AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜೆರೋಸಾ ಶಾಲೆ ಪ್ರಕರಣ: ವಿದ್ಯಾರ್ಥಿಗಳ ತನಿಖೆ; ತನಿಖಾಧಿಕಾರಿ ಏನೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ ಗೊತ್ತಾ?

ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ದೇವರಗಳು ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಸಂಬಂಧ ತನಿಖಾಧಿಕಾರಿಯಾಗಿರುವ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಲಯ ಅಪರ ಆಯುಕ್ತ ಡಾ.ಆಕಾಶ್ ಅವರು ಇಂದು ವಿದ್ಯಾರ್ಥಿಗಳನ್ನು ತನಿಖೆ ನಡೆಸಿದ್ದಾರೆ. ಲಿಖಿತ ಹಾಗೂ ವಿಡಿಯೋ ರೆಕಾರ್ಡಿಂಗ್ ಮೂಲಕ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಮಂಗಳೂರು ಜೆರೋಸಾ ಶಾಲೆ ಪ್ರಕರಣ: ವಿದ್ಯಾರ್ಥಿಗಳ ತನಿಖೆ; ತನಿಖಾಧಿಕಾರಿ ಏನೆಲ್ಲಾ ಪ್ರಶ್ನೆಗಳನ್ನು ಕೇಳಿದ್ದಾರೆ ಗೊತ್ತಾ?
ಮಂಗಳೂರು ಜೆರೋಸಾ ಶಾಲೆ ಪ್ರಕರಣ: ವಿದ್ಯಾರ್ಥಿಗಳ ಹೇಳಿಕೆ ಪಡೆದ ತನಿಖಾಧಿಕಾರಿ
ಅಶೋಕ್​ ಪೂಜಾರಿ, ಮಂಗಳೂರು
| Edited By: Rakesh Nayak Manchi|

Updated on: Feb 20, 2024 | 5:02 PM

Share

ಮಂಗಳೂರು, ಫೆ.20: ಸಂತ ಜೆರೋಸಾ ಶಾಲೆಯ (St. Gerosa School) ಶಿಕ್ಷಕಿ ಹಿಂದೂ ದೇವರಗಳು ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಸಂಬಂಧ ತನಿಖಾಧಿಕಾರಿಯಾಗಿರುವ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಲಯ ಅಪರ ಆಯುಕ್ತ ಡಾ.ಆಕಾಶ್ ಅವರು ಇಂದು ಏಳನೇ ತರಗತಿಯ ಎಲ್ಲಾ ಧರ್ಮದ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ತನಿಖೆ ನಡೆಸಿದ್ದಾರೆ. ಲಿಖಿತ ಹಾಗೂ ವಿಡಿಯೋ ರೆಕಾರ್ಡಿಂಗ್ ಮೂಲಕ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಶಾಲೆಯ ಹಳೆ ವಿದ್ಯಾರ್ಥಿನಿ ವರ್ಷಾ, ತನಿಖಾಧಿಕಾರಿ ನನ್ನ ಬಳಿ ತುಂಬಾ ವಿಷಯ ಕೇಳಿದರು. ಶಾಲೆಯಲ್ಲಿರುವಾಗ ಶಿಕ್ಷಕಿ ಏನೆಲ್ಲಾ ಹೇಳಿದ್ದರು ಎಂದು ಕೇಳಿದರು. ನಾಗದೇವರಿಗೆ ಹಾಲು ಹಾಕುವ ಬಗ್ಗೆ ಹೇಳಿರೋದನ್ನು ಹೇಳಿದ್ದೇನೆ. ನಾಗದೇವರಿಗೆ ಯಾಕೆ ಹಾಲು ಹಾಕೋದು, ಅದರ ಬದಲು ಪಾಪದವರಿಗೆ ಆ ಹಾಲು ಕೊಡಬಹುದಲ್ವಾ ಅಂತ ಶಿಕ್ಷಕಿ ಹೇಳಿದ್ದಾಗಿ ತಿಳಿಸಿದ್ದೇನೆ.

ಇದನ್ನೂ ಓದಿ: ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ಈ‌ ರೀತಿ ಹೇಳಿರುವುದು ಒಳ್ಳೆಯ ಉದ್ದೇಶಕ್ಕೆ ಹೇಳಿದರಾ ಅಥವಾ ಕೆಟ್ಟ ಉದ್ದೇಶಕ್ಕೆ ಹೇಳಿದರಾ ಅಂತಾ ಅಧಿಕಾರಿ ಪ್ರಶ್ನೆ ಮಾಡಿದರು. ನಾಗನಿಗೆ ಹಾಲು ಹಾಕುವುದು ನಮ್ಮ ಧರ್ಮ. ಕೆಟ್ಟ ಉದ್ದೇಶದಿಂದಲೇ ಹೇಳಿರುವುದೆಂದು ಹೇಳಿದೆ. ಗಣಪತಿ ದೇವರ ಬಗ್ಗೆಯು ಅವಹೇಳನ ಮಾಡುತ್ತಿದ್ದರು ಅಂತ ಹೇಳಿದ್ದಾಗಿ ತಿಳಿಸಿದಳು.

ಜೆರೋಸಾ ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಟಾರ್ಗೆಟ್

ಹಿಂದೂ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡುತ್ತಿದ್ದರು. ಹಣೆಗೆ ಪ್ರಸಾದ, ಕೈಗೆ ಬಳೆ, ಕಾಲಿಗೆ ಗೆಜ್ಜೆ ಹಾಕುವಂತೆ ಇರಲಿಲ್ಲ. ಹಾಕಿದರೆ ಬೈಯುತ್ತಿದ್ದರು. ನಾನು ಏಳನೇ ತರಗತಿಯಲ್ಲಿರುವಾಗ ಇದೆಲ್ಲ ಹೇಳುತ್ತಿದ್ದರು. ಅವಾಗ ಸಮಾಜ ವಿಜ್ಞಾನ ವಿಷಯಕ್ಕೆ ಆ ಶಿಕ್ಷಕಿ ಇದ್ದರು. ಆ ಸಮಯದಲ್ಲಿ ನಾವು ಚಿಕ್ಕವರಿದ್ದೆವು. ಹೆಚ್ಚೇನು ಗೊತ್ತಾಗುತ್ತಿರಲಿಲ್ಲ. 10 ನೇ ತರಗತಿಯಲ್ಲಿದ್ದಾಗ ಪೋಷಕರ ಬಳಿ ಹೇಳಿದ್ದೆ. ಶಾಲೆಗೆ ಬಂದು ಮಾತನಾಡಿದ್ರೆ ಟಾರ್ಗೆಟ್ ಮಾಡುತ್ತಾರೆ ಅಂತಾ ಚರ್ಚಿಸರಿರಲಿಲ್ಲ. ಲಿಖಿತವಾಗಿ ಬರೆದುಕೊಟ್ಟಿದ್ದೇನೆ. ಹತ್ತನೇ ತರಗತಿ ಅಂಕಪಟ್ಟಿಯನ್ನು ದಾಖಲೆಯಾಗಿ ನೀಡಿದ್ದೇನೆ ಎಂದರು.

ನೋಟಿಸ್ ವಿಚಾರವಾಗಿ ಟಿವಿ 9 ಜೊತೆ ಮಾತನಾಡಿದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ ಪುರುಷೋತ್ತಮ್, ತನಿಖೆಗೆ ಬಂದು ಹಾಜರಾಗುವಂತೆ ಪತ್ರ ಬಂದಿತ್ತು. ಮಕ್ಕಳು ಪೋಷಕರು ಹೇಳಿದನ್ನು ತನಿಖಾಧಿಕಾರಿ ಮುಂದೆ ಹೇಳಿದ್ದೇವೆ. ನ್ಯಾಯ ನಿಷ್ಠೆಯಿಂದ ತನಿಖೆ ಮಾಡಿದ್ದಾರೆ. ವಿಎಚ್​ಪಿ ಈ ಹೋರಾಟದಲ್ಲಿ ಭಾಗಿಯಾಗಿತ್ತು. ವಿಶ್ವಹಿಂದೂ ಪರಿಷತ್ ನಿಂದ ಡಿಡಿಪಿಐಗೆ ದೂರು ನೀಡಿದ್ದೆವು. ಘಟನೆಯ ಬಗ್ಗೆ ಲಿಖಿತವಾಗಿ ಬರೆದುಕೊಟ್ಟಿದ್ದೇವೆ ಎಂದರು.

ತನಿಖೆಯಲ್ಲಿ ಸತ್ಯಾಂಶ ಹೊರಬರದಿದ್ದರೆ ಕಾನೂನು ಹೋರಾಟ ಮಾಡುತ್ತೇವೆ. ಶರಣ್ ಪಂಪುವೆಲ್ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ. ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುವುದಕ್ಕೆ ಕೇಸು ಹಾಕಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ, ಮಂಗಳೂರು
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!