AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ, ನಾಲ್ವರ ವಿರುದ್ಧ ದೂರು ದಾಖಲು

ಮೊಹಮ್ಮದ್ ಜಹೀರ್ ಎಂಬ ಯುವಕ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ತನಗೆ ಪರಿಚಯವಿದ್ದ ಯುವತಿ ಕಂಡು ಮಾತನಾಡಿಸಿದ್ದ. ಇದನ್ನು ತಿಳಿದ ಗುಂಪೊಂದು ಹಲ್ಲೆ ನಡೆಸಿದೆ.

ಉಜಿರೆ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ, ನಾಲ್ವರ ವಿರುದ್ಧ ದೂರು ದಾಖಲು
ಮುಸ್ಲಿಂ ಯುವಕನ ಮೇಲೆ ಹಲ್ಲೆ
ಆಯೇಷಾ ಬಾನು
|

Updated on:Apr 05, 2023 | 8:10 AM

Share

ಮಂಗಳೂರು: ಯುವತಿಯೊಂದಿಗೆ ಮಾತನಾಡಿದಕ್ಕೆ ಮುಸ್ಲಿಂ ಯುವಕನ್ನು ಬಸ್​ನಿಂದ ಎಳೆದು ತಂದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಏಪ್ರಿಲ್ 04ರಂದು ಮೊಹಮ್ಮದ್ ಜಹೀರ್(22) ಎಂಬ ಯುವಕ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ತನಗೆ ಪರಿಚಯವಿದ್ದ ಯುವತಿ ಕೂಡ ಅದೇ ಬಸ್​ನಲ್ಲಿರುವುದನ್ನು ಕಂಡು ಮಾತನಾಡಿಸಿದ್ದ. ಇದನ್ನು ಕಂಡ ಗುಂಪೊಂದು ಯುವಕನನ್ನು ಬಸ್‌ನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. “ಕ್ಷುಲ್ಲಕ ವಿಚಾರಕ್ಕೆ ಯುವಕ ಮತ್ತು ಕೆಲವರ ನಡುವೆ ಮಾರಾಮಾರಿ ನಡೆದಿದೆ” ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಜಹೀರ್ ನೀಡಿದ ದೂರಿನ ಆಧಾರದ ಮೇಲೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ವೀಕ್ಷಿಸಿದ ನಂತರ ಮುಸ್ಲಿಂ ಯುವಕನ ಮೇಲೆ ಕತ್ತಿಯಿಂದ ಹಲ್ಲೆ; ಪೊಲೀಸರು ಬಿಚ್ಚಿಟ್ಟರು ಘಟನೆಯ ಬೆಚ್ಚಿಬೀಳಿಸುವ ಸತ್ಯಾಂಶ

ಜಹೀರ್ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿ ಸಿಕ್ಕಲೆಂದು ಆಕೆಯ ಜೊತೆ ಒಂದೇ ಸೀಟಿನಲ್ಲಿ ಕುಳಿತು ಮಾತನಾಡುತ್ತಿದ್ದ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದಾಳೆ. ಬಸ್ಸಿನಲ್ಲಿ ಇದ್ದವರು ಇದನ್ನು ಗಮನಿಸಿ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದಾರೆ. ಜಹೀರ್ ಇದ್ದ ಬಸ್ ಉಜಿರೆಗೆ ಬರುತ್ತಿದ್ದಂತೆ ಕಾದು ನಿಂತಿದ್ದ ಯುವಕರ ತಂಡ ಜಹೀರ್​ನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಹಲ್ಲೆಗೆ ಒಳಗಾಗಿರುವ ಜಹೀರ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಸಂಬಂಧ ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್.ಡಿ‌.ಪಿ ಐ ಪಕ್ಷದ ತಾಲೂಕು ಅಧ್ಯಕ್ಷ ನವಾಜ್ ಕಟ್ಟೆ ಹಾಗೂ ಇತರ ಮುಖಂಡರುಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಗೆ ಧೈರ್ಯ ತುಂಬಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:10 am, Wed, 5 April 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?