AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳು 2012ರಲ್ಲಿ ವಶಪಡಿಸಿಕೊಂಡಿದ್ದ ರಕ್ತಚಂದನ, ಆನ್‌ಲೈನ್‌ನಲ್ಲಿ 28 ಕೋಟಿ ರೂ.ಗೆ ಹರಾಜು!

Red Sander: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಾಜ್ಯ ಅರಣ್ಯ ಇಲಾಖೆ ಆನ್‌ಲೈನ್ ಮೂಲಕ ಹರಾಜು ಹಾಕಬೇಕು. ಅದರಂತೆ ಒಟ್ಟು 2,094 ದಿಮ್ಮಿಗಳನ್ನು ಒಳಗೊಂಡ 56.2 ಮೆಟ್ರಿಕ್ ಟನ್ ರಕ್ತಚಂದನವಿತ್ತು. ಎ ಕೆಟಗರಿ 3 ಲಾಟ್, ಬಿ ಕೆಟಗರಿ 6 ಲಾಟ್, ಸಿ ಕೆಟಗರಿ 6 ಲಾಟ್, ಡಿ ಕೆಟಗರಿ 3 ಲಾಟ್‌ ಗಳಾಗಿ ವಿಂಗಡಣೆ ಮಾಡಿ ಹರಾಜು ಹಾಕಲಾಗಿತ್ತು. ಮಂಗಳೂರಿನ ಪಣಂಬೂರು ಬಂದರಿನ ಕಸಮ್ಸ್‌ ಅಧಿಕಾರಿಗಳು 2008 ರಿಂದ 2023 ರವರೆಗೆ 4 ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ರಕ್ತ ಚಂದನ ಇದಾಗಿತ್ತು.

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳು 2012ರಲ್ಲಿ ವಶಪಡಿಸಿಕೊಂಡಿದ್ದ ರಕ್ತಚಂದನ, ಆನ್‌ಲೈನ್‌ನಲ್ಲಿ 28 ಕೋಟಿ ರೂ.ಗೆ ಹರಾಜು!
ರಕ್ತಚಂದನ, ಆನ್‌ಲೈನ್‌ನಲ್ಲಿ 28 ಕೋಟಿ ರೂ.ಗೆ ಹರಾಜು!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 07, 2023 | 12:12 PM

ಮಂಗಳೂರು ಕಸ್ಟಮ್ಸ್ (Mangalore Customs) ತಂಡ ವಶಕ್ಕೆ ಪಡೆದಿದ್ದ ಅಮೂಲ್ಯ ರಕ್ತಚಂದನ 28 ಕೋಟಿ ರೂಪಾಯಿಗೆ ಹರಾಜು ಆಗಿದೆ. ಆನ್‌ಲೈನ್‌ನಲ್ಲಿ (Online Auction) 3 ಪ್ರತಿಷ್ಠಿತ ಏಜೆನ್ಸಿಗಳು ಬರೋಬ್ಬರಿ 28 ಕೋಟಿ ರೂ.ಗೆ ಬಿಡ್ ಮಾಡಿವೆ. ಮಂಗಳೂರಿನ ಪಣಂಬೂರು ಬಂದರಿನ ಕಸಮ್ಸ್‌ ಅಧಿಕಾರಿಗಳು 2008 ರಿಂದ 2023 ರವರೆಗೆ 4 ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ರಕ್ತ ಚಂದನ (Red Sander) ಇದಾಗಿತ್ತು. ಸುಮಾರು 56.2 ಮೆಟ್ರಿಕ್ ಟನ್ ರಕ್ತಚಂದನವನ್ನು ಹರಾಜು ಹಾಕಲಾಗಿತ್ತು. ಮಂಗಳೂರು ಬಂದರಿನಿಂದ ಅಕ್ರಮವಾಗಿ ವಿದೇಶಕ್ಕೆ ಕಳ್ಳಸಾಗಾಟ (Smuggling) ಮಾಡುತ್ತಿದ್ದ ರಕ್ತಚಂದನ ಮಾಲು ಇದಾಗಿತ್ತು.

ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಾಜ್ಯ ಅರಣ್ಯ ಇಲಾಖೆ ಆನ್‌ಲೈನ್ ಮೂಲಕ ಹರಾಜು ಹಾಕಬೇಕು. ಅದರಂತೆ ಒಟ್ಟು 2,094 ದಿಮ್ಮಿಗಳನ್ನು ಒಳಗೊಂಡ 56.2 ಮೆಟ್ರಿಕ್ ಟನ್ ರಕ್ತಚಂದನವಿತ್ತು. ಎ ಕೆಟಗರಿ 3 ಲಾಟ್, ಬಿ ಕೆಟಗರಿ 6 ಲಾಟ್, ಸಿ ಕೆಟಗರಿ 6 ಲಾಟ್, ಡಿ ಕೆಟಗರಿ 3 ಲಾಟ್‌ ಗಳಾಗಿ ವಿಂಗಡಣೆ ಮಾಡಿ ಹರಾಜು ಹಾಕಲಾಗಿತ್ತು. ಒಟ್ಟು 18 ಲಾಟ್‌ಗಳಲ್ಲಿ ನ್ಯಾಚುರಲ್ ಕನ್ನೊಜೆನ್ಸಿ ಏಜೆನ್ಸಿ 10 ಲಾಟ್‌ಗೆ 14.5 ಕೋಟಿ ರೂ. ಬಿಡ್ ಮಾಡಿತ್ತು. ಯಮಾ ರಿಬನ್ಸ್ ಏಜೆನ್ಸಿ ಲಾಟ್‌ಗೆ 4.2ಕೋಟಿ ರೂ. ಬಿಡ್ ಮಾಡಿದೆ. ಅಕ್ಷಾ 3 ಲಾಟ್‌ ಗೆ 1.6 ಕೋಟಿ ರೂ.ಗೆ ಬಿಡ್ ಮಾಡಿದೆ. ಮೂರೂ ಬಿಡ್‌ಗಳ ಒಟ್ಟು ಮೊತ್ತ, ತೆರಿಗೆ ಸೇರಿ 28 ಕೋಟಿ ರೂ. ನಷ್ಟಿದೆ.

ಚೀನಾ, ದುಬೈ, ಜಪಾನ್ ಸೇರಿದಂತೆ ಇತರ ದೇಶಗಳಲ್ಲಿ ರಕ್ತಚಂದನಕ್ಕೆ ಬಹು ಬೇಡಿಕೆ ಇದೆ. 2012 ಆಗಸ್ಟ್​​ 24ರಂದು ನವಮಂಗಳೂರು ಬಂದರು ಮೂಲಕ ಈ ಮಾಲು ದುಬೈಗೆ ಕಳ್ಳಸಾಗಾಟವಾಗುವುದಿತ್ತು. ಕಂಟೈನರ್‌ನಲ್ಲಿ ತುಂಬಿಸಿಡಲಾಗಿದ್ದ 5,810 ಕೆ.ಜಿ. ತೂಕದ ರಕ್ತಚಂದನ ವಶಕ್ಕೆ ಪಡೆದಿದ್ದರು. 2014 ಆಗಸ್ಟ್​ 21ರಂದು ವಿದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 16.99 ಟನ್ ರಕ್ತಚಂದನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Also Read: ಚಿಕ್ಕಮಗಳೂರು – ಅಂಗಡಿಗೆ ಖಾಸಗಿ ಬಸ್ ಡಿಕ್ಕಿ, ವಿದ್ಯಾರ್ಥಿನಿ ಸಾವು, ನಾಲ್ವರು ಗಂಭೀರ

ಇನ್ನು, 2020ರ ಜನವರಿ 10ರಂದು ಥಾಯ್ಲೆಂಡ್‌ಗೆ ಸಾಗಿಸಲು ಯತ್ನಿಸುತ್ತಿದ್ದ 2.20 ಕೋಟಿ ರೂ. ಮೌಲ್ಯದ ರಕ್ತಚಂದನವನ್ನೂ ವಶ ಪಡಿಸಿಕೊಲ್ಳಲಾಗಿತ್ತು. 2022ರ ಜೂನ್ 3ರಂದು ಆಂಧ್ರಪ್ರದೇಶದ ತಿರುಪತಿಯಿಂದ ಮಂಗಳೂರು ಮೂಲಕ ಸಿಂಗಾಪುರಕ್ಕೆ ಸಾಗಿಸಲು ಯತ್ನಿಸುತ್ತಿದ್ದ 4.14 ಕೋಟಿ ರೂ. ಮೌಲ್ಯದ ರಕ್ತಚಂದನ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ವಶವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ