AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟ್​ನಲ್ಲಿ ವೆರೈಟಿ ಫುಡ್ ಸವಿದು ಎಂಜಾಯ್ ಮಾಡಿದ ಆಹಾರಪ್ರಿಯರು

ಮಂಗಳೂರಿನ ಕರಾವಳಿ ಉತ್ಸವ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮಣ್ಣುಗುಡ್ಡೆ ಗುರ್ಜಿ ಜಂಕ್ಷನ್​​ವರೆಗೆ ಆಯೋಜನೆಗೊಂಡಿದ್ದ ಸ್ಟ್ರೀಟ್ ಫುಡ್ ಫಿಯೆಸ್ಟಾದಲ್ಲಿ ವೆರೈಟಿ ತಿನಿಸುಗಳನ್ನು ಸವಿದು ಆಹಾರಪ್ರಿಯರು ಎಂಜಾಯ್ ಮಾಡಿದರು. ಉತ್ತರ ಭಾರತೀಯ ಸಸ್ಯಹಾರಿ, ಮಾಂಸಹಾರಿ ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕವಾದ ಸುಮಾರು 160ಕ್ಕೂ ಹೆಚ್ಚು ಮಳಿಗೆಗಳಿದ್ದವು.

ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟ್​ನಲ್ಲಿ ವೆರೈಟಿ ಫುಡ್ ಸವಿದು ಎಂಜಾಯ್ ಮಾಡಿದ ಆಹಾರಪ್ರಿಯರು
ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟ್
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jan 28, 2024 | 11:28 AM

Share

ಮಂಗಳೂರು, ಜ.28: ಸ್ಟ್ರೀಟ್‌ನಲ್ಲಿ ನಿಂತ್ಕೊಂಡು ತಮಗಿಷ್ಟವಾದ ಫುಡ್‌ ಸವಿಯೋದು ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಒಂದೇ ಜಾಗದಲ್ಲಿ ಸ್ಥಳೀಯ ಮಾತ್ರವಲ್ಲದೇ ರಾಜ್ಯ ಹೊರರಾಜ್ಯಗಳ ಬಹುಬೇಡಿಕೆಯ ವಿವಿಧ ಶೈಲಿಯ ಆಹಾರ ಮಳಿಗೆಗಳು ಸಿಕ್ರೆ ಅದಕ್ಕಿಂತ ಹೆಚ್ಚು ಬೇರೆನೂ ಬೇಕು ಅಲ್ವಾ. ಇಂತದ್ದೊಂದು ಅವಕಾಶ ಕಡಲನಗರಿ ಮಂಗಳೂರಿನಲ್ಲಿ (Mangaluru) ಕಲ್ಪಿಸಲಾಗಿತ್ತು. ಕರಾವಳಿಯ ತಿನಿಸುಗಳು ಮಾತ್ರವಲ್ಲದೇ ಹೊರರಾಜ್ಯಗಳ ಆಹಾರಗಳನ್ನು ಸ್ಟ್ರೀಟ್ ಫುಡ್ ಫೆಸ್ಟ್​ನಲ್ಲಿ (Mangaluru Street Food Fiesta) ಆಹಾರಪ್ರಿಯರು ಸವಿದರು.

ಬೀದಿಯುದ್ದಕ್ಕೂ ವಿದ್ಯುತ್ ದೀಪಗಳ ನಡುವೆ ಸ್ಟಾಲ್‌ಗಳು ತಲೆಯೆತ್ತಿದ್ದವು. ಮೀನು ಫ್ರೈ, ಕೋರಿ ರೊಟ್ಟಿ, ಬಿರಿಯಾನಿ, ಕೋರಿ ಪುಂಡಿ, ಎಗ್ ಸ್ಪೆಷಲ್ಸ್, ನೀರುದೋಸೆ, ಮಟನ್ ಸುಕ್ಕ, ಕಬಾಬ್, ಚುರುಮುರಿ, ಹೋಳಿಗೆ, ಜಿಲೇಬಿ, ಐಸ್‌ಕ್ರೀಂ, ಜ್ಯೂಸ್ ಹೀಗೆ ಒಂದಾ ಎರಡಾ. ಬೀದಿಯುದ್ದಕ್ಕೂ 160ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಹಾಕಲಾಗಿತ್ತು. ಸ್ಟಾಲ್​ಗಳ ಮುಂದೆ ಜನವೋ ಜನ ಕಂಡು ಬಂದ್ರು. ಇಲ್ಲಿ ತಮಗಿಷ್ಟವಾದ ಆಹಾರಗಳನ್ನು ಸವಿಯುತ್ತಾ ಆಹಾರ ಪ್ರಿಯರು ಈ ಫುಡ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: ಬೆಂಗಳೂರು: ಬಾರ್​​ನಲ್ಲಿ ಶುರುವಾದ ಗೆಳೆಯರ ಗಲಾಟೆ ಮನೆ ಮುಂದೆ ಕೊಲೆಯಲ್ಲಿ ಅಂತ್ಯ

ಮಂಗಳೂರಿನ ಕರಾವಳಿ ಉತ್ಸವ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮಣ್ಣುಗುಡ್ಡೆ ಗುರ್ಜಿ ಜಂಕ್ಷನ್​​ವರೆಗೆ ಸ್ಟ್ರೀಟ್ ಫುಡ್ ಫಿಯೆಸ್ಟಾ ಆಯೋಜನೆಯಾಗಿದ್ದು ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನೇತೃತ್ವದಲ್ಲಿ ಐದು ದಿನಗಳ ಕಾಲ ಬೀದಿ ಬದಿ ಆಹಾರೋತ್ಸವ ನಡೆದಿದೆ. ಇಂದು ಕೊನೆಯ ದಿನವಾಗಿರೊದ್ರಿಂದ ಸಾವಿರಾರು ಜನ ಈ ಆಹಾರ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Mangalore Street Food Festival organised for 5 days Foodies enjoy variety of food

ಇದು ಕಡಲನಗರಿಯ ಎರಡನೇ ಬೀದಿಬದಿ ಆಹಾರೋತ್ಸವವಾಗಿದ್ದು ಈ ಬಾರಿಯು ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಒಟ್ಟು ಐದು ದಿನಗಳ ಕಾಲ ನಡೆದ ಈ ಆಹಾರೋತ್ಸವದಲ್ಲಿ ತುಳು ನಾಡಿನ ಬಗೆ ಬಗೆಯ ಖಾದ್ಯಗಳ ಜೊತೆಯಲ್ಲಿ ನೆರೆ ರಾಜ್ಯದ ಫೇಮಸ್​ ತಿನಿಸುಗಳನ್ನೂ ಸವಿಯುವ ಅವಕಾಶ ಒದಗಿಸಲಾಗಿತ್ತು. ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ ಸಸ್ಯಹಾರಿ, ಮಾಂಸಹಾರಿ ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕವಾದ ಸುಮಾರು 160ಕ್ಕೂ ಹೆಚ್ಚು ಮಳಿಗೆಗಳಿದ್ದವು. ಇನ್ನು ಈ 160 ಮಳಿಗೆಗಳಲ್ಲಿಯೂ ಡಿಜಿಟಲ್ ವಹಿವಾಟಿಗೆ ಹೆಚ್ಚು ಉತ್ತೇಜನ ನೀಡುವ ಸಲುವಾಗಿ ಪ್ರತ್ಯೇಕ ಕ್ಯೂಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆ ಮಾಡಲಾಗಿತ್ತು. ಇದರ ಜೊತೆಗೆ ಬಿರುವೆರ್ ಕುಡ್ಲ ಸಂಘಟನೆ ಹಾಗೂ ಮ್ಯಾಂಗಲೂರ್ ಮೇರಿ ಜಾನ್ ಸೋಷಿಯಲ್ ಮೀಡಿಯಾದ ತಂಡ ಸೇವೆಗಾಗಿ ಸ್ಟಾಲ್‌ಗಳನ್ನು ಹಾಕಿತ್ತು. ಇವರು ಸ್ಟಾಲ್‌ನಿಂದ ಬರುವ ಲಾಭದ ಹಣವನ್ನು ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ನೀಡುವ ನಿರ್ಧಾರವನ್ನು ಮಾಡಿದ್ದಾರೆ.

ಇದರ ಜೊತೆಯಲ್ಲಿ ಸಂಗೀತ ಪ್ರಿಯರಿಗಾಗಿ ಆರ್ಕೆಸ್ಟ್ರಾ, ಮಕ್ಕಳಿಗೆ ಕಿಡ್ಸ್​ ಝೋನ್​, ಯುವಕ ಯುವತಿಯರಿಗೆ ಡ್ಯಾನ್ಸ್, ಸೆಲ್ಫಿ ರೌಂಡ್ ವಿಡಿಯೋ ಹೀಗೆ ಎಲ್ಲಾ ವಯೋಮಾನದವರಿಗೂ ತಕ್ಕುದಾದ ಚಟುವಟಿಕೆಗಳನ್ನು ಇಲ್ಲಿ ಆಯೋಜಿಸಲಾಗಿತ್ತು. ಒಟ್ಟಿನಲ್ಲಿ ಸ್ಟ್ರೀಟ್ ಫುಡ್ ಫೆಸ್ಟಿವಲ್‌ನ್ನು ಜನ ಸಖತ್ ಎಂಜಾಯ್ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ