AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳಲಿ ಮಸೀದಿ ವಿವಾದ; ವಿಶ್ವ ಹಿಂದೂ ಪರಿಷತ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂದೂಡಿಕೆ

ಮಳಲಿ ಎಂಬಲ್ಲಿ ಇರುವ ಜುಮ್ಮಾ ಮಸೀದಿ (Jumma Masjid) ನವೀಕರಣದ ಸಂದರ್ಭದಲ್ಲಿ ದೇವಾಲಯದ ಮಾದರಿ ರಚನೆ ಪತ್ತೆಯಾಗಿತ್ತು. ಇದರಿಂದ ಈ ಮಸೀದಿಯು ಹಿಂದೂ ದೇಗುಲವಾಗಿತ್ತು ಎನ್ನುವ ವಿಚಾರ ಹೊಸ ಚರ್ಚೆಗೆ ಗ್ರಾಸವಾಗಿತ್ತು. ಈ ವಿವಾದ ಎಪ್ರಿಲ್ 22, 2022 ರಂದು ಕೋರ್ಟ್ ಮೆಟ್ಟಿಲೇರಿತ್ತು. ಇದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್​ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೂಡಿದೆ.

ಮಳಲಿ ಮಸೀದಿ ವಿವಾದ; ವಿಶ್ವ ಹಿಂದೂ ಪರಿಷತ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂದೂಡಿಕೆ
ಮಳಲಿ ಮಸೀದಿ ವಿವಾದ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 17, 2024 | 2:36 PM

Share

ದಕ್ಷಿಣ ಕನ್ನಡ, ಫೆ.17: ಮಂಗಳೂರು ಸಮೀಪದ ಮಳಲಿ ಎಂಬಲ್ಲಿ ಇರುವ ಜುಮ್ಮಾ ಮಸೀದಿ (Jumma Masjid) ನವೀಕರಣದ ಸಂದರ್ಭದಲ್ಲಿ ದೇವಾಲಯದ ಮಾದರಿ ರಚನೆ ಪತ್ತೆಯಾಗಿತ್ತು. ಇದರಿಂದ ಈ ಮಸೀದಿಯು ಹಿಂದೂ ದೇಗುಲವಾಗಿತ್ತು ಎನ್ನುವ ವಿಚಾರ ಹೊಸ ಚರ್ಚೆಗೆ ಗ್ರಾಸವಾಗಿತ್ತು. ಅಷ್ಟೇ ಅಲ್ಲ, ಈ ವಿವಾದ ಎಪ್ರಿಲ್ 22, 2022 ರಂದು ಕೋರ್ಟ್ ಮೆಟ್ಟಿಲೇರಿತ್ತು. ಮಳಲಿ ಮಸೀದಿ ವಿವಾದದಲ್ಲಿ ಉತ್ಖನನ ಮಾಡಿ ಸರ್ವೇಗೆ ವಿಶ್ವ ಹಿಂದೂ ಪರಿಷತ್ (Vishva Hindu Parishad) ಸಲ್ಲಿಸಿತ್ತು. ಈ ಅರ್ಜಿ ವಿಚಾರ ಕುರಿತು ಇಂದು(ಫೆ.17) ಮಂಗಳೂರು ಕೋರ್ಟ್​ನಲ್ಲಿ ಮತ್ತೆ ಅರ್ಜಿ ವಿಚಾರಣೆ ನಡೆಸಲಾಗಿದೆ. ಬಳಿಕ ಈ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮತ್ತೆ ಸೋಮವಾರಕ್ಕೆ ಮುಂದೂಡಿದೆ.

ವಿವಾದಿತ ಮಳಲಿ ಮಸೀದಿಯ ಉತ್ಖನನ ಮಾಡಿ ಸರ್ವೇ ನಡೆಸಲು ಮನವಿ ಮಾಡಿದ್ದ ವಿಎಚ್​ಪಿ

ವಿವಾದಿತ ಮಳಲಿ ಮಸೀದಿಯ ಸರ್ವೇ ನಡೆಸುವ ಸಲ್ಲಿಸದ್ದ ಅರ್ಜಿ ವಿಚಾರವಾಗಿ ಇಂದು ಮತ್ತೆ ಮಸೀದಿ ಪರ ವಕೀಲರು ವಿಶ್ವ ಹಿಂದೂ ಪರಿಷತ್​ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹೈ ಕೋರ್ಟ್ ತೀರ್ಪಿನ ಪ್ರತಿ ತಲುಪಿದ ಬಳಿಕ ವಾದ ಮಂಡನೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಈಗಾಗಲೇ ಹೈಕೋರ್ಟ್​ನಿಂದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನಿರ್ದೇಶನ ತಲುಪಿದ್ದು, ಮಳಲಿ‌ ಮಸೀದಿ ಜಾಗ ವಕ್ಫ್ ಆಸ್ತಿ ಹೌದಾ? ಅಥವಾ ಅಲ್ಲವಾ ಎಂದು ನಿರ್ಧರಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ.

ಇದನ್ನೂ ಓದಿ:ಮಳಲಿ ಮಸೀದಿ ವಿವಾದ; ಅಧಿಕೃತವಾಗಿ ಕಾನೂನು ಹೋರಾಟಕ್ಕೆ ಇಳಿದ ವಕ್ಫ್ ಬೋರ್ಡ್

ಈಗಾಗಲೇ ತೀರ್ಪು ಪ್ರಕಟಿಸಿ ಆದೇಶ ಮಾಡಿರೋ ರಾಜ್ಯ ಹೈಕೋರ್ಟ್

ಇನ್ನು ಈಗಾಗಲೇ ತೀರ್ಪನ್ನು ಪ್ರಕಟಿಸಿ ರಾಜ್ಯ ಹೈಕೋರ್ಟ್​ ಆದೇಶ ಮಾಡಿತ್ತು. ಅದರೆ, ಹೈಕೋರ್ಟ್ ಆದೇಶ ಪ್ರತಿ ತಲುಪದ ಹಿನ್ನೆಲೆ ಮಸೀದಿ ಪರ ವಕೀಲರಿಂದ ವಾದ ಮಂಡನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಹೀಗಾಗಿ ಕೋರ್ಟ್‌ ಮುಂದಿನ ವಿಚಾರಣೆಯನ್ನು ಮತ್ತೆ ಸೋಮವಾರಕ್ಕೆ ಮುಂದೂಡಿದೆ. ಸೋಮವಾರ ಮಸೀದಿ ಪರ ವಾದ ಮಂಡಿಸದೇ ಇದ್ದರೆ, ಆದೇಶ ಮಾಡುವುದಾಗಿ ನ್ಯಾಯಾಧೀಶರು ಸೂಚಿಸಿದ್ದಾರೆ. ಇನ್ನು ವಿಎಚ್​ಪಿ ಪರ ಧನಂಜಯ್ ಎಂಬವವರು ಈ ಅರ್ಜಿ ಸಲ್ಲಿಸಿದ್ದರು. ಮೇ.25,  2022 ರಂದು ವಿಎಚ್​ಪಿಯಿಂದ ವಿವಾದ ಸಂಬಂಧ ತಾಂಬೂಲ ಪ್ರಶ್ನೆ ಇಡಲಾಗಿತ್ತು. ತಾಂಬೂಲ ಪ್ರಶ್ನೆಯಲ್ಲಿ ದೈವ ಸಾನಿಧ್ಯ ಇರುವುದು ಪತ್ತೆಯಾಗಿತ್ತು. ಆದರೆ, ಕಾನೂನು ಹೋರಾಟದ ಫಲಿತಾಂಶಕ್ಕಾಗಿ ವಿಶ್ವ ಹಿಂದೂ ಪರಿಷತ್​ ಕಾಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ