AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮಳಲಿ ಮಸೀದಿ ಕೇಸ್​ಗೆ ವಕ್ಫ್ ಬೋರ್ಡ್ ಎಂಟ್ರಿ ಆಗುತ್ತೆ: ಜಿಲ್ಲಾ ಸಮಿತಿ ಅಧ್ಯಕ್ಷ ಸ್ಪಷ್ಟನೆ

ಮಂಗಳೂರಿನಲ್ಲಿ ವಕ್ಫ್ ಜಿಲ್ಲಾ ಸಮಿತಿ ಅಧ್ಯಕ್ಷ ಬಿಎ ನಾಸೀರ್ ಲಕ್ಕಿಸ್ಟಾರ್ ಟಿವಿ9 ಜೊತೆ ಮಾತನಾಡಿದ್ದು, ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವಕ್ಫ್ ಬೋರ್ಡ್ ಸಹ ಎಂಟ್ರಿ ಆಗುತ್ತೆ. ಇನ್ನು ಸಂಪೂರ್ಣ ಪ್ರಕರಣ ವಕ್ಫ್ ಬೋರ್ಡ್ ಹಾಗೂ ಮಸೀದಿ ಕಮಿಟಿ ಮೂಲಕ ನಡೆಯಲಿದೆ ಎಂದು ಹೇಳಿದ್ದಾರೆ. ಹೈಕೋರ್ಟ್​ನಲ್ಲಿ ಯಾವುದೇ ವಿಜಯದ ತೀರ್ಪು ಬಂದಿಲ್ಲ. ಈ ತೀರ್ಪು ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆಗೆ ನೀಡಲಾಗಿದೆ ಎಂದು ಹೇಳಿದರು. 

ಮಂಗಳೂರು ಮಳಲಿ ಮಸೀದಿ ಕೇಸ್​ಗೆ ವಕ್ಫ್ ಬೋರ್ಡ್ ಎಂಟ್ರಿ ಆಗುತ್ತೆ: ಜಿಲ್ಲಾ ಸಮಿತಿ ಅಧ್ಯಕ್ಷ ಸ್ಪಷ್ಟನೆ
ವಕ್ಫ್ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಎ ನಾಸೀರ್ ಲಕ್ಕಿ ಸ್ಟಾರ್, ಮಳಲಿ ಮಸೀದಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 03, 2024 | 3:13 PM

Share

ಮಂಗಳೂರು, ಫೆಬ್ರುವರಿ 3: ಮಳಲಿ ಮಸೀದಿ (Malali Masjid) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವಕ್ಫ್ ಬೋರ್ಡ್ ಸಹ ಎಂಟ್ರಿ ಆಗುತ್ತೆ. ಇನ್ನು ಸಂಪೂರ್ಣ ಪ್ರಕರಣ ವಕ್ಫ್ ಬೋರ್ಡ್ ಹಾಗೂ ಮಸೀದಿ ಕಮಿಟಿ ಮೂಲಕ ನಡೆಯಲಿದೆ ಎಂದು ವಕ್ಫ್ ಜಿಲ್ಲಾ ಸಮಿತಿ ಅಧ್ಯಕ್ಷ ಬಿಎ ನಾಸೀರ್ ಲಕ್ಕಿಸ್ಟಾರ್ ಟಿವಿ9 ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕೆಲ ಮಾಧ್ಯಮದಲ್ಲಿ ಬರುತ್ತಿರುವ ಹಾಗೆ ಕೋರ್ಟ್​ನಲ್ಲಿ ಟ್ರಯಲ್ ನಡೆದೇ ಇಲ್ಲ. ಹೈಕೋರ್ಟ್​ನಲ್ಲಿ ಜನವರಿ 31 ರಂದು ಕೆಳ ನ್ಯಾಯಾಲಯದಲ್ಲಿ ಇದು ವಕ್ಫ್ ಆಸ್ತಿ ಹೌದಾ ಅಲ್ವಾ ಎಂದು ತನಿಖೆ ಮಾಡಿ ಎಂದು ಆದೇಶ ನೀಡಲಾಗಿದೆ. ಅದರಂತೆ ಇನ್ನು 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ‌ ಎಂದು ತಿಳಿಸಿದರು.

ಹೈಕೋರ್ಟ್​ನಲ್ಲಿ ಯಾವುದೇ ವಿಜಯದ ತೀರ್ಪು ಬಂದಿಲ್ಲ. ಈ ತೀರ್ಪು ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆಗೆ ನೀಡಲಾಗಿದೆ ಎಂದು ಹೇಳಿದರು.

ಮಸೀದಿಯಲ್ಲಿ ದೇವಾಲಯದ ಮಾದರಿ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಬಳಿಯಿರುವ ಮಳಲಿ ಗ್ರಾಮದಲ್ಲಿರುವ ಅಸ್ಸಾಯ್ಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ನವೀಕರಿಸಲಾಗಿದೆ. ಆ ವೇಳೆ ಇದು ಹಿಂದು ದೇವಾಲಯದ ಮಾದರಿಯಲ್ಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಏಪ್ರಿಲ್ 21 ರಂದು ವಿಶ್ವ ಹಿಂದು ಪರಿಷತ್ ಅಲ್ಲಿಗೆ ಭೇಟಿ ನೀಡಿದಾಗ ಮಸೀದಿಯ, ದರ್ಗಾದ ಹಿಂಭಾಗ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿತ್ತು.

ಇದನ್ನೂ ಓದಿ: ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ

ವಿಚಾರ ಜಿಲ್ಲಾಡಳಿತಕ್ಕೆ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಹಶಿಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ತಕ್ಷಣ ಕಾಮಗಾರಿ ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳದಲ್ಲಿ ಅಂದಿನಿಂದ ಒಂದು ಕೆ.ಎಸ್.ಆರ್.ಪಿ ತುಕಡಿಯನ್ನು ನಿಯೋಜಿ ಭದ್ರತೆ ನೀಡಲಾಗುತ್ತಿದೆ. ಈ ನಡುವೆ ಪುರಾತತ್ವ ಇಲಾಖೆ ಈ ಸ್ಥಳದ ಇತಿಹಾಸ ಹುಡುಕಲು ಆರಂಭಿಸಿತ್ತು. ಇತ್ತ ವಿಶ್ವ ಹಿಂದು ಪರಿಷತ್ ನ್ಯಾಯಾಲಯದ ಮೊರೆ ಹೋಗಿ ಈ ಕಾಮಗಾರಿಗೆ ತಡೆಯಾಜ್ಞೆ ತಂದಿದ್ದರು.

ಅದಾದ ಬಳಿಕ ವಿಶ್ವ ಹಿಂದು ಪರಿಷತ್ ಅಲ್ಲಿ ಅಷ್ಟಮಂಗಲ ಪ್ರಶ್ನೆ ಮಾಡಿಸುವ ನಿರ್ಧಾರ ಮಾಡಿತ್ತು. ಈ ಬಗ್ಗೆ ಇಂದು ಮಳಲಿಯಲ್ಲಿ ಒಂದು ಸಭೆ ಮಾಡಲಾಯ್ತು. ಸಭೆಯಲ್ಲಿ ಅಷ್ಟಮಂಗಳ ಪ್ರಶ್ನೆಗೂ ಮುನ್ನ ತಾಂಬೂಲ ಪ್ರಶ್ನೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: ಮಂಗಳೂರು ಮಳಲಿ ಮಸೀದಿ ವಿವಾದ: ವಿಎಚ್​ಪಿ ಅರ್ಜಿ ವಿಚಾರಣೆಗೆ ಅಂಗೀಕಾರ, ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

ಮಸೀದಿ ಜಾಗದಲ್ಲಿ ಶಿವ ದೇವಾಲಯ ಇದ್ದ ಬಗ್ಗೆ ಹಿಂದೂ ಸಂಘಟನೆಗಳು ವಾದ ಮಾಡಲಾಗಿತ್ತು. ತಂಬೂಲ ಪ್ರಶ್ನೆಯಲ್ಲಿ ಹಿಂದು ದೇವಲಾಯ ಎಂದು ಕಂಡು ಬಂದರೆ ಅದಕ್ಕೆ ಒಂದು ಸಮಿತಿ ಮಾಡಲಾಗುತ್ತದೆ. ಅಷ್ಟಮಂಗಳ ಪ್ರಶ್ನೆ ಬಳಿಕ ದಾಖಲೆ ಸಹಿತ ಕಾನೂನು ಹೋರಾಟಕ್ಕೆ ವಿಎಚ್‌ಪಿ ಯೋಜನೆ ಮಾಡಿತ್ತು. ಇನ್ನು ಮಸೀದಿ ಆಡಳಿತ ಮಂಡಳಿ ಮತ್ತು ಸ್ಥಳೀಯ ಮುಸ್ಲಿಮರು ಯಾವುದೇ ರೀತಿ ಪ್ರತಿಕ್ರಿಯೆ ನೀಡಲು ಮುಂದಾಗಿರಲಿಲ್ಲ. ಈ ಬಗ್ಗೆ ಕಾನೂನು ಮೊರೆ ಹೋಗಿ ನಮ್ಮ ಮಸೀದಿ ಉಳಿಸಿಕೊಳ್ಳುತ್ತೇವೆ ಅಂತಾ ಅವರು ಮೌನಕ್ಕೆ ಶರಣಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ