ಮಂಗಳೂರು ಬಹುಕೋಟಿ ವಂಚನೆ: 2.75 ಕೋಟಿ ರೂ. ಉಂಗುರ ಹಾಕುತ್ತಿದ್ದ ರೋಷನ್

ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ವಂಚಕ ರೋಷನ್ ಸಲ್ಡಾನಾನನ್ನು ಬಂಧಿಸಲಾಗಿದೆ. ಪೊಲೀಸರು ನಡೆಸುತ್ತಿರುವ ವಿಚಾರಣೆಯಲ್ಲಿ ಅವನ ವಂಚನೆಯ ವಿಧಾನಗಳು ಬೆಳಕಿಗೆ ಬಂದಿವೆ. ಮಹಾರಾಷ್ಟ್ರ ಮತ್ತು ಅಸ್ಸಾಂನ ಉದ್ಯಮಿಗಳಿಗೆ ವಂಚಿಸಿರುವುದಾಗಿ ಬಾಯಿಬಿಟ್ಟಿದ್ದಾನೆ. ಪೊಲೀಸರು ಆರೋಪಿಯ 2.75 ಕೋಟಿ ರೂಪಾಯಿ ಮೌಲ್ಯದ ವಜ್ರದ ಉಂಗುರವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಬಹುಕೋಟಿ ವಂಚನೆ: 2.75 ಕೋಟಿ ರೂ. ಉಂಗುರ ಹಾಕುತ್ತಿದ್ದ ರೋಷನ್
ರೋಷನ್ ಸಲ್ಡಾನಾ
Edited By: ವಿವೇಕ ಬಿರಾದಾರ

Updated on: Jul 20, 2025 | 10:02 AM

ಮಂಗಳೂರು, ಜುಲೈ 20: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ರೋಷನ್ ಸಲ್ಡಾನಾ (Roshan Saldanha) ನನ್ನು ಪೊಲೀಸರು (Police) ವಿಚಾರಣೆ ನಡೆಸುತ್ತಿದ್ದು, ಹಲವು ಸಂಗತಿಗಳು ಬೆಳಕಿಗೆ ಬಂದಿವೆ. ರೋಷನ್ ಸಲ್ಡಾನಾ ಹೆಣೆದಿರುವ ವಂಚನೆಯ ಮಾಯಾಜಾಲ ಕಂಡು ಮಂಗಳೂರು ಪೊಲೀಸರೇ ದಂಗಾಗಿದ್ದಾರೆ. ರೋಷನ್ ಸಲ್ಡಾನಾ ದೇಶದ ಹಲವು ಭಾಗದ ಉದ್ಯಮಿಗಳಿಗೆ ವಂಚಿಸಿದ್ದಾನೆ. ಯಾರ‍್ಯಾರಿಗೆ ವಂಚಿಸಿದ್ದಾನೆ ಎಂಬುವುದು ವಿಚಾರಣೆ ವೇಳೆ ಬಾಯಿಟ್ಟಿದ್ದಾನೆ.

ಉದ್ಯಮಿಗಳೇ ಈತನ ಟಾರ್ಗೆಟ್​

ಮಹಾರಾಷ್ಟ್ರದ ಓರ್ವ ಉದ್ಯಮಿಗೆ 5 ಕೋಟಿ ರೂ., ಮಹಾರಾಷ್ಟ್ರದ ಮತ್ತೊಬ್ಬ ಉದ್ಯಮಿಗೆ 10 ಕೋಟಿ ರೂ. ಮತ್ತು ಅಸ್ಸಾಂನ ಓರ್ವ ಉದ್ಯಮಿಯಿಂದ 20 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ. ಈ ಎಲ್ಲ ಉದ್ಯಮಿಗಳು ಇದೀಗ ಮಂಗಳೂರಿನ ಸಿಇಎನ್​ ಪೊಲೀಸ್​ ಠಾಣೆಗೆ ಆಗಮಿಸಿ, ದೂರು ನೀಡುತ್ತಿದ್ದಾರೆ. ಪೊಲೀಸರು ಬ್ಯಾಂಕ್​ಗಳಿಗೆ ಸಂಪರ್ಕಿಸಿ ಮಹಾರಾಷ್ಟ್ರದ ಉದ್ಯಮಿಗೆ ಸಂಬಂಧಿಸಿದ ರೂ 3.5 ಕೋಟಿ ಹಣ ಹಾಗೂ ಅಸ್ಸಾಂ ರಾಜ್ಯದ ಓರ್ವ ವ್ಯಕ್ತಿಗೆ ಸಂಬಂಧಿಸಿದ 20 ಲಕ್ಷ ರೂ. ಹಣವನ್ನು ಪ್ರೀಜ್ ಮಾಡಸಿದ್ದಾರೆ.

ವಜ್ರದ ಉಂಗುರ ಧರಿಸಿದ್ದ ಆರೋಪಿ

ಆರೋಪಿ ರೋಷನ್ ಸಲ್ಡಾನಾ 2.75 ಕೋಟಿ ರೂಪಾಯಿ ಮೌಲ್ಯದ ವಜ್ರದ ಉಂಗುರ ಹಾಕುತ್ತಿದ್ದನು ಎಂದು ತಿಳಿದುಬಂದಿದೆ. ಸದ್ಯ ಮಂಗಳೂರು ಪೊಲೀಸರು ಈ ಉಂಗುರವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ
ಇಮೇಜ್ ಸರ್ಚ್ ಟೂಲ್​ಗಳನ್ನು ಬಳಸಿ 20 ವರ್ಷಗಳ ನಂತರ ಆರೋಪಿಯ ಬಂಧಿಸಿದ ಸಿಬಿಐ!
ಸಾಲ ಕೊಡುವುದಾಗಿ ಕೋಟ್ಯಂತರ ರೂ ವಂಚನೆ: ನಟೋರಿಯಸ್​ ವಂಚಕನ ಬಂಧನ
ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಹೆಸರಿನಲ್ಲಿ ವಿಜ್ಞಾನಿಗೆ ವಂಚನೆ
ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ. ವಂಚನೆ, ಮಹಿಳೆ ಅರೆಸ್ಟ್!

ಇದನ್ನೂ ಓದಿ: ಶುಶ್ರುತಿ ಸಹಕಾರ ಸೌಹಾರ್ದ ಬ್ಯಾಂಕ್ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಇಡಿ ಎಂಟ್ರಿ: ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಿಗೆ

ರೋಹನ್​ ಮನೆಯಲ್ಲಿ ಹಿಂದೂ ಗುರೂಜಿ ಫೋಟೋ

ರೋಹನ್, ದೇಶದ ದೊಡ್ಡ ದೊಡ್ಡ ಕುಳಗಳಿಗೆ ಗಾಳ ಹಾಕುತ್ತಿದ್ದನು. ಐಷಾರಾಮಿ ವ್ಯಕ್ತಿಗಳು, ಉದ್ಯಮಿಗಳನ್ನು ಟಾರ್ಗೆಟ್ ಮಾಡುತ್ತಿದ್ದನು. ಭೂ ವ್ಯವಹಾರ, ಸಾಲ ನೀಡುವ ನೆಪದಲ್ಲಿ ನಂಬಿಸಿ, ಮಂಗಳೂರಿನ ಜಪ್ಪಿನಮೊಗರುವಿನ‌ ಐಷಾರಾಮಿ ಬಂಗಲೆಗೆ ಕರೆದು ವ್ಯವಹಾರ ಕುದುರಿಸುತ್ತಿದ್ದನು. ರೋಹನ್, ಕೈಸ್ತ ಸಮುದಾಯದವನಾದರೂ ಹಿಂದೂ ಗುರೂಜಿ ಫೋಟೋವನ್ನು ತನ್ನ ಮನೆಯಲ್ಲಿ ಹಾಕಿದ್ದಾನು. ಈ ಮೂಲಕ ಕೂಡ ವಂಚಿಸುತ್ತಿದ್ದ ಶಂಕೆ ವ್ಯಕ್ತವಾಗಿದೆ.

ಉತ್ತರ ಪ್ರದೇಶದ ಹಿಂದೂ ಗುರೂಜಿ ನೀಮ್ ಕರೋಲಿ ಬಾಬಾ ಫೋಟೋವನ್ನು ರೋಷನ್ ತನ್ನ ಕಚೇರಿಯಲ್ಲಿ ಹಾಕಿದ್ದಾನೆ. ಆ ಮೂಲಕ ಉತ್ತರ ಭಾರತದ ಬಹುಕೋಟಿ ಉದ್ಯಮಿಗಳನ್ನು ವಂಚನೆಗೆ ನಾನು ಬಾಬಾ ಭಕ್ತ ಅಂತ ನಂಬಿಸುತ್ತಿದ್ದ ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:01 am, Sun, 20 July 25

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us