AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚಿಮುಲ್ ನೇಮಕಾತಿ ಹಗರಣಕ್ಕೆ ಮಂಗಳೂರು ವಿವಿ ಲಿಂಕ್! ಪರೀಕ್ಷಾಂಗ ಕುಲಸಚಿವರ ವಿಚಾರಣೆ

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿ, ಬ್ಯಾಂಕ್‌ಗಳಲ್ಲಿ ಪರಿಶೀಲನೆ ನಡೆಸಿ, ಕೋಚಿಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳೂರು ವಿವಿ ಅಧಿಕಾರಿಗಳಿಂದ ಪ್ರಶ್ನೆಪತ್ರಿಕೆ ಮಾರಾಟ ಮಾಡಲಾಗಿರುವ ಶಂಕೆ ವ್ಯಕ್ತವಾಗಿದೆ.

ಕೋಚಿಮುಲ್ ನೇಮಕಾತಿ ಹಗರಣಕ್ಕೆ ಮಂಗಳೂರು ವಿವಿ ಲಿಂಕ್! ಪರೀಕ್ಷಾಂಗ ಕುಲಸಚಿವರ ವಿಚಾರಣೆ
ಮಂಗಳೂರು ವಿವಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 20, 2024 | 1:24 PM

Share

ಮಂಗಳೂರು, ಜ.20: ಕೋಲಾರ– ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಚಿಮುಲ್) ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿ (Mangalore University) ಅಧಿಕಾರಿಗಳಿಂದ ಪ್ರಶ್ನೆಪತ್ರಿಕೆ ಮಾರಾಟ ಮಾಡಲಾಗಿರುವ ಶಂಕೆ ವ್ಯಕ್ತವಾಗಿದೆ. ಕೋಚಿಮುಲ್ ನೇಮಕಾತಿ ಹಗರಣಕ್ಕೆ ಮಂಗಳೂರು ವಿವಿ ಲಿಂಕ್ ಇದೆ ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ ಗುರುವಾರದಿಂದ ಶುಕ್ರವಾರ ಬೆಳಗ್ಗೆವರೆಗೆ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿ, ಬ್ಯಾಂಕ್‌ಗಳಲ್ಲಿ ಪರಿಶೀಲನೆ ನಡೆಸಿ, ಕೋಚಿಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಣಾಜೆಯ ಮಂಗಳೂರು ವಿವಿಯಲ್ಲಿ ಕಳೆದ 6 ತಿಂಗಳ ಹಿಂದೆ ನಡೆದಿದ್ದ ನೇಮಕಾತಿ ಪ್ರಕ್ರಿಯೆಯ ಪ್ರಶ್ನೆಪತ್ರಿಕೆ ಸಿದ್ದವಾಗಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿಯನ್ನು ಮಂಗಳೂರು ವಿವಿ ಹೊತ್ತುಕೊಂಡಿತ್ತು. ಸದ್ಯ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸುತ್ತಿರುವ ಇ.ಡಿ. ಅಧಿಕಾರಿಗಳು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೋಚಿಮುಲ್ ಅವ್ಯವಹಾರ: ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ದಾಳಿ

ರಾಜುಕೃಷ್ಣ ಅವರು ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದರು. ಅಭ್ಯರ್ಥಿಗಳಿಗೆ ಪರಿಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಲಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ತಿಂಗಳ ಹಿಂದೆಯೇ ವಿವಿ ಪರೀಕ್ಷಾಂಗ ಕುಲಸಚಿವರಿಗೆ ಇ.ಡಿ. ನೊಟೀಸ್ ಜಾರಿ ಮಾಡಿತ್ತು. ವಿವಿ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರತಿ ಪ್ರಶ್ನೆ ಪತ್ರಿಕೆಯನ್ನು ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡಿರುವ ಅನುಮಾನ ವ್ಯಕ್ತವಾಗಿದೆ. ವಿವಿ ಅಧಿಕಾರಿಗಳ ಇ-ಮೇಲ್, ದೂರವಾಣಿ, ಬ್ಯಾಂಕಿಂಗ್ ವ್ಯವಹಾರ ಪರಿಶೀಲನೆ ನಡೆಸಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್