AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರೀ ಮಳೆ, ಗಾಳಿಯಿಂದ ಮೆಸ್ಕಾಂಗೆ 33.4 ಕೋಟಿ ರೂ. ನಷ್ಟ

ಮೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ, ಮಳೆಯಿಂದಾಗಿ ಮೆಸ್ಕಾಂಗೆ ಅಪಾರ ನಷ್ಟ ಉಂಟಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಷ್ಟು ನಷ್ಟವಾಗಿದೆ? ಏನೇನು ಹಾನಿಯಾಗಿದೆ ಎಂಬ ಮಾಹಿತಿಯನ್ನು ಮೆಸ್ಕಾಂ ಬಹಿರಂಗಪಡಿಸಿದೆ. ಜತೆಗೆ, ದುರಸ್ತಿ ಹಾಗೂ ಪುನಃಸ್ಥಾಪನೆ ಕಾರ್ಯ ಪ್ರಗತಿಯಲ್ಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದೆ.

ಮಂಗಳೂರು: ಭಾರೀ ಮಳೆ, ಗಾಳಿಯಿಂದ ಮೆಸ್ಕಾಂಗೆ 33.4 ಕೋಟಿ ರೂ. ನಷ್ಟ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 07, 2024 | 3:01 PM

ಮಂಗಳೂರು, ಆಗಸ್ಟ್ 7: ಕಳೆದ ಒಂದು ತಿಂಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಬೀಸುತ್ತಿರುವ ಭಾರಿ ಗಾಳಿಯ ಪರಿಣಾಮ ಮೆಸ್ಕಾಂ ವ್ಯಾಪ್ತಿಯಲ್ಲಿ 21702 ವಿದ್ಯುತ್ ಕಂಬಗಳು ಧರೆಗುರುಳಿವೆ. ಹೆಚ್ಚುವರಿಯಾಗಿ, ವಿದ್ಯುತ್ ಟ್ರಾನ್ಸ್​​ಫಾರ್ಮರ್​​ಗಳು ಮತ್ತು ಕೇಬಲ್​ಗಳಿಗೆ ಹಾನಿಯಾಗಿದೆ. ಒಟ್ಟಾರೆ ಅಂದಾಜು 33.40 ಕೋಟಿ ರೂ. ನಷ್ಟವಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ದಕ್ಷಿಣ ಕನ್ನಡದಲ್ಲಿ 10.14 ಕೋಟಿ ರೂಪಾಯಿ ಹಾನಿಯ ಅಂದಾಜಿಸಲಾಗಿದ್ದರೆ, ಚಿಕ್ಕಮಗಳೂರಿನಲ್ಲಿ 9.67 ಕೋಟಿ ರೂಪಾಯಿ ಮೌಲ್ಯದ ಉಪಕರಣಗಳು ನಾಶವಾಗಿವೆ. ಉಡುಪಿ ಮತ್ತು ಶಿವಮೊಗ್ಗದಲ್ಲಿ ಕ್ರಮವಾಗಿ 8.48 ಕೋಟಿ ರೂ. ಹಾಗೂ 5.09 ಕೋಟಿ ರೂ. ನಷ್ಟವಾಗಿದೆ. ಹಾನಿಗೊಳಗಾಗಿರುವ ಬಹುತೇಕ ಉಪಕರಣಗಳನ್ನು ದುರಸ್ತಿ ಮಾಡಲಾಗಿದೆ. ಉಳಿದವುಗಳ ದುರಸ್ತಿ ಮತ್ತು ಬದಲಾವಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮೆಸ್ಕಾಂ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡದಲ್ಲಿ 6,369 ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಚಿಕ್ಕಮಗಳೂರಿನಲ್ಲಿ 5,697, ಶಿವಮೊಗ್ಗದಲ್ಲಿ 4,960 ಮತ್ತು ಉಡುಪಿಯಲ್ಲಿ 4776 ವಿದ್ಯುತ್ ಕಂಬಗಳು ಧರೆಗುರುಳಿವೆ.

ನೆಲಕ್ಕುರುಳಿರುವ 21702 ವಿದ್ಯುತ್ ಕಂಬಗಳ ಪೈಕಿ 21245 ಹೊಸ ಕಂಬಗಳನ್ನು ಈಗಾಗಲೇ ಅಳವಡಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ 316 ವಿದ್ಯುತ್ ಟ್ರಾನ್ಸ್​​ಫಾರ್ಮರ್​​ಗಳು ಹಾಳಾಗಿವೆ. ಎಲ್ಲವನ್ನೂ ಸರಿಪಡಿಸಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ದಕ್ಷಿಣ ಕನ್ನಡದಲ್ಲಿ 318.15 ಕಿಮೀ ಉದ್ದದ ವಿದ್ಯುತ್ ತಂತಿಗಳು ಹಾಳಾಗಿವೆ. ಉಡುಪಿಯಯಲ್ಲಿ 86.39 ಕಿಮೀ, ಚಿಕ್ಕಮಗಳೂರು 111.94 ಕಿಮೀ ಮತ್ತು ಶಿವಮೊಗ್ಗ 97.82 ಕಿಮೀ ಸೇರಿದಂತೆ ಒಟ್ಟು 614.30 ಕಿಮೀ ಉದ್ದದ ವಿದ್ಯುತ್ ತಂತಿ ಹಾನಿಗೊಂಡಿದೆ. ಇವುಗಳಲ್ಲಿ ಈಗಾಗಲೇ 604.43 ಕಿ.ಮೀ ತಂತಿಗಳನ್ನು ಬದಲಾಯಿಸಲಾಗಿದೆ.

ಇದನ್ನೂ ಓದಿ: ಮಂಗಳೂರು ಮಹಾನಗರ ಪಾಲಿಕೆಯಿಂದ ‘ಟೈಗರ್ ಆಪರೇಷನ್’! ಏನಿದು ಕಾರ್ಯಾಚರಣೆ?

ಮಳೆ, ಗಾಳಿಯ ನಡುವೆಯೂ ಮೆಸ್ಕಾಂ ಸಿಬ್ಬಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರಾಹಕರು ಮೆಸ್ಕಾಂ ಸಿಬ್ಬಂದಿಗೆ ಸಹಕರಿಸಬೇಕಿದೆ ಎಂದು ಮೆಸ್ಕಾಂ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​