AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್

ಮಂಗಳೂರಿನ ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಫೆಬ್ರವರಿ 25 ರಂದು ನಾಪತ್ತೆಯಾಗಿದ್ದ ದಿಗಂತ್​ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಮನೆ ಬಿಟ್ಟು ಹೋಗಲು ಕಾರಣವೇನು ಎಂದು ದಿಗಂತ್ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. ಮನೆ ಬಿಟ್ಟಿದ್ದ ದಿಗಂತ್​ ಊರೂರು ಸುತ್ತಾಡಿ, ಹೊಟೇಲ್​ ಒಂದರಲ್ಲಿ ಕೆಲಸ ಮಾಡಿದ್ದರು.

ಮಂಗಳೂರು: ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್
ವಿದ್ಯಾರ್ಥಿ ದಿಗಂತ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 09, 2025 | 12:13 PM

Share

ಮಂಗಳೂರು, ಮಾರ್ಚ್​ 09: ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ (Diganth) ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ (Police) ಮುಂದೆ ದಿಗಂತ್​ ಹೇಳಿದ್ದಾರೆ. ದ್ಚಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಹೋಗಿರುವುದಾಗಿ ಪೊಲೀಸರಿಗೆ ದಿಗಂತ್​ ಹೇಳಿದ್ದಾರೆ. ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್​ ಬರೊಬ್ಬರಿ 10 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ದಿಗಂತ್​ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಮನೆಬಿಟ್ಟ ಊರೂರು ಸುತ್ತಿದ್ದ ದಿಂಗತ್​

ನಾಪತ್ತೆಯಾದ ದಿನ ಮನೆ ಬಳಿ ರೈಲ್ವೆ ಟ್ರ್ಯಾಕ್​ ಬಳಿ ಹೋಗಿದ್ದ ದಿಗಂತ್, ಅಲ್ಲಿ ಚಪ್ಪಲಿ ಬಿಚ್ಚಿಟ್ಟು ಶೂ ಹಾಕಿಕೊಂಡಿದ್ದಾರೆ. ಬಳಿಕ, ಅಪರಿಚಿತರ ಬೈಕ್​ಏರಿ ಮಂಗಳೂರಿಗೆ ಹೋಗಿದ್ದಾರೆ. ಮಂಗಳೂರಿನಿಂದ ಬಸ್​ ಶಿವಮೊಗ್ಗ ತಲುಪಿ, ಬಳಿಕ ಶಿವಮೊಗ್ಗದಿಂದ ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿ ಟ್ರೈನ್​ ಹತ್ತಿ ಬೆಂಗಳೂರಿಗೆ ಹೋಗಿದ್ದಾರೆ. ನಂದಿಬೆಟ್ಟಕ್ಕೆ ತೆರಳಿ, ಅಲ್ಲಿಯ ಹೊಟೇಲ್​ ಒಂದರಲ್ಲಿ ಮೂರು ದಿನ ಕೆಲಸ ಮಾಡಿ 3000 ಸಂಪಾದನೆ ಮಾಡಿದ್ದಾರೆ.

ನಂತರ ವಿವಿಧ ಕಡೆ ಸುತ್ತಾಟ ನಡೆಸಿ, ಶನಿವಾರ (ಮಾ.08) ರಂದು ಬೆಂಗಳೂರಿನಲ್ಲಿ ಮುರುಡೇಶ್ವರ ಎಕ್ಸ್‌ಪ್ರೆಸ್ ಟ್ರೈನ್​ ಹತ್ತಿ ಉಡುಪಿಗೆ ತುಲುಪಿದ್ದಾರೆ.

ಇದನ್ನೂ ಓದಿ
Image
ನಿಗೂಢ ನಾಪತ್ತೆಯಾಗಿದ್ದ ಮಂಗಳೂರು ವಿದ್ಯಾರ್ಥಿ ಉಡುಪಿಯಲ್ಲಿ ಪತ್ತೆ
Image
ಮಂಗಳೂರು ವಿದ್ಯಾರ್ಥಿ ನಾಪತ್ತೆ: ಮಂಗಳಮುಖಿಯರ ಜೊತೆ ಹೋದ್ನಾ ದಿಗಂತ?
Image
ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್ ಸೂಚನೆ
Image
ಕೋಟೆಕಾರು ದರೋಡೆ: ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆಯೇ ರೋಚಕ

ಪೊಲೀಸರಿಗೆ ಪ್ರಶ್ನೆ ಕೇಳಿದ್ದ ದಿಗಂತ್​

ಶನಿವಾರ ಬೆಂಗಳೂರಿನಿಂದ ಮುರುಡೇಶ್ವರ ಎಕ್ಸ್‌ಪ್ರೆಸ್‌ ಟ್ರೈನ್​ನಲ್ಲಿ ಹೋಗುವಾಗ ದಿಗಂತ್ ಪೊಲೀಸರ ಕಾರ್ಯಾಚರಣೆ ನೋಡಿದ್ದರು. ರೈಲು ದಿಗಂತ್ ಮನೆ ಸಮೀಪವೇ ಹೋಗುತ್ತೆ. ಮನೆ ಸಮೀಪ ರೈಲು ಬಂದಾಗ, ಕಿಟಕಿ ಬಳಿ ನಿಂತು ದಿಗಂತ್ ತನ್ನ ಮನೆ ಗಮನಿಸಿದ್ದರು. ಈ ವೇಳೆ, ರೈಲು ಹಳಿ ಸುತ್ತಾಮುತ್ತಾ ಡ್ರೋನ್ ಹಾರಾಟ, ಪೊಲೀಸರ ಕೂಂಬಿಂಗ್ ನೋಡಿದ್ದರು. ಪತ್ತೆಯಾದ ಬಳಿಕ‌ ಪೊಲೀಸರಿಗೆ, ಮನೆ ಬಳಿ ಇರುವ ಕೆರೆ ಹತ್ತಿರ ಏನಕ್ಕೆ ಅಗೆಯುತ್ತಿದ್ರಿ, ಹುಡುಕುತ್ತಿದ್ರಿ ಎಂದು ದಿಗಂತ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ: ಮಂಗಳೂರಿನಲ್ಲಿ ಯುವಕ ಆತ್ಮಹತ್ಯೆ

ಹಲವು ಅನುಮಾನಕ್ಕೆ ಹುಟ್ಟು ಹಾಕಿದ್ದ ದಿಗಂತ್ ನಾಪತ್ತೆ

ದಿಗಂತ್ ನಾಪತ್ತೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ದಿಗಂತ ನಾಪತ್ತೆ ಹಿಂದೆ ಗಾಂಜಾ ವ್ಯಸನಿಗಳ ಕೈವಾಡವಿದೆಯಾ? ಎಂಬ ಅನುಮಾನ ಹುಟ್ಟಿಕೊಂಡಿತ್ತು. ಇಷ್ಟೇ ಅಲ್ಲದೇ, ದಿಗಂತ್​ ಬಂಟ್ವಾಳ ತಾಲೂಕಿನ ಸಜಿಪ ಮೂಲದ ಮಂಗಳಮುಖಿಯ ಜೊತೆಗೆ ಹೋಗಿದ್ದಾನೆ ಎಂದು ವಂದತಿ ಹಬ್ಬಿತ್ತು. ಈ ಎಲ್ಲ ವಂದತಿಗಳಿಂದ ಪೋಷಕರು ಗಾಭರಿಗೊಂಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 am, Sun, 9 March 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!