AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಅಮಾನತು

ಹಿಜಾಬ್ ಧರಿಸಿ ಬಂದಿದ್ದಕ್ಕಾಗಿ ಜೂನ್ 8ರವರೆಗೆ ಕಾಲೇಜಿನಿಂದ ವಿದ್ಯಾರ್ಥಿನಿಯನ್ನ ಅಮಾನತು ಮಾಡಲಾಗಿದೆ. ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಆಗಮಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಅಮಾನತು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 04, 2022 | 1:02 PM

Share

ಮಂಗಳೂರು: ನಿಷೇಧದ ಬಳಿಕವೂ ಹಿಜಾಬ್ (Hijab) ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಅಮಾನತ್ತಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಹಿಜಾಬ್ ಧರಿಸಿ ಬಂದಿದ್ದಕ್ಕಾಗಿ ಜೂನ್ 8ರವರೆಗೆ ಕಾಲೇಜಿನಿಂದ ವಿದ್ಯಾರ್ಥಿನಿಯನ್ನ ಅಮಾನತು ಮಾಡಲಾಗಿದೆ. ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಆಗಮಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಹೀಗೆ ಸತತ ಸೂಚನೆ ಬಳಿಕವೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯನ್ನ ಅಮಾನತು ಮಾಡಲಾಗಿದೆ. ಉಪನ್ಯಾಸಕರ ಸಭೆಯಲ್ಲಿ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: IND vs PAK: ಈ ವರ್ಷ ಭಾರತ-ಪಾಕಿಸ್ತಾನ್ 5 ಬಾರಿ ಮುಖಾಮುಖಿಯಾಗುವ ಸಾಧ್ಯತೆ..!

ಹಿಜಾಬ್ ಧರಿಸಿ ಬಂದ 16 ವಿದ್ಯಾರ್ಥಿನಿಯರು: ಇನ್ನು ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ ನಿರ್ಬಂಧದ ನಡುವೆ ವಿದ್ಯಾರ್ಥಿನಿಯರು ಇಂದು ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಆದರೆ ಹಿಜಾಬ್​ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ತರಗತಿಗೆ ಹೋಗದಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಡೆದಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಕಾಲೇಜಿಗೆ ಬಂದಿರಲಿಲ್ಲ. ಇಂದು ಮತ್ತೆ 16 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬಂದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಯತ್ನ: ಘಟನೆ ವರದಿ ಮಾಡಲು ತೆರಳಿದ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಿದ್ದಾರೆ. ವಿದ್ಯಾರ್ಥಿಗಳು ವಿಡಿಯೋವನ್ನು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ. ಜೊತೆಗೆ ಕಾಲೇಜಿನ ಘಟನೆಯನ್ನು ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ‌. ಈ ವೇಳೆ ಪೋಲೀಸರು ವಿದ್ಯಾರ್ಥಿಗಳನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ