AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧ, ಸೆಕ್ಷನ್ 144 ಜಾರಿ

ಸುರತ್ಕಲ್​​, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧ, ಸೆಕ್ಷನ್ 144 ಜಾರಿ
Mangaluru Police Commissioner Shashi Kumar
TV9 Web
| Edited By: ಆಯೇಷಾ ಬಾನು|

Updated on:Dec 25, 2022 | 8:26 AM

Share

ಮಂಗಳೂರು: ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಫಾತಿಮಾ ಎಂಬ ಸ್ಟೋರ್ ಬಳಿ ಡಿ.24ರ ರಾತ್ರಿ 8:30ರ ಸುಮಾರಿಗೆ ಘನಘೋರ ದುರಂತ ನಡೆದಿದೆ. ಸ್ಟೋರ್​ ಮಾಲೀಕ ಅಬ್ದುಲ್ ಜಲೀಲ್​ ಅಂಗಡಿ ಬಾಗಿಲು ಮುಚ್ಚಿ​ ಮನೆಗೆ ಹೋಗಬೇಕಿತ್ತು. ಈ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಕ್ಷುಲ್ಲಕ ವಿಚಾರಕ್ಕೆ ತಗಾದೆ ತೆಗೆದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಿಡಿಗೇಡಿಗಳು ಏಕಾಏಕಿ ಚಾಕು ತೆಗೆದು ಜಲೀಲ್​ಗೆ ಇರಿದು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಸೆಕ್ಷನ್ 144 ಹಾಕಲಾಗಿದೆ.

ಮಂಗಳೂರಿನ ಸುರತ್ಕಲ್​​ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್​​, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗಳಿಗೆ, ಕ್ರಿಸ್​ಮಸ್​ ಹಬ್ಬ ಆಚರಣೆಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಯು.ಟಿ.ಖಾದರ್ ಆಕ್ರೋಶ

ಮದ್ಯ ಮಾರಾಟ ನಿಷೇಧ

ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ಡಿ.27 ಬೆಳಗ್ಗೆ 10 ರವರೆಗೂ ನಿಷೇಧ ಹೇರಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಇಂಡಸ್ಟ್ರೀಸ್ ಹಾಗೂ ಸಂಕೀರ್ಣಗಳಿಗೆ ಪೊಲೀಸ್ ಅಡ್ವೈಸರಿ

ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸಂಜೆ 6 ಗಂಟೆ ಒಳಗೆ ಶಿಫ್ಟ್ ಚೆಂಜ್ ಮಾಡಲು ಸೂಚಿಸಲಾಗಿದೆ. ಸಂಜೆ 6 ರಿಂದ ಬೆಳಗ್ಗೆ 6 ರವರೆಗೂ ಸಿಬ್ಬಂದಿಗಳು ರಸ್ತೆಯಲ್ಲಿ ಇರದಂತೆ ನೋಡಿಕೊಳ್ಳಲು ಆದೇಶಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:25 am, Sun, 25 December 22

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ