋದರು ಎಂದಿದ್ದಾನೆ ಎನ್ನಲಾಗಿದೆ. ಆದರೆ, ಈ ವಿಚಾರವಾಗಿ ಪೊಲೀಸರಿಂದ ಇನ್ನಷ್ಟೆ ಅಧಿಕೃತ ಮಾಹಿತಿ ದೊರೆಯಬೇಕಿದೆ.

ಇದನ್ನೂ ಓದಿ
Image
ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್ ಸೂಚನೆ
Image
ಮಂಗಳೂರು: ವಿದ್ಯಾರ್ಥಿ ದಿಗಂತ್​ ನಾಪತ್ತೆ, VHP​​ ಪ್ರತಿಭಟನೆ
Image
ಕೋಟೆಕಾರು ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ
Image
ಸೈಬರ್ ವಂಚಕರ ಜತೆಗೆ ಅವರ ದುಡ್ಡಲ್ಲೇ ಪ್ರವಾಸ ಮಾಡಿದ ಮಂಗಳೂರು ಪೊಲೀಸರು!

ಹೈಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ

ದಿಗಂತ್ ನಾಪತ್ತೆಯಾಗಿರುವ ಬಗ್ಗೆ ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದ್ದರೂ ದಿಗಂತ್ ಪತ್ತೆಯಾಗಿರಲಿಲ್ಲ. ಹಲವು ದಿನಗಳ ಹುಡುಕಾಟದ ನಂತರವೂ ಸುಳಿವು ಸಿಗದ ಕಾರಣ, ದಿಗಂತ್ ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿದ್ದರು. ಅದರಂತೆ, ಮಾರ್ಚ್ 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಆದೇಶಿಸಲಾಗಿತ್ತು. ಇದೀಗ ವಿದ್ಯಾರ್ಥಿ ಪತ್ತೆಯಾಗಿದ್ದಾನೆ.

ಹಲವು ಅನುಮಾನಗಳಿಗೆ ಕಾರಣಬವಾಗಿದ್ದ ಪ್ರಕರಣ

ದಿಗಂತ್ ನಾಪತ್ತೆ ಪ್ರಕರಣದ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದವು. ಮಂಗಳಮುಖಿ ಜಾಲ ಅಪಹರಿಸಿರುವ ಸಾಧ್ಯತೆ ಬಗ್ಗೆಯೂ ಅನುಮಾನ ಸೃಷ್ಟಿಯಾಗಿತ್ತು. ಅಲ್ಲದೇ ಮೊಬೈಲ್ ಗೇಮಿಂಗ್ ಆ್ಯಪ್ ಸೇರಿ ಹಲವು ಆಯಾಮಗಳಲ್ಲಿ ತನಿಖೆ ನಡೆದಿತ್ತು.

ಹೇಗಿತ್ತು ಪೊಲೀಸ್ ಕಾರ್ಯಾಚರಣೆ?

ಹೈಕೋರ್ಟ್ ಆದೇಶದ ಬೆನ್ನಲ್ಲೇ ದಿಗಂತ್ ಗಾಗಿ ಶೋಧ ಕಾರ್ಯ ಚುರುಕುಗೊಂಡಿತ್ತು. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ‌ಎನ್.ನೇತೃತ್ವದ ಜಿಲ್ಲಾ ಪೋಲೀಸ್ ತಂಡ ನಾಪತ್ತೆ ಘಟನೆ ನಡೆದ ಸ್ಥಳದ ಸುತ್ತಲಿನ ಸ್ಥಳಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಕೂಂಬಿಂಗ್ ಕಾರ್ಯ ನಡೆಸಿತ್ತು.ಕಳೆದ 12 ದಿನಗಳಿಂದ ದಿಗಂತ್ ಪತ್ತೆಗಾಗಿ ವಿವಿಧ ರೀತಿಯ ಕಾರ್ಯಚರಣೆಗಳನ್ನು ಪೋಲೀಸ್ ತಂಡ ನಡೆಸಿತ್ತು. ಆದರೆ ಫಲಪ್ರದವಾಗಿರಲಿಲ್ಲ.

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ

ಬಂಟ್ವಾಳ ಸಬ್ ಡಿವಿಜನ್ ನ ಸುಮಾರು 9 ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್​​ಗಳು, ಎಸ್.ಐ.ಗಳು ಹಾಗೂ ಸುಮಾರು 100 ಕ್ಕೂ ಅಧಿಕ ಪೋಲೀಸರ ತಂಡ ಶನಿವಾರ ಬೆಳಿಗ್ಗೆಯಿಂದಲೇ ಕೂಂಬಿಂಗ್ ಕಾರ್ಯದಲ್ಲಿ ತೊಡಗಿಕೊಂಡಿತ್ತು. ಡಿ‌ಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್ .ಎಲ್. ತಂಡ, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ.ನ ಭಾಗದಲ್ಲಿ ಸರ್ಚ್ ಮಾಡಲು ಯೋಜನೆ ತಯಾರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ‌ನದಿಯಲ್ಲಿ ಕೂಡ ಸರ್ಚ್ ಮಾಡಲಾಗಿತ್ತು. ಒಂದೆಡೆ ಇಷ್ಟೆಲ್ಲ ನಡೆಯುತ್ತಿರುವಾಗ ಬಾಲಕ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Sat, 8 March 25

VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ