AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಫೆ.04) ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ (Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಬಸ್​ ಹರಿದು ಇಬ್ಬರು ಮೃತರಾದರೆ, ಇತ್ತ ತಾಲೂಕಿನ ಮಂಜೊಟ್ಟಿ ಬಳಿ ವೇಗವಾಗಿ ಬಂದ ಬಸ್​, ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ.

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 04, 2024 | 6:53 PM

Share

ದಕ್ಷಿಣ ಕನ್ನಡ, ಫೆ.04: ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ನಡೆದಿದೆ. ಗಾಂಧಿನಗರದ ಕೃಷ್ಣಪ್ಪ(52) ಹಾಗೂ ಮೋಹಿನಿ(56) ಮೃತ ರ್ದುದೈವಿಗಳು. ಇನ್ನು ಲಾರಿ ಡಿಕ್ಕಿ ರಭಸಕ್ಕೆ 2 ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿ

ಮಂಗಳೂರು: ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಬಳಿ ನಡೆದಿದೆ. ಪರಾರಿ ನಿವಾಸಿ ಧರಣೇಂದ್ರ (24) ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಬಸ್, ನಿಯಂತ್ರಣ ಕಳೆದುಕೊಂಡು ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಧರಣೇಂದ್ರ ಎಂಬಾತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯಯೇ ಮೃತರಾಗಿದ್ದಾರೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರತಿವರ್ಷ ಬಿಎಂಟಿಸಿ ಬಸ್​​ಗಳಿಂದ 30ಕ್ಕೂ ಹೆಚ್ಚು ಮಾರಣಾಂತಿಕ ಅಪಘಾತ: ಚಾಲಕರಿಗೆ ವಿಶೇಷ ತರಬೇತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ