AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಸುರತ್ಕಲ್​ ಬಳಿಯ ಟೋಲ್​ ಸಂಗ್ರಹ ಕೇಂದ್ರ ರದ್ದು: ನಳೀನ್ ಕುಮಾರ್ ಕಟೀಲ್

ಮಂಗಳೂರಿನ ಸುರತ್ಕಲ್​ ಬಳಿಯ ಟೋಲ್​ ಸಂಗ್ರಹ ಕೇಂದ್ರ ರದ್ದಾಗಿದ್ದು, ಪ್ರತಿಭಟನಾಕಾರರಿಗೆ ಜಯ ಲಭಿಸಿದೆ.

ಮಂಗಳೂರಿನ ಸುರತ್ಕಲ್​ ಬಳಿಯ ಟೋಲ್​ ಸಂಗ್ರಹ ಕೇಂದ್ರ ರದ್ದು: ನಳೀನ್ ಕುಮಾರ್ ಕಟೀಲ್
ಸುರತ್ಕಲ್ ಟೋಲ್ ಗೇಟ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 14, 2022 | 7:00 PM

Share

ದಕ್ಷಿಣ ಕನ್ನಡ: ಮಂಗಳೂರಿನ ಸುರತ್ಕಲ್​ ಬಳಿಯ ಟೋಲ್​ ಸಂಗ್ರಹ ಕೇಂದ್ರ ರದ್ದಾಗಿದ್ದು, ಪ್ರತಿಭಟನಾಕಾರರಿಗೆ ಜಯ ಲಭಿಸಿದೆ. ಸುರತ್ಕಲ್​ ಬಳಿಯ ಟೋಲ್​ ಸಂಗ್ರಹ ಕೇಂದ್ರವನ್ನು ತೆರವುಗೊಳಿಸುವಂತೆ ಟೋಲ್​ ವಿರೋಧಿ ಹೋರಾಟ ಸಮಿತಿ, ಕಾಂಗ್ರೆಸ್​, DYFI, ಸಿಪಿಐಎಂ ಸೇರಿ ಸಮಾನ ಮನಸ್ಕ ಸಂಘಟನೆಗಳ ಸಮಿತಿ ಅಕ್ಟೋಬರ್​ 28ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿತ್ತು. ಅಲ್ಲದೆ ಪ್ರತಿಭಟನಾಕಾರರು ವಾರದ ಹಿಂದೆ ಟೋಲ್​ ಗೇಟ್​ಗೆ ಮುತ್ತಿಗೆ ಹಾಕಿದ್ದರು.

“ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್​ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ”, ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ್​ ಕಟೀಲ್​ ಟ್ವೀಟ್​ ಮಾಡಿದ್ದಾರೆ.

ಟೋಲ್​ ಸಂಗ್ರಹ ಕೇಂದ್ರ ತೆರವಿಗೆ ಏಕೆ ಒತ್ತಾಯ

ಈ ಟೋಲ್ ಗೇಟ್ 2015 ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಂಭಗೊಂಡಿದೆ. ಹೈವೆಯಲ್ಲಿ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಇರಬೇಕಾದದ್ದು ಹೆದ್ದಾರಿ ಪ್ರಾಧಿಕಾರದ ನಿಯಮ. ಆದರೆ ಸುರತ್ಕಲ್ ಟೋಲ್ ಆ ನಿಯಮವನ್ನು ಮೀರಿದೆ ಎಂಬ ಆರೋಪವಿದೆ. ಸುರತ್ಕಲ್ ಟೋಲ್​ನಿಂದ ಹೆಜಮಾಡಿ ಟೋಲ್ ಪ್ಲಾಜಾ ದೂರ ಕೇವಲ 17 ಕಿ.ಮೀ. ಸುರತ್ಕಲ್ ಟೋಲ್ ‌ಮುಚ್ಚುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸಲಾಗಿತ್ತು. ಆದರೆ ಮುಚ್ಚುವ ಬದಲು ಹೊಸ ಗುತ್ತಿಗೆದಾರನಿಗೆ ಟೋಲ್ ವಹಿಸಲು ಟೆಂಡರ್‌ ನೀಡಲಾಗಿದೆ. ಹೀಗಾಗಿ ನಿರ್ಣಾಯಕ ಹೋರಾಟಕ್ಕೆ ಸಂಘಟನೆಗಳು ಮುಂದಾಗಿದ್ದವು. ಈಗ ಅವರ ಹೋರಾಟಕ್ಕೆ ಜಯ ಲಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:54 pm, Mon, 14 November 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ