AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಕಾರಿನಲ್ಲಿದ್ದವರು ಜಸ್ಟ್​ ಮಿಸ್​

ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ದಕ್ಷಿಣ ಕನ್ನಡದ ಎಡಪದವು ರಾಮಮಂದಿರದ ಬಳಿ ಸರಣಿ ಅಪಘಾತವಾಗಿದೆ. ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Apr 19, 2024 | 8:09 PM

Share

ದಕ್ಷಿಣ ಕನ್ನಡ, ಏ.19: ದಕ್ಷಿಣ ಕನ್ನಡದ ಎಡಪದವು ರಾಮಮಂದಿರದ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದೆ. ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ದುರಂತ ಸಂಭವಿಸಿದ್ದು, ಲಾರಿ ನಿಲ್ಲಿಸಲು ಆಗದೆ ಚಾಲಕ, ಸುಮಾರು 500 ಮೀಟರ್ ದೂರದ ವರೆಗೂ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದ್ರೆ, ಈ ನಡುವೆ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ.

ಸರಣಿ ಅಪಘಾತ; ತಪ್ಪಿದ ಅನಾಹುತ

ಅಪಘಾತದಲ್ಲಿ ಸಂಪೂರ್ಣ ಕಾರು‌ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಬಳಿಕ ಮುಂದೆ ಚಲಿಸಿದ ಲಾರಿ, ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿಯಾಗಿದ್ದು, ರಸ್ತೆಗೆ ಪಿಕ್ ಅಪ್ ಉರುಳಿ ಬಿದ್ದ ಕಾರಣ ಎಣ್ಣೆ ಪ್ಯಾಕೆಟ್​ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ. ನಂತರ ಎದುರಿನಿಂದ ಬಂದ ಟ್ಯಾಂಕರ್​ವೊಂದು, ಲಾರಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದರೆ, ಬಳಿಕ ಎಡಪದವು ಪೇಟೆಯ ಬಳಿ ಖಾಸಗಿ ಬಸ್​ಗೆ​ ಡಿಕ್ಕಿ ಹೊಡೆದು ಲಾರಿ ನಿಂತಿದೆ.

ಇದನ್ನೂ ಓದಿ:ಶಿರಸಿಯಲ್ಲಿ ಭೀಕರ ಅಪಘಾತ; ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು

ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮತ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸರಣಿ ಅಪಘಾತದ ನಡುವೆ ಅಗರಿ ಎಂಟರ್ಪ್ರೈಸಸ್ ಎಂಬ ಅಂಗಡಿಯ ಕಟ್ಟಡಕ್ಕೂ ಹಾನಿಯಾಗಿದೆ. ಸರಣಿ ಅಪಘಾತದಿಂದ ಎಡಪದವಿನ ಜನ ದಿಗ್ಬ್ರಮೆಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Fri, 19 April 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More