AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಫೆ.04) ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ (Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಬಸ್​ ಹರಿದು ಇಬ್ಬರು ಮೃತರಾದರೆ, ಇತ್ತ ತಾಲೂಕಿನ ಮಂಜೊಟ್ಟಿ ಬಳಿ ವೇಗವಾಗಿ ಬಂದ ಬಸ್​, ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ.

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 04, 2024 | 6:53 PM

Share

ದಕ್ಷಿಣ ಕನ್ನಡ, ಫೆ.04: ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ನಡೆದಿದೆ. ಗಾಂಧಿನಗರದ ಕೃಷ್ಣಪ್ಪ(52) ಹಾಗೂ ಮೋಹಿನಿ(56) ಮೃತ ರ್ದುದೈವಿಗಳು. ಇನ್ನು ಲಾರಿ ಡಿಕ್ಕಿ ರಭಸಕ್ಕೆ 2 ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿ

ಮಂಗಳೂರು: ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಬಳಿ ನಡೆದಿದೆ. ಪರಾರಿ ನಿವಾಸಿ ಧರಣೇಂದ್ರ (24) ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಬಸ್, ನಿಯಂತ್ರಣ ಕಳೆದುಕೊಂಡು ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಧರಣೇಂದ್ರ ಎಂಬಾತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯಯೇ ಮೃತರಾಗಿದ್ದಾರೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರತಿವರ್ಷ ಬಿಎಂಟಿಸಿ ಬಸ್​​ಗಳಿಂದ 30ಕ್ಕೂ ಹೆಚ್ಚು ಮಾರಣಾಂತಿಕ ಅಪಘಾತ: ಚಾಲಕರಿಗೆ ವಿಶೇಷ ತರಬೇತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್