AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸೋಮೇಶ್ವರ ಬಳಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಸಮುದ್ರತೀರದಲ್ಲಿ ಆಟವಾಡುವ ಸಂದರ್ಭ ಅಪ್ಪಳಿಸಿದ ಅಲೆಗಳ ನಡುವೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯ ಉಳ್ಳಾಲ ತಾಲೂಕಿನ ಸೋಮೇಶ್ವರದಲ್ಲಿ ನಡೆದಿದೆ.

ಮಂಗಳೂರು: ಸೋಮೇಶ್ವರ ಬಳಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು
ಸಮುದ್ರಪಾಲಾದ ವಿದ್ಯಾರ್ಥಿಗಳು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Dec 09, 2023 | 5:34 PM

Share

ದಕ್ಷಿಣ ಕನ್ನಡ, ಡಿ.09: ಸಮುದ್ರತೀರದಲ್ಲಿ ಆಟವಾಡುವ ಸಂದರ್ಭ ಅಪ್ಪಳಿಸಿದ ಅಲೆಗಳ ನಡುವೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯ ಉಳ್ಳಾಲ ತಾಲೂಕಿನ ಸೋಮೇಶ್ವರದಲ್ಲಿ ನಡೆದಿದೆ. ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯುಸಿ ಕಾಲೇಜಿನ ಯಶ್ವಿತ್​ ಹಾಗೂ ಯುವರಾಜ್ ಮೃತ ವಿದ್ಯಾರ್ಥಿಗಳು. ಇನ್ನು ಇವರ ಮೃತ ದೇಹಕ್ಕಾಗಿ ಸ್ಥಳೀಯ ಈಜುಗಾರರು, ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ. ಇನ್ನು ಘಟನೆ ಹಿನ್ನಲೆ ಸೋಮೇಶ್ವರ ಸಮುದ್ರ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಈಜಲು ತೆರಳದಂತೆ ಉಳ್ಳಾಲ ಠಾಣಾಧಿಕಾರಿ ಹೆಚ್. ಎನ್ ಬಾಲಕೃಷ್ಣ ಸೂಚಿಸಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಡಿ.03 ರಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ಐವರು ಸ್ನೇಹಿತರ ಪೈಕಿ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಕಲಬುರಗಿ ಮೂಲದ ಆಕಾಶ ಮತ್ತು ಅಭಿಷೇಕ್​ ಎಂಬುವವರು ಕೊನೆಯುಸಿರೆಳೆದಿದ್ದರು. ಬೀಚ್​ನಲ್ಲಿ ಯಾಂತ್ರಿಕ ಬೋಟ್ ಓಡಿಸುತ್ತಿರುವಾಗ ಅಲೆಗಳ ಜೋರಾದ ರಭಸಕ್ಕೆ ಸಿಲುಕಿ ಈ ದುರ್ಘಟನೆ ನಡೆದಿತ್ತು.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು, ಹಾಸನದಲ್ಲಿ ಕೋಟೆ ನೋಡಲು ಬಂದು ಕಾಲು ಜಾರಿ ಬಿದ್ದಿದ್ದ ಯುವಕ ಪಾರು

ಈ ಕುರಿತು ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ ಐವರು ಪ್ರವಾಸಿಗರು ಸಮುದ್ರದಲ್ಲಿ ಈಜಾಡಲು ಹೋದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಕಂಡು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದರು. ಈ ಘಟನೆ ಮರೆಮಾಚುವ ಮುನ್ನವೇ ಇಬ್ಬರು ಯುವಕರು ಸಾವನ್ನಪ್ಪಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಕೊನೆಯುಸಿರೆಳೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Sat, 9 December 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು