ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ, ಚುನಾವಣಾ ಆಯೋಗದಿಂದ ತುರ್ತು ನೋಟಿಸ್​

ಮಂಗಳೂರು ಹೊರವಲಯ (Mangalore) ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು.

ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ, ಚುನಾವಣಾ ಆಯೋಗದಿಂದ ತುರ್ತು ನೋಟಿಸ್​
ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ, ತುರ್ತು ನೋಟಿಸ್​
Edited By: ಸಾಧು ಶ್ರೀನಾಥ್​

Updated on: Apr 01, 2024 | 11:53 AM

ಮಂಗಳೂರು, ಏಪ್ರಿಲ್​ 1: ಪ್ರಸಕ್ತ ರಂಜಾನ್​ (Ramzan) ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ (Iftar party) ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ.

ಮಂಗಳೂರು ಹೊರವಲಯ (Mangalore) ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು.

Also Read: ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

ಇದೀಗ ಇಫ್ತಾರ್ ಕೂಟದಲ್ಲಿ ರಸ್ತೆ ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ ಎಂದು ಚುನಾವಣಾ ಆಯೋಗದಿಂದ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯೂ ಮಾಡಲಾಗಿದೆ ಅಂತ ನೋಟಿಸ್ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 am, Mon, 1 April 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us