AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಯು.ಟಿ.ಖಾದರ್ ಆಕ್ರೋಶ

ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿಜವಾದ ಆರೋಪಿಗಳನ್ನು ಹಿಡಿಯುವ ಕೆಲಸ ಮಾಡಬೇಕು. ಕಳೆದ 2 ತಿಂಗಳಿಂದ ನೈತಿಕ ಪೊಲೀಸ್​ಗಿರಿ, ಅನೈತಿಕ ದಾಳಿ ನಡೆಯುತ್ತಿದೆ.

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಯು.ಟಿ.ಖಾದರ್ ಆಕ್ರೋಶ
ಯುಟಿ ಖಾದರ್
TV9 Web
| Edited By: |

Updated on:Dec 25, 2022 | 7:11 AM

Share

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್​​ನ (Surathkal) ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ನಿನ್ನೆ(ಡಿ.24) ಅಬ್ದುಲ್​ ಜಲೀಲ್(45) ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಈ ಘಟನೆ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರಿಂದ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ದೂರವಾಣಿ ಮೂಲಕ ಮಾಹಿತಿ ಸಂಗ್ರಹಿಸಿದ್ದಾರೆ. CLP ನಾಯಕ ಸಿದ್ದರಾಮಯ್ಯ ಘಟನೆ ಬಗ್ಗೆ ಮಾಹಿತಿ ಪಡೆಯಲು ಮಾಜಿ ಶಾಸಕ ಮೊಯ್ದೀನ್​ಗೆ ಕರೆ ಮಾಡಿದ್ದ ಕಮಿಷನರ್​​ ಅಲ್ಲೇ ಇದ್ದಿದ್ರಿಂದ ಮೊಬೈಲ್ ಕೊಡಲು ಹೇಳಿದ್ರು. ಆಗ ಮೊಯ್ದೀನ್ ಪೊಲೀಸ್​ ಕಮಿಷನರ್​ ಶಶಿಕುಮಾರ್​ಗೆ ಮೊಬೈಲ್ ನೀಡಿದ್ದು ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.

ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಖಾದರ್ ಆಕ್ರೋಶ

ಇನ್ನು ಘಟನೆ ಸಂಬಂಧ ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿಜವಾದ ಆರೋಪಿಗಳನ್ನು ಹಿಡಿಯುವ ಕೆಲಸ ಮಾಡಬೇಕು. ಕಳೆದ 2 ತಿಂಗಳಿಂದ ನೈತಿಕ ಪೊಲೀಸ್​ಗಿರಿ, ಅನೈತಿಕ ದಾಳಿ ನಡೆಯುತ್ತಿದೆ. ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್​ ಆಕ್ರೋಶ ಹೊರ ಹಾಕಿದ್ದಾರೆ. ಬೇಲೆಬಲ್​ ಸೆಕ್ಷನ್ ಹಾಕುವುದರಿಂದ ಬೇಲ್ ಪಡೆದು ಹೊರಬರುತ್ತಾರೆ. ಹೀಗಾಗಿ ಪದೇಪದೆ ಅಂತಹ ಘಟನೆಗಳು ನಡೆಯುತ್ತಿವೆ. ಗೃಹಸಚಿವರ ಜತೆ ನಿನ್ನೆ ಇದೇ ವಿಚಾರದ ಬಗ್ಗೆ ನಾನು ಚರ್ಚೆ ಮಾಡಿದ್ದೆ ಎಂದರು.

ಇದನ್ನೂ ಓದಿ: Mangaluru: ಸುರತ್ಕಲ್​ನ ಕಾಟಿಪಳ್ಯದಲ್ಲಿ ಚಾಕು ಇರಿತ

ಗೃಹಸಚಿವರು ಜಿಲ್ಲೆಯಲ್ಲಿ ಇದ್ದಾಗಲೇ ಇಂತಹ ಕೃತ್ಯವೆಸಗಿದ್ದಾರೆ

ಇನ್ನು ಘಟನೆ ಸಂಬಂಧ ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರತಿಕ್ರಿಯೆ ನೀಡಿದ್ದಾರೆ. ನೈತಿಕ ಪೊಲೀಸ್​ಗಿರಿ ಪ್ರಕರಣಕ್ಕೆ ತಕ್ಕ ಶಿಕ್ಷೆ ಆಗದಿರುವುದರಿಂದ ಮಂಗಳೂರಿನಲ್ಲಿ ಪದೇಪದೆ ಇಂತಹ ಘಟನೆ ಮರುಕಳಿಸುತ್ತಿವೆ. ಗೃಹಸಚಿವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದ್ದಾರೆ. ಗೃಹಸಚಿವರು ಜಿಲ್ಲೆಯಲ್ಲಿ ಇದ್ದಾಗಲೇ ಇಂತಹ ಕೃತ್ಯವೆಸಗಿದ್ದಾರೆ. ಈ ಹಿಂದೆ ಸಿಎಂ ಜಿಲ್ಲೆಯಲ್ಲಿ ಇದ್ದಾಗ ಸುರತ್ಕಲ್​ನಲ್ಲಿ ಹತ್ಯೆಯಾಗಿತ್ತು. ಇವರ ಕುಮ್ಮಕ್ಕಿನಿಂದಲೇ ಮಂಗಳೂರಿನಲ್ಲಿ ಹೀಗೆ ನಡೆಯುತ್ತಿದೆ ಎಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಬಳಿ ಮೊಯ್ದೀನ್ ಬಾವಾ ಪ್ರತಿಕ್ರಿಯಿಸಿದರು.

ಕ್ರಿಸ್ಮಸ್ ಇರುವ ಕಾರಣ ಅಗತ್ಯವಿದ್ದರೆ ನಿಷೇಧಾಜ್ಞೆ ಜಾರಿಮಾಡುತ್ತೇವೆ

ಘಟನೆ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್​ ಮಾತನಾಡಿದ್ದು, ಹತ್ಯೆಯಾದ ಅಬ್ದುಲ್ ಜಲೀಲ್​ ಫ್ಯಾನ್ಸಿ ಸ್ಟೋರ್​ ನಡೆಸುತ್ತಿದ್ದರು. ಅಬ್ದುಲ್ ಜಲೀಲ್​ಗೆ ಇಬ್ಬರು ಚೂರಿ ಇರಿದು ಪರಾರಿಯಾಗಿದ್ದಾರೆ. ಜಲೀಲ್​ ಹತ್ಯೆ ಹಿಂದಿನ ಉದ್ದೇಶ ಏನು ಅನ್ನೋದು ಸ್ಪಷ್ಟವಾಗಿಲ್ಲ. ಸ್ಥಳೀಯರು ಕೆಲವು ಅನುಮಾನ ವ್ಯಕ್ತಪಡಿಸಿದ್ದು ಪರಿಶೀಲಿಸುತ್ತೇವೆ. ಘಟನೆ ನಡೆದಿರುವ ಸ್ಥಳ ಹಿಂದಿನಿಂದಲೂ ಅತ್ಯಂತ ಸೂಕ್ಷ್ಮ ಪ್ರದೇಶ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ. ಕ್ರಿಸ್ಮಸ್ ಇರುವ ಕಾರಣ ಅಗತ್ಯವಿದ್ದರೆ ನಿಷೇಧಾಜ್ಞೆ ಜಾರಿಮಾಡುತ್ತೇವೆ. ಘಟನಾ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸುತ್ತೇವೆ. ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ. ಡಿಸೆಂಬರ್ ತಿಂಗಳಲ್ಲಿ ಹಲವು ಗೂಂಡಾಗಿರಿ ಪ್ರಕರಣಗಳು ನಡೆದಿವೆ. ಎಲ್ಲಾ ಘಟನೆ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗುವುದು. ಕಳೆದ 1 ವಾರದಿಂದ ಇಂತಹ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಮುಂದೆ ಇಂತಹ ಕೃತ್ಯ ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್​ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:11 am, Sun, 25 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್