AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟ್​ನಲ್ಲಿ ವೆರೈಟಿ ಫುಡ್ ಸವಿದು ಎಂಜಾಯ್ ಮಾಡಿದ ಆಹಾರಪ್ರಿಯರು

ಮಂಗಳೂರಿನ ಕರಾವಳಿ ಉತ್ಸವ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮಣ್ಣುಗುಡ್ಡೆ ಗುರ್ಜಿ ಜಂಕ್ಷನ್​​ವರೆಗೆ ಆಯೋಜನೆಗೊಂಡಿದ್ದ ಸ್ಟ್ರೀಟ್ ಫುಡ್ ಫಿಯೆಸ್ಟಾದಲ್ಲಿ ವೆರೈಟಿ ತಿನಿಸುಗಳನ್ನು ಸವಿದು ಆಹಾರಪ್ರಿಯರು ಎಂಜಾಯ್ ಮಾಡಿದರು. ಉತ್ತರ ಭಾರತೀಯ ಸಸ್ಯಹಾರಿ, ಮಾಂಸಹಾರಿ ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕವಾದ ಸುಮಾರು 160ಕ್ಕೂ ಹೆಚ್ಚು ಮಳಿಗೆಗಳಿದ್ದವು.

ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟ್​ನಲ್ಲಿ ವೆರೈಟಿ ಫುಡ್ ಸವಿದು ಎಂಜಾಯ್ ಮಾಡಿದ ಆಹಾರಪ್ರಿಯರು
ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟ್
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jan 28, 2024 | 11:28 AM

Share

ಮಂಗಳೂರು, ಜ.28: ಸ್ಟ್ರೀಟ್‌ನಲ್ಲಿ ನಿಂತ್ಕೊಂಡು ತಮಗಿಷ್ಟವಾದ ಫುಡ್‌ ಸವಿಯೋದು ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಒಂದೇ ಜಾಗದಲ್ಲಿ ಸ್ಥಳೀಯ ಮಾತ್ರವಲ್ಲದೇ ರಾಜ್ಯ ಹೊರರಾಜ್ಯಗಳ ಬಹುಬೇಡಿಕೆಯ ವಿವಿಧ ಶೈಲಿಯ ಆಹಾರ ಮಳಿಗೆಗಳು ಸಿಕ್ರೆ ಅದಕ್ಕಿಂತ ಹೆಚ್ಚು ಬೇರೆನೂ ಬೇಕು ಅಲ್ವಾ. ಇಂತದ್ದೊಂದು ಅವಕಾಶ ಕಡಲನಗರಿ ಮಂಗಳೂರಿನಲ್ಲಿ (Mangaluru) ಕಲ್ಪಿಸಲಾಗಿತ್ತು. ಕರಾವಳಿಯ ತಿನಿಸುಗಳು ಮಾತ್ರವಲ್ಲದೇ ಹೊರರಾಜ್ಯಗಳ ಆಹಾರಗಳನ್ನು ಸ್ಟ್ರೀಟ್ ಫುಡ್ ಫೆಸ್ಟ್​ನಲ್ಲಿ (Mangaluru Street Food Fiesta) ಆಹಾರಪ್ರಿಯರು ಸವಿದರು.

ಬೀದಿಯುದ್ದಕ್ಕೂ ವಿದ್ಯುತ್ ದೀಪಗಳ ನಡುವೆ ಸ್ಟಾಲ್‌ಗಳು ತಲೆಯೆತ್ತಿದ್ದವು. ಮೀನು ಫ್ರೈ, ಕೋರಿ ರೊಟ್ಟಿ, ಬಿರಿಯಾನಿ, ಕೋರಿ ಪುಂಡಿ, ಎಗ್ ಸ್ಪೆಷಲ್ಸ್, ನೀರುದೋಸೆ, ಮಟನ್ ಸುಕ್ಕ, ಕಬಾಬ್, ಚುರುಮುರಿ, ಹೋಳಿಗೆ, ಜಿಲೇಬಿ, ಐಸ್‌ಕ್ರೀಂ, ಜ್ಯೂಸ್ ಹೀಗೆ ಒಂದಾ ಎರಡಾ. ಬೀದಿಯುದ್ದಕ್ಕೂ 160ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಹಾಕಲಾಗಿತ್ತು. ಸ್ಟಾಲ್​ಗಳ ಮುಂದೆ ಜನವೋ ಜನ ಕಂಡು ಬಂದ್ರು. ಇಲ್ಲಿ ತಮಗಿಷ್ಟವಾದ ಆಹಾರಗಳನ್ನು ಸವಿಯುತ್ತಾ ಆಹಾರ ಪ್ರಿಯರು ಈ ಫುಡ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: ಬೆಂಗಳೂರು: ಬಾರ್​​ನಲ್ಲಿ ಶುರುವಾದ ಗೆಳೆಯರ ಗಲಾಟೆ ಮನೆ ಮುಂದೆ ಕೊಲೆಯಲ್ಲಿ ಅಂತ್ಯ

ಮಂಗಳೂರಿನ ಕರಾವಳಿ ಉತ್ಸವ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮಣ್ಣುಗುಡ್ಡೆ ಗುರ್ಜಿ ಜಂಕ್ಷನ್​​ವರೆಗೆ ಸ್ಟ್ರೀಟ್ ಫುಡ್ ಫಿಯೆಸ್ಟಾ ಆಯೋಜನೆಯಾಗಿದ್ದು ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನೇತೃತ್ವದಲ್ಲಿ ಐದು ದಿನಗಳ ಕಾಲ ಬೀದಿ ಬದಿ ಆಹಾರೋತ್ಸವ ನಡೆದಿದೆ. ಇಂದು ಕೊನೆಯ ದಿನವಾಗಿರೊದ್ರಿಂದ ಸಾವಿರಾರು ಜನ ಈ ಆಹಾರ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Mangalore Street Food Festival organised for 5 days Foodies enjoy variety of food

ಇದು ಕಡಲನಗರಿಯ ಎರಡನೇ ಬೀದಿಬದಿ ಆಹಾರೋತ್ಸವವಾಗಿದ್ದು ಈ ಬಾರಿಯು ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಒಟ್ಟು ಐದು ದಿನಗಳ ಕಾಲ ನಡೆದ ಈ ಆಹಾರೋತ್ಸವದಲ್ಲಿ ತುಳು ನಾಡಿನ ಬಗೆ ಬಗೆಯ ಖಾದ್ಯಗಳ ಜೊತೆಯಲ್ಲಿ ನೆರೆ ರಾಜ್ಯದ ಫೇಮಸ್​ ತಿನಿಸುಗಳನ್ನೂ ಸವಿಯುವ ಅವಕಾಶ ಒದಗಿಸಲಾಗಿತ್ತು. ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ ಸಸ್ಯಹಾರಿ, ಮಾಂಸಹಾರಿ ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕವಾದ ಸುಮಾರು 160ಕ್ಕೂ ಹೆಚ್ಚು ಮಳಿಗೆಗಳಿದ್ದವು. ಇನ್ನು ಈ 160 ಮಳಿಗೆಗಳಲ್ಲಿಯೂ ಡಿಜಿಟಲ್ ವಹಿವಾಟಿಗೆ ಹೆಚ್ಚು ಉತ್ತೇಜನ ನೀಡುವ ಸಲುವಾಗಿ ಪ್ರತ್ಯೇಕ ಕ್ಯೂಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆ ಮಾಡಲಾಗಿತ್ತು. ಇದರ ಜೊತೆಗೆ ಬಿರುವೆರ್ ಕುಡ್ಲ ಸಂಘಟನೆ ಹಾಗೂ ಮ್ಯಾಂಗಲೂರ್ ಮೇರಿ ಜಾನ್ ಸೋಷಿಯಲ್ ಮೀಡಿಯಾದ ತಂಡ ಸೇವೆಗಾಗಿ ಸ್ಟಾಲ್‌ಗಳನ್ನು ಹಾಕಿತ್ತು. ಇವರು ಸ್ಟಾಲ್‌ನಿಂದ ಬರುವ ಲಾಭದ ಹಣವನ್ನು ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ನೀಡುವ ನಿರ್ಧಾರವನ್ನು ಮಾಡಿದ್ದಾರೆ.

ಇದರ ಜೊತೆಯಲ್ಲಿ ಸಂಗೀತ ಪ್ರಿಯರಿಗಾಗಿ ಆರ್ಕೆಸ್ಟ್ರಾ, ಮಕ್ಕಳಿಗೆ ಕಿಡ್ಸ್​ ಝೋನ್​, ಯುವಕ ಯುವತಿಯರಿಗೆ ಡ್ಯಾನ್ಸ್, ಸೆಲ್ಫಿ ರೌಂಡ್ ವಿಡಿಯೋ ಹೀಗೆ ಎಲ್ಲಾ ವಯೋಮಾನದವರಿಗೂ ತಕ್ಕುದಾದ ಚಟುವಟಿಕೆಗಳನ್ನು ಇಲ್ಲಿ ಆಯೋಜಿಸಲಾಗಿತ್ತು. ಒಟ್ಟಿನಲ್ಲಿ ಸ್ಟ್ರೀಟ್ ಫುಡ್ ಫೆಸ್ಟಿವಲ್‌ನ್ನು ಜನ ಸಖತ್ ಎಂಜಾಯ್ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ