AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈತಿಕ ಪೊಲೀಸ್ ಗಿರಿ ಕೇಸ್​​ ಮೇಲೆ ಮಂಗಳೂರು ಪೊಲೀಸರ ಕಣ್ಣು; ಆರೋಪಿಗಳಿಂದ ಜಾಮೀನು ಮುಚ್ಚಳಿಕೆ

ನೈತಿಕ ಪೊಲೀಸ್ ಗಿರಿ ಕೇಸ್​​ ಆರೋಪಿಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಅಪರಾಧ ಕೃತ್ಯ ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ.

ನೈತಿಕ ಪೊಲೀಸ್ ಗಿರಿ ಕೇಸ್​​ ಮೇಲೆ ಮಂಗಳೂರು ಪೊಲೀಸರ ಕಣ್ಣು; ಆರೋಪಿಗಳಿಂದ ಜಾಮೀನು ಮುಚ್ಚಳಿಕೆ
ನೈತಿಕ ಪೊಲೀಸ್ ಗಿರಿ ಕೇಸ್​​ ಮೇಲೆ ಮಂಗಳೂರು ಪೊಲೀಸರ ಕಣ್ಣು
ಆಯೇಷಾ ಬಾನು
ಆಯೇಷಾ ಬಾನು|

Updated on: Jun 06, 2023 | 10:30 AM

Share

ಮಂಗಳೂರು: ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ ಗಿರಿ(Moral Policing) ಪುನರಾವರ್ತನೆ ಹಿನ್ನೆಲೆ ನೈತಿಕ ಪೊಲೀಸ್ ಗಿರಿ ಕೇಸ್​​ ಆರೋಪಿಗಳ ಮೇಲೆ ಪೊಲೀಸರು(Mangaluru Police) ಕಣ್ಣಿಟ್ಟಿದ್ದಾರೆ. ಅಪರಾಧ ಕೃತ್ಯ ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ. ಐದು ವರ್ಷಗಳಲ್ಲಿ ಈ ರೀತಿಯ ಘಟನೆಗಳಲ್ಲಿ ಭಾಗಿಯಾದವರನ್ನು ಗುರುತಿಸಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆಯಲಾಗಿದೆ.

ಸೋಮೇಶ್ವರದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ಹಿನ್ನೆಲೆಯಲ್ಲಿ ಶನಿವಾರ ಪತ್ರಕರ್ತರು ಆಯುಕ್ತರನ್ನು ಪ್ರಶ್ನಿಸಿದಾಗ, ಮುಂಜಾಗರೂಕತ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು. ಇದುವರೆಗೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂಘಿಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಮತ್ತೂಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು. ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ 9 ಮಂದಿಯ 1.90 ಲ.ರೂ. ಬಾಂಡ್‌ ಮೊತ್ತವನ್ನು ಸರಕಾರದ ಖಜಾನೆಗೆ ಒಪ್ಪಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ.

ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಗೃಹ ಸಚಿವ ಡಾ.ಪರಮೇಶ್ವರ್​ ಮಂಗಳೂರು, ಉಡುಪಿ ಪ್ರವಾಸ

ಮಂಗಳೂರು: ಗೃಹ ಸಚಿವ ಡಾ.ಪರಮೇಶ್ವರ್(Dr G Parameshwar) ಅವರು ಇಂದಿನಿಂದ 2 ದಿನ ಮಂಗಳೂರು(Mangaluru), ಉಡುಪಿ(Udupi) ಪ್ರವಾಸ ಕೈಗೊಂಡಿದ್ದಾರೆ. ಇಂದು (ಜೂನ್ 6) ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಗೃಹ ಸಚಿವರು ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ. ಉಡುಪಿಯಲ್ಲೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಉಡುಪಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್